CrimeNEWSನಮ್ಮಜಿಲ್ಲೆಬೆಂಗಳೂರು

ಹೊಸ ವರ್ಷ, ಜನುಮ ದಿನ ಆಚರಿಸಿಕೊಳ್ಳಲು ಹೋದ ಯುವಕ ಸ್ನೇಹಿತರಿಂದಲೇ ಹೆಣವಾದ?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗೆಳೆಯರೊಂದಿಗೆ ಹೊಸ ವರ್ಷ ಸಂಭ್ರಮವನ್ನು ಹಂಚಿಕೊಳ್ಳಲು ಹೋಗಿದ್ದ ಯುವಕ ಕ್ಷುಲ್ಲಕ ಕಾರಣಕ್ಕಾಗಿ ಗೆಳೆಯರ ನಡುವೆ ನಡೆದ ಗಲಾಟೆಯಲ್ಲಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹನುಮಂತ ನಗರದ 80 ಅಡಿ ರಸ್ತೆಯಲ್ಲಿ ರಾತ್ರಿ 1 ಗಂಟೆ ಸುಮಾರಿಗೆ ವಿಜಯ್ (21) ಎಂಬಾತ ರಕ್ತದ ಮಡುವಿನಲ್ಲಿ ಒದ್ದಾಡಿ ಅಸುನೀಗಿದ್ದಾನೆ. ಸ್ನೇಹಿತರಿಂದಲೇ ಈತನ ಕೊಲೆಯಾಗಿದೆ ಎಂದು ತಿಳಿದುಬಂದಿದೆ. ಕುಡಿದ ಮತ್ತಿನಲ್ಲಿ ಆಟೋದಲ್ಲಿ ಬಂದು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗುತ್ತಿದೆ.

ಇತ್ತ ಮಗ ಹೊಸ ಬಟ್ಟೆ ಧರಿಸಿಕೊಂಡು ಮನೆಯಿಂದ ಬರ್ತ್ ಡೇ ಎಂದು ಹೇಳಿ ಹೋಗಿದ್ದ. ತಡರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಈನಡುವೆ ರಾತ್ರಿ ಪೊಲೀಸರು ನಿಮ್ಮ ಮಗ ಕೊಲೆ ಆಗಿದ್ದಾನೆ ಎಂದು ಫೋನ್ ಮಾಡಿದ್ದರು ಎಂದು ವಿಜಯ್‌ ಅಮ್ಮ ಗೋಳಾಡುತ್ತಿದ್ದರು.

ನ್ಯೂ ಇಯರ್​ ರಾತ್ರಿಯೇ ಈ ಭೀಕರ ಹತ್ಯೆ ನಡೆದಿದ್ದು, ಮಾರಕಾಸ್ತ್ರಗಳಿಂದ ಇರಿದು ವಿಜಯ್‌ಅನ್ನು ಕೊಲೆ ಮಾಡಲಾಗಿದೆ. ಹತ್ಯೆಯಾದ ವಿಜಯ್ ಭಾನುವಾರ ಸಂಜೆ ಗೆಳೆಯರ ಜೊತೆ ಬರ್ತಡೇ ಹಾಗೂ ನ್ಯೂ ಇಯರ್ ಸೆಲೆಬ್ರೇಷನ್​ಗೆ ಹೋಗಿದ್ದ. ಪಾರ್ಟಿ ಮುಗಿಸಿಕೊಂಡು ಮನೆಗೆ ಹೋಗುವಾಗ ವಿಜಯ್ ಹಾಗೂ ಗೆಳೆಯರ ಮಧ್ಯೆ ಜಗಳ ಶುರುವಾಗಿದೆ.

ಈ ವೇಳೇ ಆಟೋದಲ್ಲಿ ಹೋಗುವಾಗ ವಿಜಯ್ ಹಾಗೂ ಸ್ನೇಹಿತರು ಜಗಳ ಮಾಡಿಕೊಂಡಿದ್ದು, ಸ್ನೇಹಿತರಲ್ಲೇ ಒಬ್ಬ ವಿಜಯ್ ಎದೆಗೆ ಚಾಕು ಇರಿದಿದ್ದಾನೆ. ಚಾಕು ಇರಿದ ಬಳಿಕ ಶ್ರೀನಿವಾಸ್ ನಗರ ಬಸ್ ನಿಲ್ದಾಣದ ಮುಂದೆ ವಿಜಯ್​ನನ್ನು ಬಿಸಾಕಿ ಪರಾರಿಯಾಗಿದ್ದಾರೆ. ಇರಿತಕ್ಕೊಳಗಾದ ವಿಜಯ್‌ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಅಸುನೀಗಿದ್ದಾನೆ.

ಮಗ ಹತ್ಯೆಯಾಗಿರುವ ವಿಷಯ ತಿಳಿಯುತ್ತಿದ್ದಂತೆ ವಿಜಯ್ ತಾಯಿ ಕಣ್ಣೀರು ಇಟ್ಟಿದ್ದಾರೆ. ನನಗೆ ಒಬ್ಬನೇ ಮಗ. ಯಾರು ಕೊಲೆ ಮಾಡಿದ್ದಾರೆ ಎಂದು ಗೊತ್ತಿಲ್ಲ. ನನ್ನ ಮಗ ಕೂಲಿ ಕೆಲಸ ಮಾಡುತ್ತಿದ್ದ. ಮಗ ಇಲ್ಲ ಅಂದರೆ ನಮಗೆ ಯಾರು ಗತಿ. ಮನೆಯಿಂದ ಹೊರಡುವಾಗ 50 ರೂಪಾಯಿ ತೆಗೆದುಕೊಂಡು ಹೋಗಿದ್ದ. ಅಲ್ಲಿ ಹೋದಾಗ ಏನಾಯ್ತೋ ಗೊತ್ತಿಲ್ಲ ಎಂದು ಕಣ್ಣೀರು ಇಟ್ಟಿದ್ದಾರೆ.

ಹತ್ಯೆ ಸಂಬಂಧ ಹನುಮಂತ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಹತ್ಯೆಕೋರರ ಪತ್ತೆಗೆ ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...