ಅಪರೇಷನ್ ಸಿಂಧೂರ ಬಳಿಕ ಶಬ್ದಾತೀತ ವೇಗದ ಬ್ರಹ್ಮೋಸ್ ಖರೀದಿಗೆ ಮುಗಿಬೀಳುತ್ತಿವೆ ಏಷ್ಯಾ, ಮಧ್ಯಪ್ರಾಚ್ಯ ಸೇರಿ ಹಲವು ದೇಶಗಳು

ಬೆಂಗಳೂರು: ಭಾರತವು ಅಪರೇಷನ್ ಸಿಂಧೂರದಲ್ಲಿ ಪಡೆದ ಯಶಸ್ಸಿಗೆ ಶಬ್ದಾತೀತವೇಗದ ಬ್ರಹ್ಮೋಸ್ ಕ್ಷಿಪಣಿ ಬಳಕೆ ಮಾಡಿದ್ದೇ ಕಾರಣವಾಗಿದೆ ಎಂದು ಈಗಾಗಲ್ಲೆ ಎಲ್ಲೆಡೆ ಹೇಳಲಾಗುತ್ತಿದೆ. ಹೀಗಾಗಿ ಈಗ ಇದು ಜಗತ್ತಿನ ಗಮನವನ್ನು ಸೆಳೆಯುತ್ತಿದ್ದು, ಏಷ್ಯಾ, ಮಧ್ಯಪ್ರಾಚ್ಯ ಮತ್ತು ಲ್ಯಾಟಿನ್ ಅಮೆರಿಕದಂತ ದೇಶಗಳು ಈಗ ಈ ಶಕ್ತಿಶಾಲಿ ಕ್ಷಿಪಣಿ ಖರೀದಿಸಲು ಆಸಕ್ತಿ ತೋರಿಸುತ್ತಿವೆಯಂತೆ.
ಬ್ರಹ್ಮೋಸ್ ಕ್ಷಿಪಣಿ ಎಂದರೇನು?: ಬ್ರಹ್ಮೋಸ್ ಒಂದು ದೀರ್ಘ ವ್ಯಾಪ್ತಿಯ ಶಬ್ದಾತೀತ ವೇಗದ ಸಮರ ಕ್ಷಿಪಣಿಯಾಗಿದ್ದು ಇದನ್ನು ಭಾರತದ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಓ) ಮತ್ತು ರಷ್ಯಾದ ಎನ್ಪಿಒಎಂ ಜಂಟಿಯಾಗಿ ಅಭಿವೃದ್ಧಿಪಡಿಸಿವೆ. ಇದನ್ನು ನೆಲದಿಂದ, ಗಾಳಿಯಲ್ಲಿ, ಸಮುದ್ರದಿಂದ ಅಥವಾ ಜಲಾಂತರ್ಗಾಮಿಯಿಂದ ಹೇಗೆ ಬೇಕಾದರೂ ಉಡಾವಣೆ ಮಾಡಬಹುದಾಗಿದೆ. ಮಾರ್ಚ್ 3 ರವರೆಗಿನ ವೇಗದಲ್ಲಿ ಇದು ಪಯಣಿಸಬಲ್ಲದು. ಇದು ಫೈರ್ ಆಂಡ್ ಫರ್ಗೆಟ್ ಮಾದರಿಯನ್ನು ಹೈ ಪ್ರಿಸಿಷನ್ ಅನುಸರಿಸುತ್ತದೆ.
ಬ್ರಹ್ಮೋಸ್ ಕೆಲಸ ಮಾಡುವ ವಿಧಾನ: ಈ ಕ್ಷಿಪಣಿ ಎರಡು ಹಂತಗಳಲ್ಲಿ ಚಲಿಸುತ್ತದೆ. ಉಡಾವಣೆಗೆ ಘನ ಬೂಸ್ಟರ್ ಅನ್ನು ಮತ್ತು ಅತಿವೇಗದ ಚಲನೆಗೆ ದ್ರವ ಲ್ಯಾಮ್ಜೆಟ್ ಅನ್ನು ಇದು ಬಳಕೆ ಮಾಡುತ್ತದೆ. 15 ಕಿ.ಮೀ. ಎತ್ತರದಲ್ಲಿ ಹಾರುವ ಇದು ನೆಲದಿಂದ ಕೇವಲ 10 ಮೀಟರ್ ಎತ್ತರದಲ್ಲೂ ಹಾರುವ ಸಾಮರ್ಥ್ಯ ಹೊಂದಿದೆ. ಇದನ್ನು ಪತ್ತೆ ಮಾಡುವುದು ಕಷ್ಟಕರ. ತಡೆಯುವುದು ಇನ್ನೂ ಕ್ಲಷ್ಟವಾಗಿದೆ.
ಫಿಲಿಪ್ಪಿನ್ಸ್: ಮಾಧ್ಯಮ ವರದಿಗಳ ಪ್ರಕಾರ ಭಾರತವು 2025 ರ ಏಪ್ರಿಲ್ನಲ್ಲಿ ಫಿಲಿಫೀನ್ಸ್ಗೆ 375 ದಶಲಕ್ಷ ಡಾಲರ್ಗಳ ಒಪ್ಪಂದದಡಿ ಬ್ರಹ್ಮೋಸ್ ಕ್ಷಿಪಣಿಯ ಎರಡನೇ ತಂಡವನ್ನು ಕಳುಹಿಸಿಕೊಟ್ಟಿದೆ. ಇದು ಭಾರತವನ್ನು ಪ್ರಥಮ ಪ್ರಮುಖ ಕ್ಷಿಪಣಿ ರಫ್ತುದಾರ ದೇಶವನ್ನಾಗಿ ಮಾಡಿದೆ ಮತ್ತು ಈ ವಿಶ್ವಾಸಾರ್ಹ ದೀರ್ಘ ಶ್ರೇಣಿಯ ಶಸ್ತ್ರಾಸ್ತ್ರಕ್ಕೆ ಜಾಗತಿಕ ಖರೀದಿದಾರರಿಗೆ ಬಾಗಿಲು ತೆರೆದಿದೆ.
ವಿಯೆಟ್ನಾಂ: ವಿಯೆಟ್ನಾಂ ತನ್ನ ನೌಕಾಪಡೆ ಬಲವರ್ಧನೆಗಾಗಿ ಬ್ರಹ್ಮೋಸ್ ಕ್ಷಿಪಣಿಯನ್ನು 700 ದಶಲಕ್ಷ ಡಾಲರ್ ಒಪ್ಪಂದದಡಿ ಖರೀದಿಸಲಿದೆ. ಮಲೇಶಿಯಾ ತನ್ನ ಸು-30 ಜೆಟ್ಗಳು ಮತ್ತು ಕೆಡಾಹ್ ವರ್ಗದ ಸಮರ ನೌಕೆಗಳನ್ನು ಬ್ರಹ್ಮೋಸ್ನಿಂದ ಬಲಪಡಿಸಲು ಮುಂದಾಗುವ ಸಾಧ್ಯತೆಗಳಿವೆ. ಎರಡೂ ದೇಶಗಳು ದಕ್ಷಿಣ ಚೀನಾ ಸಮುದ್ರದಲ್ಲಿ ವ್ಯಕ್ತವಾಗುವ ಬೆದರಿಕೆಗಳನ್ನು ಎದುರಿಸಲು ಬ್ರಹ್ಮೋಸ್ನಿಂದ ಸಜ್ಜಾಗುವ ಗುರಿ ಹೊಂದಿವೆ.
ಮಧ್ಯಪ್ರಾಚ್ಯ ಮತ್ತು ದಕ್ಷಿಣ ಅಮೆರಿಕ ಕ್ಯೂನಲ್ಲಿ: ಈಜಿಪ್ಟ್, ಯುಎಇ, ಸೌದಿ ಅರೇಬಿಯಾ, ಖತಾರ್, ಓಮಾನ್ ಮತ್ತು ಚಿಲಿ, ಬ್ರೆಜಿಲ್, ಅರ್ಜೆಂಟೀನಾ, ವೆನಿಜುವೆಲಾದಂತಹ ದೇಶಗಳು ಬ್ರಹ್ಮೋಸ್ನ ಕರಾವಳಿ ಮತ್ತು ನೌಕಾ ಆವೃತ್ತಿಗಳನ್ನು ಖರೀದಿಸಲು ಆಸಕ್ತಿ ತೋರಿವೆ. ಈ ನಿಟ್ಟಿನಲ್ಲಿ ಈಗಾಗಲೇ ಮಾತುಕತೆಗಳು ಪ್ರಗತಿಯಲ್ಲಿವೆ. ಭಾರತದ ಬ್ರಹ್ಮಸ್ ಅನ್ನು ಈಗ ಜಾಗತಿಕ ಗೇಮ್ ಚೇಂಜರ್ ಆಗಿ ಭಾವಿಸಲಾಗುತ್ತಿದೆ. ಆಪರೇಷನ್ ಸಿಂಧೂರದಲ್ಲಿ ಇದರ ಬಳಕೆಯಿಂದ ವಿಶ್ವಾದ್ಯಂತ ಬ್ರಹ್ಮೋಸ್ ಕ್ಷಿಪಣಿಗೆ ವ್ಯಕ್ತವಾಗಿರುವ ಬೇಡಿಕೆ ಭಾರತದ ರಕ್ಷಣಾ ಉತ್ಪನ್ನಗಳ ರಪ್ತಿನ ಹೆಚ್ಚಳ, ಸ್ವಾವಲಂಬನೆ ಮತ್ತು ಕಾರ್ಯತಂತ್ರಾತ್ಮಕ ಪ್ರಭಾವವನ್ನು ಬಿಂಬಿಸುತ್ತದೆ.
Related

You Might Also Like
BMTC ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣ: ಕಠಿಣ ಕ್ರಮಕ್ಕೆ ಆಯುಕ್ತರು, ಗೃಹ ಸಚಿವರಿಗೆ ಸಾರಿಗೆ ಸಚಿವರ ಆಗ್ರಹ
ಬೆಂಗಳೂರು: ತಾನು ಕೇಳಿದ ಸ್ಥಳದಲ್ಲಿ ಬಸ್ ನಿಲ್ಲಿಸಿಲ್ಲ ಎಂದು ಮೂರು ದಿನದ ಹಿಂದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಚಾಲಕನಿಗೆ ಮಹಿಳಾ ಟೆಕ್ಕಿ ಉದ್ಯೋಗಿಯೊಬ್ಬರು ಚಪ್ಪಲಿಯಿಂದ...
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...