NEWSನಮ್ಮರಾಜ್ಯರಾಜಕೀಯ

10 ಸಾವಿರ ನಿವೇಶನ ರಹಿತರಿಗೆ ಸೈಟ್‌ ಹಂಚಲು ಕ್ರಮ: ಸಾರ್ವಜನಿಕ ಉದ್ದಿಮೆ ಸಚಿವ ಎಂಟಿಬಿ ನಾಗರಾಜ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಸೌಕರ್ಯಗಳನ್ನು ಪಡೆಯಲು ಜನಸಾಮಾನ್ಯರು ಪ್ರತಿನಿತ್ಯ ಕಚೇರಿಗಳಿಗೆ ಅಲೆಯುವದನ್ನು ಕಡಿಮೆಗೊಳಿಸುವ ಉದ್ದೇಶದಿಂದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮ ಆಯೋಜಿಸುತ್ತಿರುವುದು, ಬಡವರಿಗೆ, ರೈತರಿಗೆ ಅನುಕೂಲವಾಗಿದೆ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಎಂಟಿಬಿ ನಾಗರಾಜ ಹೇಳಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ ಸಹಯೋಗದಲ್ಲಿ ಇಂದು ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು,

ಹೊಸಕೋಟೆ ತಾಲೂಕಿನಲ್ಲಿ ಅಧಿಕವಾಗಿರುವ ಅನೇಕ ಬಡವರಿಗೆ ಸಮರ್ಪಕ ಸೂರು ಇಲ್ಲ. ಅಂತಹವರಿಗೆ ನಿವೇಶನ ಒದಗಿಸಬೇಕು ಎಂದು ಕಂದಾಯ ಸಚಿವರಲ್ಲಿ ಮನವಿ ಮಾಡಿದಾಗ, ತಾಲೂಕಿನಲ್ಲಿ ಲಭ್ಯವಿರುವ ಗೋಮಾಳ, ಸರ್ಕಾರದ ಭೂಮಿ ಗುರುತಿಸಿ ಸುಮಾರು 10 ಸಾವಿರ ಜನ ನಿವೇಶನ ರಹಿತರಿಗೆ ಹಂಚಲು ಕ್ರಮವಹಿಸಿದ್ದಾರೆ ಎಂದು ತಿಳಿಸಿದರು.

ಅದಕ್ಕಾಗಿ ತಾಲೂಕಿನ ಸುಮಾರಿ 290 ಎಕರೆ ಜಮೀನನ್ನು ಜಿಲ್ಲಾಧಿಕಾರಿಗಳು ಗುರುತಿಸಿ, ಹಸ್ತಾಂತರ ಮಾಡುತ್ತಿರುವುದು ಮಹತ್ವದ ಕಾರ್ಯವಾಗಿದೆ. ಈ ಕಾರ್ಯದಲ್ಲಿ ಯಾವುದೇ ಜಾತಿ, ಧರ್ಮಗಳ ಭೇದವಿಲ್ಲದೆ ಎಲ್ಲ ಬಡವರಿಗೆ ನಿವೇಶನ ಒದಗಿಸುವ ಸಂಕಲ್ಪ ಇದಾಗಿದೆ.

ಫಲಾನುಭವಿಗಳ ಆಯ್ಕೆಯು ನಿಯಮಾನುಸಾರ ಪಾರದರ್ಶಕವಾಗಿ ನಡೆಯಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ ಸುಮಾರು 28 ಸಾವಿರಕ್ಕೂ ಹೆಚ್ಚು ವಿವಿಧ ವೈಯಕ್ತಿಕ ಸವಲತ್ತುಗಳು ಇಂದು ವಿತರಣೆಯಾಗುತ್ತಿವೆ ಎಂದರು.

ಬಡ ರೈತರ ಒಕ್ಕಲೆಬ್ಬಿಸಿ ನಿವೇಶನ ಒದಗಿಸುವದಕ್ಕಿಂತ, ಖಾಲಿ ಇರುವ ಜಾಗಗಳನ್ನು ಗುರುತಿಸಿ: ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, ಜನಸಾಮಾನ್ಯರ ಕಲ್ಯಾಣದ ಕನಸಿನೊಂದಿಗೆ ಸರ್ಕಾರ ಜನಪರ ಕಾರ್ಯಕ್ರಮ ಆಯೋಜಿಸಿರುವುದು ಸ್ವಾಗತಾರ್ಹ, ಸಾರ್ವಜನಿಕರ ತೆರಿಗೆಯಿಂದ ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ರೂಪಿಸುತ್ತದೆ. ಇಂದು ತೆರಿಗೆ ಪಾವತಿದಾರರ ಬಳಿಗೆ ಬಂದು ಸೌಲಭ್ಯಗಳನ್ನು ನೀಡುತ್ತಿರುವದು ಅಭಿನಂದನೀಯ ಕಾರ್ಯ ಎಂದರು.

ಹೊಸಕೋಟೆ ತಾಲೂಕಿನ ಸುಮಾರು 292 ಎಕರೆ ಸರ್ಕಾರಿ ಜಮೀನನ್ನು ಬಡ ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಕ್ರಮವಹಿಸಿರುವುದು ಶ್ಲಾಘನೀಯ. ಸಾಗುವಳಿ ಚೀಟಿ ಹೊಂದಿರುವ ತಾಲೂಕಿನ ರೈತರಿಗೆ ಹಕ್ಕುಪತ್ರ ವಿತರಣೆಗೂ ಕ್ರಮವಹಿಸಬೇಕು.

ಬಡ ರೈತರನ್ನು ಒಕ್ಕಲೆಬ್ಬಿಸಿ ನಿವೇಶನ ರಹಿತರಿಗೆ ನಿವೇಶನ ಒದಗಿಸುವದಕ್ಕಿಂತ, ಖಾಲಿ ಇರುವ ಜಾಗೆಗಳನ್ನು ಗುರುತಿಸಿ ನಿವೇಶನದ ಹಕ್ಕು ಪತ್ರಗಳನ್ನು ವಿತರಿಸಬೇಕು. ತಾಲೂಕು ಕೇಂದ್ರದಲ್ಲಿ ಸುಸಜ್ಜಿತ ಉಪನೋಂದಣಾಧಿಕಾರಿ ಕಚೇರಿ ಹಾಗೂ ತಾಲೂಕು ಆಡಳಿತ ಸೌಧ ನಿರ್ಮಿಸಬೇಕು. 5 ಕೆಜಿಗೆ ಇಳಿಸಿರುವ ಪಡಿತರ ಪ್ರಮಾಣವನ್ನು 10 ಕೆಜಿಗೆ ಹೆಚ್ಚಿಸಬೇಕು ಎಂದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!?