CRIMENEWSನಮ್ಮಜಿಲ್ಲೆಬೆಂಗಳೂರು

ನಟ ದರ್ಶನ್‌ಗೆ ಹಾಸಿಗೆ, ದಿಂಬು ಏನನ್ನೂ ಕೊಡ್ತಾ ಇಲ್ಲ- ತುಂಬಾ ಕನಿಷ್ಠವಾಗಿ ನಡೆಸಿಕೊಳ್ತಾ ಇದ್ದಾರೆ ಜೈಲಧಿಕಾರಿಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜೈಲಿನಲ್ಲಿ ಹಾಸಿಗೆ, ದಿಂಬು ವಿಚಾರಕ್ಕೆ ನಟ ದರ್ಶನ್ ಕೋರ್ಟ್ ಮೆಟ್ಟಿಲೇರಿದ್ದು, ಇಂದು ಅರ್ಜಿ ವಿಚಾರಣೆ ನಡೆಯಲಿದೆ.

ಕೊಲೆ ಪ್ರಕರಣದ ಆರೋಪದಡಿ ಮತ್ತೆ ಜೈಲುಸೇರಿರುವ ದರ್ಶನ್ ಕೆಲ ಮೂಲಸೌಕರ್ಯಗಳಿಗೆ ಕೋರ್ಟ್‌ನಲ್ಲಿ ಬೇಡಿಕೆ ಇಟ್ಟಿದ್ದರು. ಆ ಬಗ್ಗೆ ಕಳೆದ ವಾರ ಜೈಲಿನ ಮ್ಯಾನ್ಯುಯಲ್ ಪ್ರಕಾರ ಸೌಲಭ್ಯ ನೀಡಿ ಎಂದು ಕೋರ್ಟ್ ಆದೇಶ ಕೂಡ ಮಾಡಿತ್ತು.

ಅದೇ ರೀತಿ ಜೈಲಿನ ಅಧಿಕಾರಿಗಳು ಜಮ್ಖಾನ, ದಿಂಬು ಕಲ್ಪಿಸಿದ್ದರು. ಜತೆಗೆ ವಾಕಿಂಗ್‌ಗೆ ಅವಕಾಶ ನೀಡಿದ್ದಾರೆ. ಆದರೆ ಹಾಸಿಗೆ, ದಿಂಬು ಕೊಟ್ಟಿಲ್ಲ ಎಂದು ಆರೋಪಿಸಿ ದರ್ಶನ್ ಮತ್ತೆ ಕೋರ್ಟ್‌ಗೆ ಜೈಲಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.

ಕೋರ್ಟ್ ಹೇಳಿದರೂ ಕೂಡ ಹಾಸಿಗೆ ಕೊಟ್ಟಿಲ್ಲ ಅಂತ ಮತ್ತೆ ಕೋರ್ಟ್‌ ಮೆಟ್ಟಿಲೇರಿರುವ ದರ್ಶನ್‌, ನನಗೆ ಕನಿಷ್ಠ ಸೌಲಭ್ಯವನ್ನೂ ನೀಡಿಲ್ಲ. ಜೈಲು ಸೇರಿ ತಿಂಗಳಾದ್ರೂ ಕ್ವಾರಂಟೈನ್ ಸೆಲ್‌ನಲ್ಲಿ ಇಟ್ಟಿದ್ದಾರೆಂದು ಆರೋಪಿಸಿದ್ದಾರೆ.

ಇನ್ನು ಈ ಬಗ್ಗೆ ಅರ್ಜಿ ಸಲ್ಲಿಸಿದ ಬಳಿಕ ಸುನೀಲ್ ವಾದ ಮಂಡಿಸಿ, ದರ್ಶನ್ ಜೈಲು ಸೇರಿ ಒಂದು ತಿಂಗಳು ಕಳೆದು ಹೋಗಿದೆ. ಇನ್ನೂ ಅವರನ್ನು ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಿದ್ದಾರೆ. 14 ದಿನಗಳ ಕಾಲ ಮಾತ್ರ ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಬೇಕು. ಇನ್ನು ಬಿಸಿಲಿನ ವಿಚಾರಕ್ಕೆ ಸೂರ್ಯನನ್ನು ತರೋದಕ್ಕೆ ಆಗುತ್ತಾ ಅಂತ ಹಾರಿಕೆ ಉತ್ತರ ಕೊಡ್ತಾರೆ.

ಜತೆಗೆ ಹಾಸಿಗೆ, ದಿಂಬು ಏನನ್ನೂ ಕೊಡ್ತಾ ಇಲ್ಲ. ತುಂಬಾ ಕನಿಷ್ಠವಾಗಿ ನಡೆಸಿಕೊಳ್ತಾ ಇದ್ದಾರೆ ಎಂದು ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಅರ್ಜಿ ಸ್ವೀಕರಿಸಿರುವ ನ್ಯಾಯಾಲಯ ಇಂದು ವಿಚಾರಣೆ ನಡೆಸಲಿದೆ.

ಇದೇ ವಿಚಾರಕ್ಕೆ ಈ ಹಿಂದೆ ಕೋರ್ಟ್‌ನಲ್ಲಿ ವಿಚಾರಣೆ ಮಾಡುವ ವೇಳೆ ಜೈಲಿನಲ್ಲಿ ಸರಿಯಾಗಿ ಸೌಲಭ್ಯ ಕೊಡ್ತಿಲ್ಲ. ನಾನು ಸಾಯ್ತೀನಿ, ವಿಷ ಕೊಟ್ಟುಬಿಡಿ ಎಂದು ದರ್ಶನ್ ಬೇಸರದಿಂದ ನ್ಯಾಯಾಧೀಶರ ಬಳಿ ಅಳಲು ತೋಡಿಕೊಂಡಿದ್ದರು.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ