CrimeNEWSನಮ್ಮಜಿಲ್ಲೆ

ಬನ್ನೂರು: ಪ್ರೀತಿಸಿದ ಯುವತಿಯ ಸಹವಾಸಕ್ಕೆ ಹೋಗದಂತೆ ಬೇದರಿಕೆ – ಮರ್ಯಾದೆಗೆ ಅಂಜಿ ಯುವಕ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ಪ್ರೀತಿಸಿದ ಯುವತಿಯ ಸಹವಾಸಕ್ಕೆ ಹೋದರೆ ನಿಮ್ಮ ಮಗನನ್ನು ಸುಮ್ಮನೇ ಬಿಡುವುದಿಲ್ಲ ಎಂದು ಮನೆಬಳಿ ಹೋಗಿ ಪಾಲಕರ ಜತೆ ಗಲಾಟೆ ಮಾಡಿ ಅವಾಚ್ಯವಾಗಿ ನಿಂದಿಸಿದ್ದರಿಂದ ಮರ್ಯಾದೆಗೆ ಅಂಜಿ ನಂದಿನಿ ಪಾರ್ಲರ್‌ ನಡೆಸುತ್ತಿದ್ದ ಯುವಕನೊಬ್ಬ (ಮಾ.13) ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇತುಪುರದಲ್ಲಿ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬನ್ನೂರು ಹೋಬಳಿಯ ಕೇತುಪುರದ ನಿವಾಸಿ ಯಾಚೇನಹಳ್ಳಿಯಲ್ಲಿ ನಂದಿನಿ ಪಾರ್ಲರ್‌ ನಡೆಸುತ್ತಿದ್ದ ಪ್ರವೀಣ (23) ಎಂಬ ಯುವಕನೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.

ತನ್ನ ಗ್ರಾಮದ ಸಮೀಪವಿರುವ ಕಗ್ಗಲೀಪುರದ ಯುವತಿಯೊಬ್ಬಳನ್ನು ಹಲವಾರು ವರ್ಷಗಳಿಂದ ಪ್ರೀತಿಸುತ್ತಿದ್ದ ಪ್ರವೀಣ ಮದುವೆಯಾಗುವುದಾಗಿ ಹೇಳಿದ್ದರಂತೆ. ಆದರೆ, ಮಂಗಳವಾರ ರಾತ್ರಿ ವಿಷಯ ತಿಳಿದ ಯುವಕರಿದ್ದ ಗುಂಪೊಂದು ಪ್ರವೀನ್‌ ಮನೆ ಬಳಿ ಬಂದು ಗಲಾಟೆ ಮಾಡಿದೆ. ಅಲ್ಲದೆ ಯಾಚೇನಹಳ್ಳಿಯಲ್ಲಿರುವ ಯುವಕನ ಭಾವನ ಬಳಿಯೂ ಕೂಡ ಈ ಗುಂಪು ಗಲಾಟೆ ಮಾಡಿ ಬಂದಿತ್ತು ಎನ್ನಲಾಗಿದೆ.

ಇನ್ನು ನನ್ನಿಂದ ಊರಿನಲ್ಲಿ (ಕೇತುಪುರದಲ್ಲಿ) ಅಪ್ಪ ಅಮ್ಮನಿಗೆ ಅವಮಾನವಾಯಿತು. ಇದಿಷ್ಟೇ ಅಲ್ಲದೆ ಭಾವನಿಗೂ ಅವಮಾನವಾಯಿತು ಎಂದು ನೊಂದುಕೊಂಡ ಪ್ರವೀಣ್‌ ಇಂದು ಬೆಳಗ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನು ಈತನ ಆತ್ಮಹತ್ಯೆಗೆ ಪೊಲೀಸ್‌ ಸಿಬ್ಬಂದಿ ಒಬ್ಬರೂ ಕಾರಣ ಎಂದು ಆರೋಪ ಕೇಳಿ ಬಂದಿದೆ. ಪೊಲೀಸ್‌ ಸಿಬ್ಬಂದಿ ಪ್ರದೀಪ್‌ ಕಾಳೇಗೌಡ ಎಂಬುವರು ತನ್ನ ಮೊಬೈಲ್‌ ಫೋನ್‌ ಮೂಲಕ ಪ್ರವೀಣ್‌ ಮತ್ತು ಈತನ ಭಾವ ಹೊನ್ನೇಗೌಡ ಅವರಿಗೂ ಕರೆ ಮಾಡಿ ಬೆದರಿಕೆ ಹಾಕಿದ್ದರು. ಅವರು ಫೋನ್‌ ಮಾಡಿ ಬದರಿಕೆ ಹಾಕಿರುವ ಆಡಿಯೋ ಕೂಡ ಇದೆ ಎನ್ನಲಾಗಿದೆ.

ಘಟನೆಯ ವಿಷಯ ತಿಳಿಯುತ್ತದ್ದಂತೆ ಬನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬನ್ನೂರಿನ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಇನ್ನು ಘಟನೆ ಸಂಬಂಧ ದೂರು ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ