NEWSನಮ್ಮಜಿಲ್ಲೆನಮ್ಮರಾಜ್ಯ

ಫಾರಂ-4 ಉಲ್ಲಂಘಿಸಿ ಕಾರ್ಯಾಚರಣೆಗೆ ಸಾಥ್‌ ನೀಡುವ ಭದ್ರತಾ ಸಿಬ್ಬಂದಿ ವಿರುದ್ಧ ಕ್ರಮ: ಹಾವೇರಿ ಸಾರಿಗೆ ವಿಭಾಗದ ಡಿಸಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಅನುಸೂಚಿ ವಾಹನಗಳು Form-4 ವೇಳಾಪಟ್ಟಿ ಉಲ್ಲಂಘಿಸಿ ಕಾರ್ಯಾಚರಣೆ ಮಾಡುತ್ತಿರುವ ಪ್ರಕರಣಗಳಿಗೆ ಸಾಥ್‌ ನೀಡುವ ಭದ್ರತಾ ಸಿಬ್ಬಂದಿ ವಿರುದ್ಧ ಅಗತ್ಯ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ನ.29ರಂದು ಆದೇಶ ಹೊರಡಿಸಿರುವ ಅವರು, ಈ ವಿಷಯದ ಕುರಿತು ನಿಷ್ಕಾಳಜಿ, ಕರ್ತವ್ಯ ಲೋಪ ಎಸಗಿರುವುದು ಕಂಡುಬಂದಲ್ಲಿ ಅಂತಹ ಭದ್ರತಾ ಸಿಬ್ಬಂದಿಗಳ ವಿರುದ್ಧ ಮುಲಾಜಿಲ್ಲದೇ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಏಕೆ ಈ ಆದೇಶ?: ಈ Form-4 ವೇಳಾಪಟ್ಟಿ ಉಲ್ಲಂಘಿಸಿ ಕಾರ್ಯಾಚರಣೆ ಮಾಡುತ್ತಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಇತ್ತೀಚೆಗೆ ಅನುಸೂಚಿ ವಾಹನಗಳು Form-4 ವೇಳಾಪಟ್ಟಿ ಉಲ್ಲಂಘಿಸಿ ಕಾರ್ಯಾಚರಣೆ ಮಾಡುತ್ತಿರುವ ಪ್ರಕರಣಗಳು ವರದಿಯಾಗಿದ್ದು, ಇದರಿಂದ ರಸ್ತೆ ಅಪಘಾತಕ್ಕೆ ಮತ್ತು ಸಂಸ್ಥೆಗೆ ನಷ್ಟ ಉಂಟಾಗುವ ಸಾಧ್ಯೆತೆ ಇರುವುದನ್ನು ವ್ಯವಸ್ಥಾಪಕ ನಿರ್ದೇಶಕರು ಗಮನಿಸಿದ್ದಾರೆ.

ಹೀಗಾಗಿ ಈ ಸಂಬಂಧ ಸಂಸ್ಥೆಯ ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿಗಳು ನಮಗೆ ಜ್ಞಾಪನಾ ಪತ್ರ ಹೊರಡಿಸಿದ್ದು, ಸಕಾರಣ ಇಲ್ಲದೆ ನಮೂನೆ-4 ಸಮಯಕ್ಕಿಂತ ಮುಂಚಿತವಾಗಿ ಘಟಕದಿಂದ ವಾಹನ ಹೊರ ಹೋಗದಂತೆ ಹಾಗೂ ಒಳಗೆ ಬರದಂತೆ ಘಟಕದ ಭದ್ರತಾ ಸಿಬ್ಬಂದಿಗಳಿಗೆ ಲಿಖಿತ ಆದೇಶ ಹೊರಡಿಸಲು ನ.26ರಂದು ಸೂಚಿಸಿದ್ದಾರೆ.

ಅದರನ್ವಯ ಪ್ರಸ್ತುತ ಹಾವೇರಿ ವಿಭಾಗದಲ್ಲಿ ಅನುಸೂಚಿ ವಾಹನಗಳು Form-4 ಪ್ರಕಾರ ಘಟಕದಿಂದ ನಿರ್ಗಮನವಾಗುವ ಹಾಗೂ ಘಟಕಕ್ಕೆ ಆಗಮಿಸುವ ಅನುಸೂಚಿವಾರು ಅಧಿಕೃತ ವೇಳಾಪಟ್ಟಿಯನ್ನು ಅಡಕಗೊಳಿಸಿದ್ದು, ಈ ವೇಳಾಪಟ್ಟಿಯಂತೆ ಇಂದಿನಿಂದ ತಮ್ಮ ತಮ್ಮ ಘಟಕಗಳ ಅನುಸೂಚಿ ವಾಹನಗಳನ್ನು ಘಟಕದಿಂದ ಹೊರಗೆ ಬಿಡಲು ಹಾಗೂ ಘಟಕದ ಒಳಗೆ ತೆಗೆದುಕೊಳ್ಳಬೇಕು.

ಮುಖ್ಯವಾಗಿ ಯಾವುದೇ ಅನುಸೂಚಿ ವಾಹನಗಳನ್ನು ಸಕಾರಣಗಳಿಲ್ಲದೆ ನಮೂನೆ-4ರ ಸಮಯಕ್ಕಿಂತ ಮುಂಚಿತವಾಗಿ ಘಟಕದಿಂದ ಹೊರಗೆ ಬಿಡಬಾರು ಹಾಗೂ ನಮೂನೆ-4 ಸಮಯಕ್ಕಿಂತ ಮುಂಚಿತವಾಗಿ ವಾಹನವನ್ನು ಘಟಕದ ಒಳಗೆ ತೆಗೆದುಕೊಳ್ಳಬಾರದು ಹಾಗೂ ಈ ವಿಷಯವನ್ನು ಗಂಭೀರವಾಗಿ ಗಣನೆಗೆ ತೆಗೆದುಕೊಳ್ಳಬೇಕು ಎಂದು ವಿಭಾಗೀಯ ನಿಯಂತ್ರಣಾಧಿಕಾರಗಳು ಆದೇಶ ಹೊರಡಿಸಿದ್ದಾರೆ.

ಅಲ್ಲದೆ ಯಾವುದೇ ಭದ್ರತಾ ಸಿಬ್ಬಂದಿ ಈ ವಿಷಯದ ಕುರಿತು ನಿಷ್ಕಾಳಜಿ, ಕರ್ತವ್ಯ ಲೋಪ ಎಸಗಿರುವುದು ಕಂಡುಬಂದಲ್ಲಿ ಅಂತಹ ಸಿಬ್ಬಂದಿಗಳ ವಿರುದ್ಧ ತಕ್ಷಣ ಅಗತ್ಯ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ KSRTC ಎಂಡಿ ಅಕ್ರಮ್‌ಪಾಷ ವರ್ಗಾವಣೆ ಪ್ರಭಾರ ಎಂಡಿಯಾಗಿ ಡಾ.ಆರ್‌. ಸೆಲ್ವಮಣಿ ನೇಮಕ ಮಾಡಿ ಸರ್ಕಾರದ ಆದೇಶ 4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗೋಕುಲದ ಅಧ್ಯಕ್ಷ ಲಯನ್ ಅರವಿಂದ ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು... ಉಕ್ಕು ಸ್ಥಾವರ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ರೂ. ಗಾಯಗೊಂಡವರಿಗೆ 10 ಲಕ್ಷ ರೂ. ಪರಿಹಾರ: ಕೇಂದ್ರ ಸಚಿವ ಎಚ್‌ಡಿಕ... ಗೃಹಲಕ್ಷ್ಮಿ ಹಣ ಪಡೆಯಲು 5 ರೂ.ಪಾವತಿಸಿ ಬಯೋಮೆಟ್ರಿಕ್ ನೀಡುವುದು ಕಡ್ಡಾಯ: 20 ದಿನದೊಳಗೆ ಬಯೋಮೆಟ್ರಿಕ್ ಜಾರಿ 3,991 ಪೊಲೀಸ್‌ ಕಾನ್‌ಸ್ಟೆಬಲ್‌ (ಸಿವಿಲ್‌) ಹುದ್ದೆಗೆ ಅರ್ಜಿ ಆಹ್ವಾನ- ಕೊನೇದಿನ ಜು.3 ಡಿಸಿಎಂ ಸೇರಿ 13 ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕಚೇರಿ ಹಂಚಿಕೆ ಮಾಡಿ ಆಡಳಿತ ಸುಧಾರಣೆ ಇಲಾಖೆ ಆದೇಶ