Please assign a menu to the primary menu location under menu

CrimeNEWSನಮ್ಮಜಿಲ್ಲೆ

ಮಳವಳ್ಳಿ ಬಸ್‌ ನಿಲ್ದಾಣದಲ್ಲಿ 7 ತಿಂಗಳ ಮಗು ಎತ್ತಿಕೊಂಡು ಮಹಿಳೆ ಪರಾರಿ

ವಿಜಯಪಥ ಸಮಗ್ರ ಸುದ್ದಿ

ಮಳವಳ್ಳಿ: ಪ್ರಯಾಣಿಕರಿಂದ ತುಂಬಿದ್ದ ಬಸ್​ನಲ್ಲಿ ಸೀಟು ಸಿಗದೆ ಎತ್ತಿಕೊಳ್ಳಲು ನೀಡಿದ್ದ ಮಗುವನ್ನು ಅಪರಿಚಿತೆ ಕದ್ದು ಪರಾರಿಯಾದ ಘಟನೆಯೊಂದು ಮಂಡ್ಯ ಜಿಲ್ಲೆಯ ಮಳವಳ್ಳಿ ಬಸ್‌ ನಿಲ್ದಾಣದಲ್ಲಿ ನಡೆದಿದೆ.

ತಿ. ನರಸೀಪುರ ತಾಲೂಕಿನ ವಡ್ಡರಕೊಪ್ಪಲು ನಿವಾಸಿ ಸವಿತಾ ಮಗು ಕಳೆದುಕೊಂಡ ತಾಯಿ. ಚನ್ನಪಟ್ಟಣದ ಬಸ್ ನಿಲ್ದಾಣದಲ್ಲಿ ಸವಿತಾ ಮಗುವಿನ ಸಮೇತ ಬಸ್ ಹತ್ತಿದ್ದಾರೆ.  ಈ ವೇಳೆ ಬಸ್‌ನಲ್ಲಿ ಜನರು ತುಂಬಿದ್ದ ಕಾರಣ ಸೀಟ್‌ನಲ್ಲಿ ಕೂತಿದ್ದ ಅಪರಿಚಿತ ಮಹಿಳೆಯೊಬ್ಬರ ಕೈಗೆ ಸವಿತಾ ಮಗು ನೀಡಿದ್ದಾರೆ.

ಆದರೆ ಮಳವಳ್ಳಿ ಬಸ್ ನಿಲ್ದಾಣದಲ್ಲಿ ತಾನೂ ಇಳಿಯುವುದಾಗಿ ಹೇಳಿ ಕ್ಷಣಾರ್ಧದಲ್ಲಿ ಮಗು ಜೊತೆ  ಪರಾರಿಯಾಗಿದ್ದಾಳೆ.

ಇತ್ತ ಸವಿತಾ ಲಗೇಜ್ ಹಿಡಿದುಕೊಂಡು ಬಸ್‌ನಿಂದ ಇಳಿಯುವಷ್ಟರಲ್ಲಿ ಮಗು ಸಮೇತ ಅಪರಿಚಿತ ಮಹಿಳೆ ಎಸ್ಕೇಪ್ ಆಗಿದ್ದು, ಸದ್ಯ 7 ತಿಂಗಳ ಗಂಡು ಮಗು ಕಳೆದುಕೊಂಡು ತಾಯಿ ಕಂಗಾಲಾಗಿದ್ದಾರೆ.

ಈ ಸಂಬಂಧ ಮಳವಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗುವಿನ ಕಳ್ಳಿಯನ್ನು ಶೋಧದಲ್ಲಿ ಪೊಲೀಸರು ತೊಡಗಿದ್ದಾರೆ.

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ