CrimeNEWSಸಿನಿಪಥ

ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಗುರುವಾರ ತಡರಾತ್ರಿ ಮನೆಗೆ ನುಗ್ಗಿ ನಟನಿಗೆ ಇರಿದಿದ್ದ ಹಂತಕನ ಹೆಡೆಮುರಿ ಕಟ್ಟಿರುವ ಪೊಲೀಸರು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ.

ಸೈಫ್ ಅಲಿ ಖಾನ್‌ಗೆ ಚಾಕುವಿನಿಂದ ಇರಿದಿದ್ದ ದಾಳಿಕೋರನನ್ನು ನಿನ್ನೆ (ಜ.16) ತಡರಾತ್ರಿ ಮುಂಬೈ ಪೊಲೀಸರು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಸೈಫ್‌ ಮೇಲಿನ ಅಟ್ಯಾಕ್‌ ಬೆನ್ನಲ್ಲೇ ದಾಳಿಕೋರನ ಹುಡುಕಲು ಪೋಲಿಸರು 20 ತಂಡ ರಚಿಸಿ ಬಲೆ ಬೀಸಿದ್ದರು.

ಕೊನೆಗೂ ದಾಳಿಕೋರ ಪೊಲೀಸರು ಬೀಸಿದ ಬಲೆಗೆ ಸಿಕ್ಕಿಕೊಂಡಿದ್ದು, ಈಗ ಈತ ದರೋಡೆ ಮಾಡಲು ಈ ಕೃತ್ಯ ಎಸಗಿದ್ದ ಅಥವಾ ಕೊಲೆ ಮಾಡುವ ಹುನ್ನಾರ ಇತ್ತಾ ಎಂಬುದನ್ನು ತಿಳಿಯಲು ವಿವಿಧ ರೀತಿಯಲ್ಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇನ್ನು ಬಂಧಿತನಾಗಿರುವ ಆರೋಪಿ ಈ ಹಿಂದೆ ಶಾರುಖ್ ಖಾನ್ ಮನೆ ಮುಂದೆ ಕೂಡ ಕಾಣಿಸಿಕೊಂಡಿರೋದು ಗೊತ್ತಾಗಿದೆ. ನಿನ್ನೆ ಶಂಕಿತ ಆರೋಪಿಯ ಫೋಟೋ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಮುಂಬೈ ಪೊಲೀಸರೇ ಬಹಿರಂಗಪಡಿಸಿದ್ದರು.

ಟೀ-ಶರ್ಟ್, ಜೀನ್ಸ್ ಪ್ಯಾಂಟ್ ಧರಿಸಿರುವ ಶಂಕಿತ, ಬ್ಯಾಗ್‌ವೊಂದನ್ನು ಹಾಕಿಕೊಂಡಿದ್ದು, ಕಿತ್ತಳೆ ಬಣ್ಣದ ಸ್ಕಾಫ್ ಧರಿಸಿ, ಮೆಟ್ಟಿಲುಗಳಿಂದ ಇಳಿದು ಹೋಗುತ್ತಿರುವಾಗ ಸಿಟಿಟಿವಿ ಕ್ಯಾಮೆರಾ ನೋಡಿದ್ದು, ವಿಡಿಯೋನಲ್ಲಿ ಸೆರೆಯಾಗಿದೆ.

ಸೈಫ್ ಅಲಿಖಾನ್ ಮನೆಯಲ್ಲಿ ಅಡುಗೆ ಮಾಡುವವರಲ್ಲಿ ಒಬ್ಬರಾದ ಎಲಿಯಾಮಾ ಫಿಲಿಪ್ಸ್ ಅಲಿಯಾಸ್ ಲಿಮಾ, ಶಂಕಿತನನ್ನು ಮೊದಲು ನೋಡಿದ್ದರಂತೆ. ದುಷ್ಕರ್ಮಿಯನ್ನು ನೋಡಿದ ಕೂಡಲೇ ಭಯದಲ್ಲಿ ಜೋರಾಗಿ ಕಿರುಚಿದ್ದಾರೆ. ಇದರಿಂದ ಎಚ್ಚರಗೊಂಡ ಸೈಫ್, ಹಂತಕನನ್ನ ಒಳ ನುಗ್ಗದಂತೆ ತಡೆಯಲು ಹೋರಾಡಿದ್ದಾರೆ.

ಈ ವೇಳೆ ಹಂತಕ 6 ಬಾರಿ ಇರಿದು, ಎಡಗೈ ಮತ್ತು ಗುತ್ತಿಗೆ ಭಾಗವನ್ನು ಗಾಯಗೊಳಿಸಿದ್ದಾನೆ. ಹಂತಕ ಒಳ ನುಗ್ಗಲು ಪ್ರಯತ್ನಿಸಿದಾಗ ನಿನಗೇನು ಬೇಕು ಎಂದು ಕೇಳಲಾಗಿತ್ತಂತೆ. ಆಗ 1 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದಾನೆ ಎಂದು ಆರೋಪಿಸಲಾಗಿದೆ. ದಾಳಿಯಲ್ಲಿ ಇಬ್ಬರು ಮನೆಯ ಸಹಾಯಕರೂ ಕೂಡ ಗಾಯಗೊಂಡಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ