ಅಪರೇಷನ್ ಸಿಂಧೂರ ಬಳಿಕ ಶಬ್ದಾತೀತ ವೇಗದ ಬ್ರಹ್ಮೋಸ್ ಖರೀದಿಗೆ ಮುಗಿಬೀಳುತ್ತಿವೆ ಏಷ್ಯಾ, ಮಧ್ಯಪ್ರಾಚ್ಯ ಸೇರಿ ಹಲವು ದೇಶಗಳು

ಬೆಂಗಳೂರು: ಭಾರತವು ಅಪರೇಷನ್ ಸಿಂಧೂರದಲ್ಲಿ ಪಡೆದ ಯಶಸ್ಸಿಗೆ ಶಬ್ದಾತೀತವೇಗದ ಬ್ರಹ್ಮೋಸ್ ಕ್ಷಿಪಣಿ ಬಳಕೆ ಮಾಡಿದ್ದೇ ಕಾರಣವಾಗಿದೆ ಎಂದು ಈಗಾಗಲ್ಲೆ ಎಲ್ಲೆಡೆ ಹೇಳಲಾಗುತ್ತಿದೆ. ಹೀಗಾಗಿ ಈಗ ಇದು ಜಗತ್ತಿನ ಗಮನವನ್ನು ಸೆಳೆಯುತ್ತಿದ್ದು, ಏಷ್ಯಾ, ಮಧ್ಯಪ್ರಾಚ್ಯ ಮತ್ತು ಲ್ಯಾಟಿನ್ ಅಮೆರಿಕದಂತ ದೇಶಗಳು ಈಗ ಈ ಶಕ್ತಿಶಾಲಿ ಕ್ಷಿಪಣಿ ಖರೀದಿಸಲು ಆಸಕ್ತಿ ತೋರಿಸುತ್ತಿವೆಯಂತೆ.
ಬ್ರಹ್ಮೋಸ್ ಕ್ಷಿಪಣಿ ಎಂದರೇನು?: ಬ್ರಹ್ಮೋಸ್ ಒಂದು ದೀರ್ಘ ವ್ಯಾಪ್ತಿಯ ಶಬ್ದಾತೀತ ವೇಗದ ಸಮರ ಕ್ಷಿಪಣಿಯಾಗಿದ್ದು ಇದನ್ನು ಭಾರತದ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಓ) ಮತ್ತು ರಷ್ಯಾದ ಎನ್ಪಿಒಎಂ ಜಂಟಿಯಾಗಿ ಅಭಿವೃದ್ಧಿಪಡಿಸಿವೆ. ಇದನ್ನು ನೆಲದಿಂದ, ಗಾಳಿಯಲ್ಲಿ, ಸಮುದ್ರದಿಂದ ಅಥವಾ ಜಲಾಂತರ್ಗಾಮಿಯಿಂದ ಹೇಗೆ ಬೇಕಾದರೂ ಉಡಾವಣೆ ಮಾಡಬಹುದಾಗಿದೆ. ಮಾರ್ಚ್ 3 ರವರೆಗಿನ ವೇಗದಲ್ಲಿ ಇದು ಪಯಣಿಸಬಲ್ಲದು. ಇದು ಫೈರ್ ಆಂಡ್ ಫರ್ಗೆಟ್ ಮಾದರಿಯನ್ನು ಹೈ ಪ್ರಿಸಿಷನ್ ಅನುಸರಿಸುತ್ತದೆ.
ಬ್ರಹ್ಮೋಸ್ ಕೆಲಸ ಮಾಡುವ ವಿಧಾನ: ಈ ಕ್ಷಿಪಣಿ ಎರಡು ಹಂತಗಳಲ್ಲಿ ಚಲಿಸುತ್ತದೆ. ಉಡಾವಣೆಗೆ ಘನ ಬೂಸ್ಟರ್ ಅನ್ನು ಮತ್ತು ಅತಿವೇಗದ ಚಲನೆಗೆ ದ್ರವ ಲ್ಯಾಮ್ಜೆಟ್ ಅನ್ನು ಇದು ಬಳಕೆ ಮಾಡುತ್ತದೆ. 15 ಕಿ.ಮೀ. ಎತ್ತರದಲ್ಲಿ ಹಾರುವ ಇದು ನೆಲದಿಂದ ಕೇವಲ 10 ಮೀಟರ್ ಎತ್ತರದಲ್ಲೂ ಹಾರುವ ಸಾಮರ್ಥ್ಯ ಹೊಂದಿದೆ. ಇದನ್ನು ಪತ್ತೆ ಮಾಡುವುದು ಕಷ್ಟಕರ. ತಡೆಯುವುದು ಇನ್ನೂ ಕ್ಲಷ್ಟವಾಗಿದೆ.
ಫಿಲಿಪ್ಪಿನ್ಸ್: ಮಾಧ್ಯಮ ವರದಿಗಳ ಪ್ರಕಾರ ಭಾರತವು 2025 ರ ಏಪ್ರಿಲ್ನಲ್ಲಿ ಫಿಲಿಫೀನ್ಸ್ಗೆ 375 ದಶಲಕ್ಷ ಡಾಲರ್ಗಳ ಒಪ್ಪಂದದಡಿ ಬ್ರಹ್ಮೋಸ್ ಕ್ಷಿಪಣಿಯ ಎರಡನೇ ತಂಡವನ್ನು ಕಳುಹಿಸಿಕೊಟ್ಟಿದೆ. ಇದು ಭಾರತವನ್ನು ಪ್ರಥಮ ಪ್ರಮುಖ ಕ್ಷಿಪಣಿ ರಫ್ತುದಾರ ದೇಶವನ್ನಾಗಿ ಮಾಡಿದೆ ಮತ್ತು ಈ ವಿಶ್ವಾಸಾರ್ಹ ದೀರ್ಘ ಶ್ರೇಣಿಯ ಶಸ್ತ್ರಾಸ್ತ್ರಕ್ಕೆ ಜಾಗತಿಕ ಖರೀದಿದಾರರಿಗೆ ಬಾಗಿಲು ತೆರೆದಿದೆ.
ವಿಯೆಟ್ನಾಂ: ವಿಯೆಟ್ನಾಂ ತನ್ನ ನೌಕಾಪಡೆ ಬಲವರ್ಧನೆಗಾಗಿ ಬ್ರಹ್ಮೋಸ್ ಕ್ಷಿಪಣಿಯನ್ನು 700 ದಶಲಕ್ಷ ಡಾಲರ್ ಒಪ್ಪಂದದಡಿ ಖರೀದಿಸಲಿದೆ. ಮಲೇಶಿಯಾ ತನ್ನ ಸು-30 ಜೆಟ್ಗಳು ಮತ್ತು ಕೆಡಾಹ್ ವರ್ಗದ ಸಮರ ನೌಕೆಗಳನ್ನು ಬ್ರಹ್ಮೋಸ್ನಿಂದ ಬಲಪಡಿಸಲು ಮುಂದಾಗುವ ಸಾಧ್ಯತೆಗಳಿವೆ. ಎರಡೂ ದೇಶಗಳು ದಕ್ಷಿಣ ಚೀನಾ ಸಮುದ್ರದಲ್ಲಿ ವ್ಯಕ್ತವಾಗುವ ಬೆದರಿಕೆಗಳನ್ನು ಎದುರಿಸಲು ಬ್ರಹ್ಮೋಸ್ನಿಂದ ಸಜ್ಜಾಗುವ ಗುರಿ ಹೊಂದಿವೆ.
ಮಧ್ಯಪ್ರಾಚ್ಯ ಮತ್ತು ದಕ್ಷಿಣ ಅಮೆರಿಕ ಕ್ಯೂನಲ್ಲಿ: ಈಜಿಪ್ಟ್, ಯುಎಇ, ಸೌದಿ ಅರೇಬಿಯಾ, ಖತಾರ್, ಓಮಾನ್ ಮತ್ತು ಚಿಲಿ, ಬ್ರೆಜಿಲ್, ಅರ್ಜೆಂಟೀನಾ, ವೆನಿಜುವೆಲಾದಂತಹ ದೇಶಗಳು ಬ್ರಹ್ಮೋಸ್ನ ಕರಾವಳಿ ಮತ್ತು ನೌಕಾ ಆವೃತ್ತಿಗಳನ್ನು ಖರೀದಿಸಲು ಆಸಕ್ತಿ ತೋರಿವೆ. ಈ ನಿಟ್ಟಿನಲ್ಲಿ ಈಗಾಗಲೇ ಮಾತುಕತೆಗಳು ಪ್ರಗತಿಯಲ್ಲಿವೆ. ಭಾರತದ ಬ್ರಹ್ಮಸ್ ಅನ್ನು ಈಗ ಜಾಗತಿಕ ಗೇಮ್ ಚೇಂಜರ್ ಆಗಿ ಭಾವಿಸಲಾಗುತ್ತಿದೆ. ಆಪರೇಷನ್ ಸಿಂಧೂರದಲ್ಲಿ ಇದರ ಬಳಕೆಯಿಂದ ವಿಶ್ವಾದ್ಯಂತ ಬ್ರಹ್ಮೋಸ್ ಕ್ಷಿಪಣಿಗೆ ವ್ಯಕ್ತವಾಗಿರುವ ಬೇಡಿಕೆ ಭಾರತದ ರಕ್ಷಣಾ ಉತ್ಪನ್ನಗಳ ರಪ್ತಿನ ಹೆಚ್ಚಳ, ಸ್ವಾವಲಂಬನೆ ಮತ್ತು ಕಾರ್ಯತಂತ್ರಾತ್ಮಕ ಪ್ರಭಾವವನ್ನು ಬಿಂಬಿಸುತ್ತದೆ.
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...