
ಪುಣೆ: ಬಸ್ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ತಲೆ ಮರೆಸಿಕೊಂಡಿದ್ದ ಪ್ರಕರಣದ ಪ್ರಮುಖ ಆರೋಪಿಆರೋಪಿ ದತ್ತಾತ್ರೇಯ ಗಡೆಯನ್ನು ಪುಣೆ ಪೊಲೀಸರು ಇಂದು (ಫೆ.28.2025) ಬಂಧಿಸಿದ್ದಾರೆ.
ಪುಣೆಯ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್ಸಿನಲ್ಲಿ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು 75 ಗಂಟೆಗಳ ಸುದೀರ್ಘ ಹುಡುಕಾಟದ ನಂತರ ಬಂಧಿಸಿದ್ದು, ಆತ ತಪ್ಪೊಪ್ಪಿಕೊಂಡಿದ್ದಾನೆ.
ಜನನಿಬಿಡ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ರಾಜ್ಯ ಸಾರಿಗೆ ಬಸ್ಸಿನಲ್ಲಿ 26 ವರ್ಷದ ವೈದ್ಯಕೀಯ ಕೌನ್ಸಿಲರ್ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊತ್ತಿರುವ ದತ್ತಾತ್ರಯ ರಾಮದಾಸ್ ಗಡೆ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆತ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ.
ಫೆಬ್ರವರಿ 25 ರಿಂದ ತಲೆಮರೆಸಿಕೊಂಡಿದ್ದ ಪ್ರಕರಣದ ಆರೋಪಿಯನ್ನು ಪುಣೆ ಪೊಲೀಸರು ಈಗ ಬಂಧಿಸಿದ್ದಾರೆ. ಪುಣೆಯ ಶಿರೂರ್ ತಹಸಿಲ್ನ ಹಳ್ಳಿಯೊಂದರಲ್ಲಿ ಮಧ್ಯರಾತ್ರಿಯ ಸುಮಾರಿಗೆ ಬಂಧಿಸಲಾಗಿದೆ.
ರಾಮದಾಸ್ ಗಡೆ ಶಿರೂರ್ನ ಜಮೀನಿನಲ್ಲಿ ಅಡಗಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ತಿಳಿದ ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ. ದತ್ತಾತ್ರೇಯ ಈ ಮೊದಲು ಕೂಡ ಹಲವು ಅಪರಾಧಗಳಲ್ಲಿ ಭಾಗಿಯಾಗಿದ್ದ, 2019ರಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ.
ದರೋಡೆ, ಕಳ್ಳತನ ಮತ್ತು ಸರಗಳ್ಳತನ ಸೇರಿದಂತೆ ಹಲವು ಆರೋಪಗಳಿವೆ. ಇಂದು, ಆತನನ್ನು ಪೊಲೀಸರು ಪುಣೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಪೊಲೀಸರು ಸಂಪೂರ್ಣ ವಿಚಾರಣೆ ಮತ್ತು ತನಿಖೆ ನಡೆಸಲು ಕಸ್ಟಡಿಗೆ ಕೋಡಿದ್ದಾರೆ. ಆತನನ್ನು ಬಂಧಿಸಲು 13 ತಂಡಗಳನ್ನು ಪೊಲೀಸರು ರಚಿಸಿದ್ದರು.
ಈ ತಂಡಎ ಪೊಲೀಸರು ಮಹಾರಾಷ್ಟ್ರದಾದ್ಯಂತ ವಿವಿಧ ಸ್ಥಳಗಳಲ್ಲಿ ಬೀಡುಬಿಟ್ಟಿದ್ದು, ಶೋಧ ಪ್ರಯತ್ನಗಳ ಭಾಗವಾಗಿ ಸ್ನಿಫರ್ ನಾಯಿಗಳು ಮತ್ತು ಡ್ರೋನ್ಗಳನ್ನು ಬಳಸಿಕೊಂಡಿದ್ದರು. ಡ್ರೋನ್ಗಳು ಮತ್ತು ನಾಯಿಗಳನ್ನು ನಿರ್ದಿಷ್ಟವಾಗಿ ಪುಣೆಯ ಶಿರೂರ್ ತಹಸಿಲ್ನ ಕಬ್ಬಿನ ಹೊಲಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇನ್ನು ಈ ಆರೋಪಿಯ ಸುಳಿವು ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನವನ್ನು ಕೊಡುವುದಾಗಿ ಪೊಲೀಸರು ಘೋಷಿಸಿದ್ದರು. ಜತೆಗೆ ಆತನ ಫೋಟೋವನ್ನು ಬಿಡುಗಡೆ ಮಾಡಿದ್ದರು.