NEWSನಮ್ಮಜಿಲ್ಲೆನಮ್ಮರಾಜ್ಯ

ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL

ಕಳೆದ ಕೆಲ ದಿನಗಳಲ್ಲಿ ಮುಂಬೈನಲ್ಲಿ ಮಾತ್ರವೇ 2ನೇ ಬಾರಿಗೆ ಈ ದರ ಏರಿಕೆ ಮಾಡಲಾಗಿದೆ. ಇದೇ ಮೇ 26 ರಂದು ದೆಹಲಿಯಲ್ಲೂ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ 2 ರೂ. ಹೆಚ್ಚಳ ಮಾಡಲಾಗಿತ್ತು. ಇದಕ್ಕೂ ಮುನ್ನ ಮುಂಬೈ ವ್ಯಾಪ್ತಿಯಲ್ಲಿ ಮೇ 14 ರಂದು 2 ರೂ. ಹೆಚ್ಚಳ ಮಾಡಲಾಗಿತ್ತು ಮತ್ತೆ ಇಂದು 2 ರೂ. ಏರಿಕೆ ಮಾಡಿದೆ.

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ಬಳಿಕ ಇದೀಗ ಸಂಕುಚಿತ ನೈಸರ್ಗಿಕ ಅನಿಲ Compressed Natural Gas ದರ (CNG Rate) ಮತ್ತೆ ಪ್ರತಿ ಕೆಜಿಗೆ 2 ರೂ. ಹೆಚ್ಚಳ ಮಾಡುವ ಮೂಲಕ ಗ್ರಾಹಕರಿಗೆ ಶಾಕ್‌ ನೀಡಿದೆ.

ಸರ್ಕಾರಿ ಅನಿಲ ವಿತರಕ ಮಹಾನಗರ ಗ್ಯಾಸ್ ಲಿಮಿಟೆಡ್ (MGL) ಸಂಸ್ಥೆಯು ಮುಂಬೈನಲ್ಲಿ ಇಂದಿನಿಂದ ಅನ್ವಯವಾಗುವಂತೆ ಈ ಹೊಸ ದರ ಘೋಷಿಸಿದ್ದು, ಇದು ಎರಡನೇ ಬಾರಿ ಹೆಚ್ಚಳ ಮಾಡಿದೆ. ಈ ಪರಿಷ್ಕೃತ ದರದಲ್ಲಿ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ 2 ರೂ. ಹೆಚ್ಚಿಸಲಾಗಿದ್ದು, 86 ರೂ.ಗಳಿಗೆ ಏರಿಕೆಯಾಗಿದೆ.

ಇನ್ನು ಗೃಹ ಬಳಕೆಯ ಪಿಎನ್‌ಜಿ ಸ್ಟ್ಯಾಂಡರ್ಡ್ ಕ್ಯೂಬಿಕ್ ಮೀಟರ್‌ಗೆ (SCM) 50 ಪೈಸೆ ಹೆಚ್ಚಿಸಲಾಗಿದೆ. ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬರಲಿದ್ದು, ಇದು ಗ್ರಾಹಕರ ಜೇಬಿಗೆ ಭಾರವಾಗಲಿದೆ.

ತಿಂಗಳಲ್ಲಿ 2ನೇ ಬಾರಿ ದರ ಏರಿಕೆ: ಕಳೆದ ಕೆಲ ದಿನಗಳಲ್ಲಿ ಮುಂಬೈನಲ್ಲಿ ಮಾತ್ರವೇ 2ನೇ ಬಾರಿಗೆ ಈ ದರ ಏರಿಕೆ ಮಾಡಲಾಗಿದೆ. ಇದೇ ಮೇ 26 ರಂದು ದೆಹಲಿಯಲ್ಲೂ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ 2 ರೂ. ಹೆಚ್ಚಳ ಮಾಡಲಾಗಿತ್ತು. ಇದಕ್ಕೂ ಮುನ್ನ ಮುಂಬೈ ವ್ಯಾಪ್ತಿಯಲ್ಲಿ ಮೇ 14 ರಂದು 2 ರೂ. ಹೆಚ್ಚಳ ಮಾಡಲಾಗಿತ್ತು ಮತ್ತೆ ಇಂದು 2 ರೂ. ಏರಿಕೆ ಮಾಡಿದೆ.

ಸದ್ಯ ಈಗಿನ ಪರಿಷ್ಕೃತ ದರವು ಮುಂಬೈ, ಥಾಣೆ, ನವಿ ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದ (ಎಂಎಂಆರ್) ಇತರ ಭಾಗಗಳಿಗೆ ಅನ್ವಯವಾಗಲಿದೆ. ಇನ್ನು ಸರ್ಕಾರಿ ಅನಿಲ ವಿತರಕ ಮಹಾನಗರ ಗ್ಯಾಸ್ ಲಿಮಿಟೆಡ್ (ಎಂಜಿಎಲ್) ಕಲ್ಯಾಣ್, ರಾಯಗಢ, ರತ್ನಗಿರಿ, ಲಾತೂರ್, ಉಸ್ಮಾನಾಬಾದ್, ಚಿತ್ರದುರ್ಗ ಮತ್ತು ದಾವಣಗೆರೆ ಸೇರಿದಂತೆ ಹಲವಾರು ನಗರಗಳಿಗೆ ಅನಿಲ ಪೂರೈಸುತ್ತದೆ. ಅಂದರೆ ಪ್ರಮುಖವಾಗಿ ಚಿತ್ರದುರ್ಗ, ದಾವಣಗೆರೆಯಲ್ಲೂ ಈ ಸಿಎನ್‌ಜಿ 2 ರೂ. ಹೆಚ್ಚಳವಾಗಿದೆ.

ಇದರ ಹೊರೆ ಯಾರಿಗೆ ಆಗಲಿದೆ?: ಸಿಎನ್‌ಜಿ ಬೆಲೆ ಹೆಚ್ಚಳವು ದೆಹಲಿಯಲ್ಲಿ ವಾಣಿಜ್ಯ ವಾಹನ ಚಾಲಕರಿಗೆ ಹೆಚ್ಚು ಹೊರೆಯಾಗಲಿದೆ. ಆಟೋಗಳು, ಟ್ಯಾಕ್ಸಿಗಳು, ಶಾಲಾ ವ್ಯಾನ್‌ಗಳು ಮತ್ತು ಖಾಸಗಿ ಕಾರುಗಳು ಸಿಎನ್‌ಜಿಯ ಸಾಮಾನ್ಯ ಬಳಕೆದಾರರಾಗಿದ್ದಾರೆ. ಈ ಬೆಲೆ ಏರಿಕೆಯೂ ಈ ವರ್ಗದ ಚಾಲಕರಿಗೆ ಹೆಚ್ಚು ಆರ್ಥಿಕ ಹೊರೆ ನೀಡಲಿದೆ. ಅಲ್ಲದೇ ಸಿಎನ್‌ಜಿ ಬೆಲೆ ಏರಿಕೆಯು ಮುಂಬರುವ ದಿನಗಳಲ್ಲಿ ಪ್ರಯಾಣ ಮತ್ತು ಸರಕು ಸಾಗಣೆ ದರಗಳನ್ನ ಹೆಚ್ಚಿಸಲು ಕಾರಣವಾಗಬಹುದು ಎಂದು ಆಟೋ ಮತ್ತು ಟ್ಯಾಕ್ಸಿ ಚಾಲಕರ ಒಕ್ಕೂಟಗಳು ಹೇಳಿವೆ.

Deva
the authorDeva

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ