ನಮ್ಮಜಿಲ್ಲೆಸಂಸ್ಕೃತಿ

ಜಿಲ್ಲಾಡಳಿತ ಭವನದಲ್ಲಿ ಅಗ್ನಿ ಬನ್ನಿರಾಯ ಜಯಂತಿ

ವಿಜಯಪಥ ಸಮಗ್ರ ಸುದ್ದಿ

ಬೆಂ.ಗ್ರಾ.: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಅಗ್ನಿ ಬನ್ನಿರಾಯ’ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಅಮರೇಶ್ ಎಚ್ ಅವರು ಅಗ್ನಿ ಬನ್ನಿರಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.

ಅಗ್ನಿ ಬನ್ನಿರಾಯರು ತಿಗಳ ಸಮುದಾಯದಲ್ಲಿ ಬಹಳ ಶ್ರಮ ಜೀವಿಗಳು ಅವರ ಶ್ರಮಕ್ಕೆ ಗೌರವ ಸೂಚಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಮಾರ್ಚ್ 28 ರಂದು ತಿಗಳರ ದೇವರಾದ ಅಗ್ನಿ ಬನ್ನಿರಾಯ ಜಯಂತಿಯನ್ನು ಆಚರಿಸಲಾಗುತ್ತದೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ರಾಜೀವ್ ಸುಲೋಚನಾ, ಆಪ್ತ ಸಹಾಯಕ ಅಭಿಷೇಕ್, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Deva
the authorDeva

Leave a Reply

error: Content is protected !!