NEWSದೇಶ-ವಿದೇಶ

ಕೋವಿಶೀಲ್ಡ್ ಲಸಿಕೆಯಿಂದ ಶೇ.70ರಷ್ಟು ಕೊರೊನಾ ಸೋಂಕು ದೂರ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ವಿಶ್ವದ ಅತಿದೊಡ್ಡ ಲಸಿಕೆಗಳನ್ನು ತಯಾರಿಸುವ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಅಸ್ಟ್ರಾಜೆನೆಕಾ ಪಿಎಲ್‌ಸಿಯ ಕೋವಿಡ್ -19 ಲಸಿಕೆಯನ್ನು ಇತರ ದೇಶಗಳಿಗೆ ವಿತರಿಸುವ ಮೊದಲು ಭಾರತೀಯರಿಗೆ ಪೂರೈಸುವತ್ತ ಗಮನ ಹರಿಸಲಿದೆ ಎಂದು ಎಸ್‌ಐಐ ಮುಖ್ಯ ಕಾರ್ಯನಿರ್ವಾಹಕ ಆದಾರ್ ಪೂನವಾಲ್ಲಾ ತಿಳಿಸಿದ್ದಾರೆ.

131 ಕೋವಿಡ್ -19 ಕೊರೊನಾ ರೋಗಿಗಳ ಮೇಲೆ ಲಸಿಕೆಯನ್ನು ಪ್ರಯೋಗಿಸಿದ್ದು ಅವರಲ್ಲಿ ಯಾವುದಕ್ಕೂ ಗಂಭೀರವಾದ ಕಾಯಿಲೆ ಅಥವಾ ಆಸ್ಪತ್ರೆಯ ಅಗತ್ಯ ಕಾಣಿಸಲಿಲ್ಲ. ಜತೆಗೆ ಯಾವುದೇ ರೀತಿಯ ದುಷ್ಪರಿಣಾಮ ಬೀರಿಲ್ಲ. ಇನ್ನು ಕೊರೊನಾ ರೋಗಿಯಲ್ಲಿ ಶೇ.70ರಷ್ಟು ಗುಣಮುಖ ಕಂಡುಬಂದಿದ್ದು, ಇದರಿಂದ ಇದು ಸೋಂಕನ್ನು ಶೇ.99ರಷ್ಟು ನಿಯಂತ್ರಿಸಲಿದೆ ಎಂದು ಹೇಳಿದರು.

ಈ ಲಸಿಕೆಯನ್ನು 2-8 ಡಿಗ್ರಿ ಸೆಲ್ಸಿಯಸ್‌ನಲ್ಲಿ ಸಂಗ್ರಹಿಸಬಹುದಾಗಿದೆ. ಅಡೆನೊವೈರಸ್‌ನಿಂದ ಅಭಿವೃದ್ಧಿಪಡಿಸಿದ ಲಸಿಕೆ ಜೊತೆ ಪುಣೆ ಮೂಲದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದನಾ ಪಾಲುದಾರನಾಗಿದ್ದು ಕೋವಿಶೀಲ್ಡ್ ಭಾರತದಲ್ಲಿ ಮೊದಲ ಕೋವಿಡ್ -19 ಲಸಿಕೆ ಯಾಗುವ ಸಾಧ್ಯತೆಯಿದೆ ಎಂದರು.

“ಈ ಲಸಿಕೆ ಪರಿಣಾಮಕಾರಿ ಮತ್ತು ಸುರಕ್ಷತೆಯು ದೃಷ್ಟಿಯಿಂದ ಕೋವಿಡ್ -19 ವಿರುದ್ಧ ಹೆಚ್ಚು ಪರಿಣಾಮಕಾರಿಯಾಗಲಿದೆ. ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯ ಮೇಲೆ ತಕ್ಷಣದ ಪರಿಣಾಮ ಬೀರುತ್ತದೆ ಎಂದು ಖಚಿತಪಡಿಸುತ್ತದೆ ಎಂದು ಸಿಇಒ ತಿಳಿಸಿದ್ದಾರೆ.

ಇನ್ನು ಭಾರತ ಸರ್ಕಾರಕ್ಕೆ ಪ್ರತಿ ಡೋಸ್‌ಗೆ ಸುಮಾರು 250 ರೂ. (3 ಡಾಲರ್‌)ಗೆ ಕೋವಿಶೀಲ್ಡ್ ಲಸಿಕೆಯನ್ನು ಮಾರಾಟ ಮಾಡಲು ನಿರ್ಧಿಸಿದ್ದು, ಔಷಧ ಅಂಗಡಿಯಲ್ಲಿ 1 ಸಾವಿರ ರೂ. ಆಗಲಿದೆ ಎಂದು ಹೇಳಲಾಗಿದೆ. ಆದರೆ ಈ ಔಷಧ ಮಾರಾಟಕ್ಕೆ ಡಿಸೆಂಬರ್‌ನಲ್ಲಿ ಅನುಮತಿ ಸಿಗುವ ಸಾಧ್ಯತೆ ಇದ್ದು, ಜನವರಿಯಿಂದ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ