NEWSದೇಶ-ವಿದೇಶಲೇಖನಗಳು

ಅಪರೇಷನ್ ಸಿಂಧೂರ ಬಳಿಕ ಶಬ್ದಾತೀತ ವೇಗದ ಬ್ರಹ್ಮೋಸ್ ಖರೀದಿಗೆ ಮುಗಿಬೀಳುತ್ತಿವೆ ಏಷ್ಯಾ, ಮಧ್ಯಪ್ರಾಚ್ಯ ಸೇರಿ ಹಲವು ದೇಶಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಭಾರತವು ಅಪರೇಷನ್ ಸಿಂಧೂರದಲ್ಲಿ ಪಡೆದ ಯಶಸ್ಸಿಗೆ ಶಬ್ದಾತೀತವೇಗದ ಬ್ರಹ್ಮೋಸ್ ಕ್ಷಿಪಣಿ ಬಳಕೆ ಮಾಡಿದ್ದೇ ಕಾರಣವಾಗಿದೆ ಎಂದು ಈಗಾಗಲ್ಲೆ ಎಲ್ಲೆಡೆ ಹೇಳಲಾಗುತ್ತಿದೆ. ಹೀಗಾಗಿ ಈಗ ಇದು ಜಗತ್ತಿನ ಗಮನವನ್ನು ಸೆಳೆಯುತ್ತಿದ್ದು, ಏಷ್ಯಾ, ಮಧ್ಯಪ್ರಾಚ್ಯ ಮತ್ತು ಲ್ಯಾಟಿನ್ ಅಮೆರಿಕದಂತ ದೇಶಗಳು ಈಗ ಈ ಶಕ್ತಿಶಾಲಿ ಕ್ಷಿಪಣಿ ಖರೀದಿಸಲು ಆಸಕ್ತಿ ತೋರಿಸುತ್ತಿವೆಯಂತೆ.

ಬ್ರಹ್ಮೋಸ್ ಕ್ಷಿಪಣಿ ಎಂದರೇನು?: ಬ್ರಹ್ಮೋಸ್ ಒಂದು ದೀರ್ಘ ವ್ಯಾಪ್ತಿಯ ಶಬ್ದಾತೀತ ವೇಗದ ಸಮರ ಕ್ಷಿಪಣಿಯಾಗಿದ್ದು ಇದನ್ನು ಭಾರತದ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಓ) ಮತ್ತು ರಷ್ಯಾದ ಎನ್‌ಪಿಒಎಂ ಜಂಟಿಯಾಗಿ ಅಭಿವೃದ್ಧಿಪಡಿಸಿವೆ. ಇದನ್ನು ನೆಲದಿಂದ, ಗಾಳಿಯಲ್ಲಿ, ಸಮುದ್ರದಿಂದ ಅಥವಾ ಜಲಾಂತರ್ಗಾಮಿಯಿಂದ ಹೇಗೆ ಬೇಕಾದರೂ ಉಡಾವಣೆ ಮಾಡಬಹುದಾಗಿದೆ. ಮಾರ್ಚ್ 3 ರವರೆಗಿನ ವೇಗದಲ್ಲಿ ಇದು ಪಯಣಿಸಬಲ್ಲದು. ಇದು ಫೈರ್ ಆಂಡ್ ಫರ್ಗೆಟ್ ಮಾದರಿಯನ್ನು ಹೈ ಪ್ರಿಸಿಷನ್‌ ಅನುಸರಿಸುತ್ತದೆ.

ಬ್ರಹ್ಮೋಸ್ ಕೆಲಸ ಮಾಡುವ ವಿಧಾನ: ಈ ಕ್ಷಿಪಣಿ ಎರಡು ಹಂತಗಳಲ್ಲಿ ಚಲಿಸುತ್ತದೆ. ಉಡಾವಣೆಗೆ ಘನ ಬೂಸ್ಟರ್ ಅನ್ನು ಮತ್ತು ಅತಿವೇಗದ ಚಲನೆಗೆ ದ್ರವ ಲ್ಯಾಮ್‌ಜೆಟ್ ಅನ್ನು ಇದು ಬಳಕೆ ಮಾಡುತ್ತದೆ. 15 ಕಿ.ಮೀ. ಎತ್ತರದಲ್ಲಿ ಹಾರುವ ಇದು ನೆಲದಿಂದ ಕೇವಲ 10 ಮೀಟರ್ ಎತ್ತರದಲ್ಲೂ ಹಾರುವ ಸಾಮರ್ಥ್ಯ ಹೊಂದಿದೆ. ಇದನ್ನು ಪತ್ತೆ ಮಾಡುವುದು ಕಷ್ಟಕರ. ತಡೆಯುವುದು ಇನ್ನೂ ಕ್ಲಷ್ಟವಾಗಿದೆ.

ಫಿಲಿಪ್ಪಿನ್ಸ್: ಮಾಧ್ಯಮ ವರದಿಗಳ ಪ್ರಕಾರ ಭಾರತವು 2025 ರ ಏಪ್ರಿಲ್‌ನಲ್ಲಿ ಫಿಲಿಫೀನ್ಸ್‌ಗೆ 375 ದಶಲಕ್ಷ ಡಾಲರ್‌ಗಳ ಒಪ್ಪಂದದಡಿ ಬ್ರಹ್ಮೋಸ್ ಕ್ಷಿಪಣಿಯ ಎರಡನೇ ತಂಡವನ್ನು ಕಳುಹಿಸಿಕೊಟ್ಟಿದೆ. ಇದು ಭಾರತವನ್ನು ಪ್ರಥಮ ಪ್ರಮುಖ ಕ್ಷಿಪಣಿ ರಫ್ತುದಾರ ದೇಶವನ್ನಾಗಿ ಮಾಡಿದೆ ಮತ್ತು ಈ ವಿಶ್ವಾಸಾರ್ಹ ದೀರ್ಘ ಶ್ರೇಣಿಯ ಶಸ್ತ್ರಾಸ್ತ್ರಕ್ಕೆ ಜಾಗತಿಕ ಖರೀದಿದಾರರಿಗೆ ಬಾಗಿಲು ತೆರೆದಿದೆ.

ವಿಯೆಟ್ನಾಂ: ವಿಯೆಟ್ನಾಂ ತನ್ನ ನೌಕಾಪಡೆ ಬಲವರ್ಧನೆಗಾಗಿ ಬ್ರಹ್ಮೋಸ್ ಕ್ಷಿಪಣಿಯನ್ನು 700 ದಶಲಕ್ಷ ಡಾಲರ್ ಒಪ್ಪಂದದಡಿ ಖರೀದಿಸಲಿದೆ. ಮಲೇಶಿಯಾ ತನ್ನ ಸು-30 ಜೆಟ್‌ಗಳು ಮತ್ತು ಕೆಡಾಹ್ ವರ್ಗದ ಸಮರ ನೌಕೆಗಳನ್ನು ಬ್ರಹ್ಮೋಸ್ನಿಂದ ಬಲಪಡಿಸಲು ಮುಂದಾಗುವ ಸಾಧ್ಯತೆಗಳಿವೆ. ಎರಡೂ ದೇಶಗಳು ದಕ್ಷಿಣ ಚೀನಾ ಸಮುದ್ರದಲ್ಲಿ ವ್ಯಕ್ತವಾಗುವ ಬೆದರಿಕೆಗಳನ್ನು ಎದುರಿಸಲು ಬ್ರಹ್ಮೋಸ್ನಿಂದ ಸಜ್ಜಾಗುವ ಗುರಿ ಹೊಂದಿವೆ.

ಮಧ್ಯಪ್ರಾಚ್ಯ ಮತ್ತು ದಕ್ಷಿಣ ಅಮೆರಿಕ ಕ್ಯೂನಲ್ಲಿ: ಈಜಿಪ್ಟ್, ಯುಎಇ, ಸೌದಿ ಅರೇಬಿಯಾ, ಖತಾರ್, ಓಮಾನ್ ಮತ್ತು ಚಿಲಿ, ಬ್ರೆಜಿಲ್, ಅರ್ಜೆಂಟೀನಾ, ವೆನಿಜುವೆಲಾದಂತಹ ದೇಶಗಳು ಬ್ರಹ್ಮೋಸ್‌ನ ಕರಾವಳಿ ಮತ್ತು ನೌಕಾ ಆವೃತ್ತಿಗಳನ್ನು ಖರೀದಿಸಲು ಆಸಕ್ತಿ ತೋರಿವೆ. ಈ ನಿಟ್ಟಿನಲ್ಲಿ ಈಗಾಗಲೇ ಮಾತುಕತೆಗಳು ಪ್ರಗತಿಯಲ್ಲಿವೆ. ಭಾರತದ ಬ್ರಹ್ಮಸ್ ಅನ್ನು ಈಗ ಜಾಗತಿಕ ಗೇಮ್‌ ಚೇಂಜರ್ ಆಗಿ ಭಾವಿಸಲಾಗುತ್ತಿದೆ. ಆಪರೇಷನ್ ಸಿಂಧೂರದಲ್ಲಿ ಇದರ ಬಳಕೆಯಿಂದ ವಿಶ್ವಾದ್ಯಂತ ಬ್ರಹ್ಮೋಸ್ ಕ್ಷಿಪಣಿಗೆ ವ್ಯಕ್ತವಾಗಿರುವ ಬೇಡಿಕೆ ಭಾರತದ ರಕ್ಷಣಾ ಉತ್ಪನ್ನಗಳ ರಪ್ತಿನ ಹೆಚ್ಚಳ, ಸ್ವಾವಲಂಬನೆ ಮತ್ತು ಕಾರ್ಯತಂತ್ರಾತ್ಮಕ ಪ್ರಭಾವವನ್ನು ಬಿಂಬಿಸುತ್ತದೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ