NEWSಆರೋಗ್ಯನಮ್ಮರಾಜ್ಯ

ವ್ಯವಸ್ಥಿತ, ಪಾರದರ್ಶಕ ʻನಮ್ಮ ಕ್ಲಿನಿಕ್‌ʼ ನಿರ್ಮಾಣಕ್ಕೆ ಸಲಹೆ ನೀಡಲು ಎಎಪಿ ಸಿದ್ಧ: ಜಗದೀಶ್‌ ವಿ ಸದಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರವು ʻನಮ್ಮ ಕ್ಲಿನಿಕ್‌ʼ ಹೆಸರಿನಲ್ಲಿ ಜನರ ತೆರಿಗೆ ಹಣವನ್ನು ಲೂಟಿ ಮಾಡುತ್ತಿದ್ದು, ದೆಹಲಿಯ ಮೊಹಲ್ಲಾ ಕ್ಲಿನಿಕ್‌ನಂತೆ ಪಾರದರ್ಶಕ ಹಾಗೂ ವ್ಯವಸ್ಥಿತ ಆರೋಗ್ಯ ಸೇವೆ ಒದಗಿಸಲು ಅಗತ್ಯ ಸಲಹೆ ನೀಡಲು ಆಮ್‌ ಆದ್ಮಿ ಪಾರ್ಟಿ ಸಿದ್ಧವಿದೆ ಎಂದು ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ. ಸದಂ ಹೇಳಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಇರುವಾಗ ರಾಜ್ಯ ಬಿಜೆಪಿ ಸರ್ಕಾರವು ನಮ್ಮ ಕ್ಲಿನಿಕ್‌ ನಿರ್ಮಿಸುತ್ತಿದೆ. ಯೋಜನೆಯನ್ನು ಸರ್ಕಾರ ಜಾರಿಗೆ ತರುತ್ತಿರುವ ವಿಧಾನವನ್ನು ಗಮನಿಸಿದರೆ ಬ್ರಹ್ಮಾಂಡ ಭ್ರಷ್ಟಾಚಾರವಾಗುತ್ತಿರುವುದು ಸ್ಪಷ್ಟವಾಗುತ್ತಿದೆ ಎಂದು ಆರೋಪಿಸಿದರು.

ಇನ್ನು ದೆಹಲಿಯಲ್ಲಿ ಕೇವಲ 20 ಲಕ್ಷ ರೂ.ಗಳಲ್ಲಿ ವ್ಯವಸ್ಥಿತವಾಗಿ ನಿರ್ಮಾಣವಾದ ಮೊಹಲ್ಲಾ ಕ್ಲಿನಿಕ್‌ಗಳನ್ನು ಕರ್ನಾಟಕದಲ್ಲಿ ಬೇರೆ ಹೆಸರಿನಲ್ಲಿ ನಿರ್ಮಿಸಲು ಬಿಜೆಪಿ ಸರ್ಕಾರವು ತಲಾ ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ ಎಂದು ದೂರಿದರು.

ಭ್ರಷ್ಟ ಬಿಜೆಪಿ ಸರ್ಕಾರವು ಸಾಮಾನ್ಯ ಜನರಿಗೆ ಆರೋಗ್ಯ ಸೇವೆ ಒದಗಿಸುವ ಯಾವುದೇ ಸದುದ್ದೇಶವಿಲ್ಲದೇ, ಕೇವಲ ಅಕ್ರಮಕ್ಕಾಗಿ ಹಾಗೂ ಎಲೆಕ್ಷನ್‌ ಗಿಮಿಕ್‌ಗಾಗಿ ನಮ್ಮ ಕ್ಲಿನಿಕ್‌ಗಳನ್ನು ನಿರ್ಮಿಸುತ್ತಿದೆ. ಇಂದಿರಾ ಕ್ಯಾಂಟೀನ್‌ನಂತೆ ಇದು ಕೂಡ ಪಾರದರ್ಶಕತೆಗೆ ವಿರುದ್ಧವಾಗಿ ಸಾಗುತ್ತಿದೆ ಎಂದು ಹೇಳಿದರು.

ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಎಎಪಿ ಸರ್ಕಾರವು 500ಕ್ಕೂ ಹೆಚ್ಚು ಮೊಹಲ್ಲಾ ಕ್ಲಿನಿಕ್‌ಗಳನ್ನು ತೆರೆದಿದೆ. ಕೆಲವು ತಿಂಗಳ ಹಿಂದೆಯಷ್ಟೇ ಅಧಿಕಾರಕ್ಕೆ ಬಂದ ಭಗವಂತ್‌ ಮಾನ್‌ ನೇತೃತ್ವದ ಪಂಜಾಬ್‌ ಸರ್ಕಾರವು 100 ಮೊಹಲ್ಲಾ ಕ್ಲಿನಿಕ್‌ಗಳನ್ನು ಲೋಕಾರ್ಪಾಣೆ ಮಾಡಿದೆ. ಅವುಗಳಲ್ಲಿ ಅತ್ಯಾಧುನಿಕ ಆರೋಗ್ಯ ಸೇವೆಗಳು ಸೇರಿದಂತೆ 200ಕ್ಕೂ ಹೆಚ್ಚು ಸೇವೆಗಳು ಉಚಿತವಾಗಿ ದೊರೆಯುತ್ತಿದೆ ಎಂದು ವಿವರಿಸಿದರು.

ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸರ್ಕಾರ ಬಯಸಿದರೆ, ಕರ್ನಾಟಕದಲ್ಲೂ ಅಂತಹ ಕ್ಲಿನಿಕ್‌ಗಳನ್ನು ಉತ್ತಮ ಗುಣಮಟ್ಟದಲ್ಲಿ, ಸಂಪೂರ್ಣ ಪಾರದರ್ಶಕವಾಗಿ ಹಾಗೂ ಕಡಿಮೆ ವೆಚ್ಚದಲ್ಲಿ ತೆರೆಯಲು ಆಮ್‌ ಆದ್ಮಿ ಪಾರ್ಟಿಯು ರೂಪುರೇಷೆ ತಯಾರಿಸಿಕೊಡಲಿದೆ ಎಂದು ಜಗದೀಶ್‌ ವಿ ಸದಂ ಹೇಳಿದರು.

Leave a Reply

error: Content is protected !!
LATEST
ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ !