CrimeNEWSನಮ್ಮಜಿಲ್ಲೆ

ಬನ್ನೂರು: ಪ್ರೀತಿಸಿದ ಯುವತಿಯ ಸಹವಾಸಕ್ಕೆ ಹೋಗದಂತೆ ಬೇದರಿಕೆ – ಮರ್ಯಾದೆಗೆ ಅಂಜಿ ಯುವಕ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ಪ್ರೀತಿಸಿದ ಯುವತಿಯ ಸಹವಾಸಕ್ಕೆ ಹೋದರೆ ನಿಮ್ಮ ಮಗನನ್ನು ಸುಮ್ಮನೇ ಬಿಡುವುದಿಲ್ಲ ಎಂದು ಮನೆಬಳಿ ಹೋಗಿ ಪಾಲಕರ ಜತೆ ಗಲಾಟೆ ಮಾಡಿ ಅವಾಚ್ಯವಾಗಿ ನಿಂದಿಸಿದ್ದರಿಂದ ಮರ್ಯಾದೆಗೆ ಅಂಜಿ ನಂದಿನಿ ಪಾರ್ಲರ್‌ ನಡೆಸುತ್ತಿದ್ದ ಯುವಕನೊಬ್ಬ (ಮಾ.13) ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇತುಪುರದಲ್ಲಿ ನಡೆದಿದೆ.

ಬನ್ನೂರು ಹೋಬಳಿಯ ಕೇತುಪುರದ ನಿವಾಸಿ ಯಾಚೇನಹಳ್ಳಿಯಲ್ಲಿ ನಂದಿನಿ ಪಾರ್ಲರ್‌ ನಡೆಸುತ್ತಿದ್ದ ಪ್ರವೀಣ (23) ಎಂಬ ಯುವಕನೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.

ತನ್ನ ಗ್ರಾಮದ ಸಮೀಪವಿರುವ ಕಗ್ಗಲೀಪುರದ ಯುವತಿಯೊಬ್ಬಳನ್ನು ಹಲವಾರು ವರ್ಷಗಳಿಂದ ಪ್ರೀತಿಸುತ್ತಿದ್ದ ಪ್ರವೀಣ ಮದುವೆಯಾಗುವುದಾಗಿ ಹೇಳಿದ್ದರಂತೆ. ಆದರೆ, ಮಂಗಳವಾರ ರಾತ್ರಿ ವಿಷಯ ತಿಳಿದ ಯುವಕರಿದ್ದ ಗುಂಪೊಂದು ಪ್ರವೀನ್‌ ಮನೆ ಬಳಿ ಬಂದು ಗಲಾಟೆ ಮಾಡಿದೆ. ಅಲ್ಲದೆ ಯಾಚೇನಹಳ್ಳಿಯಲ್ಲಿರುವ ಯುವಕನ ಭಾವನ ಬಳಿಯೂ ಕೂಡ ಈ ಗುಂಪು ಗಲಾಟೆ ಮಾಡಿ ಬಂದಿತ್ತು ಎನ್ನಲಾಗಿದೆ.

ಇನ್ನು ನನ್ನಿಂದ ಊರಿನಲ್ಲಿ (ಕೇತುಪುರದಲ್ಲಿ) ಅಪ್ಪ ಅಮ್ಮನಿಗೆ ಅವಮಾನವಾಯಿತು. ಇದಿಷ್ಟೇ ಅಲ್ಲದೆ ಭಾವನಿಗೂ ಅವಮಾನವಾಯಿತು ಎಂದು ನೊಂದುಕೊಂಡ ಪ್ರವೀಣ್‌ ಇಂದು ಬೆಳಗ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನು ಈತನ ಆತ್ಮಹತ್ಯೆಗೆ ಪೊಲೀಸ್‌ ಸಿಬ್ಬಂದಿ ಒಬ್ಬರೂ ಕಾರಣ ಎಂದು ಆರೋಪ ಕೇಳಿ ಬಂದಿದೆ. ಪೊಲೀಸ್‌ ಸಿಬ್ಬಂದಿ ಪ್ರದೀಪ್‌ ಕಾಳೇಗೌಡ ಎಂಬುವರು ತನ್ನ ಮೊಬೈಲ್‌ ಫೋನ್‌ ಮೂಲಕ ಪ್ರವೀಣ್‌ ಮತ್ತು ಈತನ ಭಾವ ಹೊನ್ನೇಗೌಡ ಅವರಿಗೂ ಕರೆ ಮಾಡಿ ಬೆದರಿಕೆ ಹಾಕಿದ್ದರು. ಅವರು ಫೋನ್‌ ಮಾಡಿ ಬದರಿಕೆ ಹಾಕಿರುವ ಆಡಿಯೋ ಕೂಡ ಇದೆ ಎನ್ನಲಾಗಿದೆ.

ಘಟನೆಯ ವಿಷಯ ತಿಳಿಯುತ್ತದ್ದಂತೆ ಬನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬನ್ನೂರಿನ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಇನ್ನು ಘಟನೆ ಸಂಬಂಧ ದೂರು ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ