CRIMENEWSಸಿನಿಪಥ

ಸೋಷಿಯಲ್ ಮೀಡಿಯಾದಲ್ಲಿ ಕೆಟ್ಟ ಕಾಮೆಂಟ್ ಮಾಡಿ ಜೈಲು ಪಾಲಾದವರ ಕ್ಷಮಿಸಿದ ಮೋಹಕತಾರೆ ರಮ್ಯಾ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತಮ್ಮ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಕೆಟ್ಟ ಕಾಮೆಂಟ್ ಮಾಡಿ ಜೈಲು ಪಾಲಾದ ಕುಟುಂಬ ಕ್ಷಮೆ ಕೋರಿದ್ದರಿಂದ ನಟಿ ರಮ್ಯಾ ಆ ಕುಟುಂಬ ಹಾಗೂ ಕಾಮೆಂಟ್ ಮಾಡಿದವರನ್ನು ಕ್ಷಮಿಸಿದ್ದು, ಈ ವಿಷಯವನ್ನು ಇಂದು ಖುದ್ದು ಮೋಹಕತಾರೆ, ನಟಿ ರಮ್ಯಾ ತಿಳಿಸಿದ್ದಾರೆ.

ಒಂದೆರೆಡು ತಿಂಗಳ ಹಿಂದೆ ಸೋಷಿಯಲ್ ಮೀಡಿಯಾಗಳಲ್ಲಿ ನಟ ದರ್ಶನ್ ಫ್ಯಾನ್ಸ್ ಹೆಸರಿನಲ್ಲಿ ನಟಿ ರಮ್ಯಾ ಅವರಿಗೆ ಅಶ್ಲೀಲವಾಗಿ ಕಾಮೆಂಟ್ ಮಾಡಲಾಗಿತ್ತು. ಕೊಲೆ ಬೆದರಿಕೆ, ರೇಪ್ ಬೆದರಿಕೆಯನ್ನು ಸೋಷಿಯಲ್ ಮೀಡಿಯಾ ಮೂಲಕ ಹಾಕಿದ್ದರು. ಇದರ ವಿರುದ್ಧ ನಟಿ ರಮ್ಯಾ ಸಿಡಿದೆದಿದ್ದರು.

ಬೆಂಗಳೂರು ಪೊಲೀಸ್ ಕಮೀಷನರ್ ಅವರನ್ನು ಭೇಟಿಯಾಗಿ ಸೋಷಿಯಲ್ ಮೀಡಿಯಾ ಖಾತೆಗಳ ವಿವರದ ಸಹಿತ ಲಿಖಿತ ದೂರು ನೀಡಿದ್ದರು. ಈ ದೂರನ್ನು ದಾಖಲಿಸಿಕೊಂಡಿದ್ದ ಪೊಲೀಸರು ಸೋಷಿಯಲ್ ಮೀಡಿಯಾ ಖಾತೆಗಳ ಬಗ್ಗೆ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿ ಜೈಲಿಗೆ ಕಳಿಸಿದ್ದರು.

ಆರೋಪಿಗಳಿಗೆ ಕೆಲ ತಿಂಗಳವರೆಗೂ ಬೇಲ್ ಕೂಡ ಸಿಕ್ಕಿರಲಿಲ್ಲ. ಈಗ ಕೆಲವರಿಗೆ ಬೇಲ್ ಸಿಕ್ಕಿದೆ. ಇನ್ನೂ ದೂರು ನೀಡಿದ್ದ ನಟಿ ರಮ್ಯಾ ಅವರನ್ನು ಭೇಟಿಯಾಗಿ ಆರೋಪಿಗಳ ಕುಟುಂಬಸ್ಥರು ತಮ್ಮ ಮನೆಯ ಮಗ ಮಾಡಿದ ತಪ್ಪನ್ನು ಕ್ಷಮಿಸಬೇಕೆಂದು ಕಣ್ಣೀರು ಹಾಕಿ ಮನವಿ ಮಾಡಿಕೊಂಡಿದ್ದರು. ಅವರ ಜೀವನ ಹಾಳಾಗುತ್ತೆ. ಗೊತ್ತಿಲ್ಲದೇ ತಪ್ಪು ಮಾಡಿ ಈಗ ಜೈಲು ಪಾಲಾಗಿದ್ದಾರೆ. ಇಡೀ ಕುಟುಂಬ ಸಂಕಷ್ಟದಲ್ಲಿದೆ. ಹೀಗಾಗಿ ಮಾನವೀಯತೆಯಿಂದ ಕ್ಷಮಿಸಬೇಕೆಂದು ನಟಿ ರಮ್ಯಾಗೆ ಮನವಿ ಮಾಡಿದ್ದರು.

ಆ ಕುಟುಂಬಗಳ ಸಂಕಷ್ಟ, ನೋವಿಗೆ ಮಿಡಿದ ನಟಿ ರಮ್ಯಾ, ತಮ್ಮ ವಿರುದ್ಧ ಅಶ್ಲೀಲ ಕಾಮೆಂಟ್ ಮಾಡಿದವರನ್ನು ಕ್ಷಮಿಸುವ ದೊಡ್ಡ ಗುಣ ತೋರಿದ್ದಾರೆ. ಇದರಿಂದ ಆರೋಪಿಗಳಿಗೆ ಈಗ ಜಾಮೀನು ಸಿಕ್ಕಿದೆ.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ನಟಿ ರಮ್ಯಾ ಪ್ರತಿಕ್ರಿಯಿಸಿದ್ದು, ಆರೋಪಿಗಳನ್ನು ನಾನು ಯಾವಾಗಲೋ ಕ್ಷಮಿಸಿದ್ದೇನೆ. ಆದರೆ ಈ ರೀತಿ ಯಾರಿಗೂ ಮಾಡಬಾರದು ಅನ್ನೋದು ನನ್ನ ಉದ್ದೇಶ. ಇದು ಮತ್ತೆ ರಿಪೀಟ್ ಆಗಲ್ಲ ಅಂತ ಭಾವಿಸುತ್ತೇನೆ. ಅವರಿಗೆ ಶಿಕ್ಷೆ ಕೊಡಬೇಕು ಅನ್ನೋ ಉದ್ದೇಶ ಇರಲಿಲ್ಲ ಅವರಿಗೆ ಪಾಠ ಕಲಿಸುವ ಉದ್ದೇಶ ಅಷ್ಟೇ ಇದ್ದದ್ದು ಎಂದು ಹೇಳಿದ್ದಾರೆ.

ತಪ್ಪು ಮಾಡಿದವರ ಕುಟುಂಬ ನನ್ನ ಕ್ಷಮೆ ಕೇಳೋದು ಬೇಡ. ನನಗೆ ಕ್ಷಮೆ ಕೇಳುವ ಬದಲು ನಿಮ್ಮ ಮಕ್ಕಳಿಗೆ ಬುದ್ದಿ ಹೇಳಿ. ಬಡವರು ಅಂತೀರಾ, ಫೋನ್ ಇದೆ, ಡೇಟಾ ಇದೆ ಅಂತ ಹೀಗೆ ಮಾಡಬಾರದು. ನಿಮ್ಮ ಮಕ್ಕಳಿಗೆ ಬುದ್ಧಿ ಹೇಳಿ ಎಂದು ರಮ್ಯಾ, ಆರೋಪಿಗಳ ಕುಟುಂಬಸ್ಥರಿಗೆ ಸಲಹೆ ನೀಡಿದ್ದಾರೆ.

ಇನ್ನು ಹೆಣ್ಣು ಮಕ್ಕಳ ವಿಚಾರದಲ್ಲಿ ಸಮಾಜಕ್ಕೆ ಒಳ್ಳೆ ಸಂದೇಶ ಕೊಡಬೇಕಿತ್ತು. ಸದ್ಯ ನ್ಯಾಯಾಲಯದ ಮೂಲಕ ಬುದ್ದಿ ಹೇಳಬೇಕಿತ್ತು. ಈಗ ಎಲ್ಲರೂ ಬೇಲ್ ನಲ್ಲಿ ಆಚೆ ಇದ್ದಾರೆ ಅವರಿಗೆ ಒಳ್ಳೆಯದಾಗಲಿ ಎಂದರು.

ಹೆಣ್ಣು ಬೆತ್ತಲೆಯಾಗಿದ್ದರು, ಗಂಡು ಕಣ್ಣೆತ್ತಿ ನೋಡಬಾರದು ನಟಿ ನಿಶ್ವಿಕಾ ನಾಯ್ಡು ಹೇಳಿಕೆ ವಿಚಾರಕ್ಕೆ ನಟಿ ರಮ್ಯಾ ಪ್ರತಿಕ್ರಿಯಿಸಿ, ನಿಶ್ವಿಕಾ ಹೇಳಿದ್ದು ಸರಿ ಇದೆ. ಗಂಡಸರಿಗೆ ಇರುವಷ್ಟೇ ಹಕ್ಕು ನಮಗೂ ಇದೆ. ನೀವು ಇಷ್ಟ ಬಂದ ಹಾಗೇ ಬಟ್ಟೆ ಹಾಕ್ತೀರಾ. ನಾವು ಹಾಕಬಾರದಾ..? ಹೆಣ್ಣು ಮಕ್ಕಳಿಗೂ ಸ್ವಾತಂತ್ರ್ಯ ಇದೆ.

ನಿಮಗೆ ಇಷ್ಟ ಇಲ್ಲ ಅಂದ್ರೆ ಕಾಮೆಂಟ್ ಮಾಡೋಕೆ ಹೋಗಬೇಡಿ. ಸೋಷಿಯಲ್ ಮೀಡಿಯಾದಲ್ಲಿ ಎಲ್ಲರಿಗೂ ಅಕೌಂಟ್ ಇದೆ. ಅಭಿಪ್ರಾಯ ಇದೆ. ಹಾಗಂತ ಕೆಟ್ಟ, ಅಶ್ಲೀಲ, ಅಸಭ್ಯ ಕಾಮೆಂಟ್ ಮಾಡಬಾರದು ಎಂದು ನಟಿ ರಮ್ಯಾ, ಯುವಕರಿಗೆ ಬುದ್ಧಿವಾದ ಹೇಳಿದ್ದಾರೆ.

Megha
the authorMegha

Leave a Reply

error: Content is protected !!
Latest news
ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ ಕಾಂಗ್ರೆಸ್​​ ಹಿರಿಯ ನಾಯಕ ಮಾಜಿ ಕಾರ್ಮಿಕ ಸಚಿವ ವೆಂಕಟರಮಣಪ್ಪ ನಿಧನ ಕಾರಿನ ಟೈಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿ: ಕಾರಿನಲ್ಲಿದ್ದ ಐವರು ಸ್ಥಳದಲ್ಲೇ‌ ಮೃತ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ರಾಜೀನಾಮೆಗೂ ಮುನ್ನ ಸಿಎಂ ಕಚೇರಿ ಸಿಬ್ಬಂದಿ ವರ್ಗಾವಣೆ: ಆಪ್ತ, ಬೆಂಬಲಿಗ ಅಧಿಕಾರಗಳ ರಕ್ಷಣೆ ಮಾಡಿದರ ಸಿದ್ದು!? ಸಿಎಂ ಸ್ಥಾನಕ್ಕೆ ಹೈಕಮಾಂಡ್‌ ರಾಜೀನಾಮೆ ಕೊಡಿ ಅಂತ ಹೇಳಿದ್ರೆ ಕೊಡ್ತೀನಿ ಅಂದಿದ್ದೆ, ಮೊನ್ನೆ ಹೇಳಿದರು ಇಂದು ಕೊಟ್ಟೆ: ಸ... ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯರಿಂದ ಒಂದು ಪುಟದ ರಾಜೀನಾಮೆ ಪತ್ರ ಸಲ್ಲಿಕೆ