NEWSನಮ್ಮರಾಜ್ಯಬೆಂಗಳೂರುರಾಜಕೀಯ

ಮತನೀಡಿದ ನಾವೆಲ್ಲರೂ ಸಾಲಗಾರರಿಗೆ ಲಕ್ಷಾಂತರ ಕೋಟಿ ಬಡ್ಡಿ ಕಟ್ಟುತ್ತಾ ಬಡ್ಡಿ ಮಕ್ಕಳಾಗಿದ್ದೇವೆ: ಮುಖ್ಯಮಂತ್ರಿ ಚಂದ್ರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇದುವರೆಗೂ ರಾಷ್ಟ್ರ ಹಾಗೂ ರಾಜ್ಯದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್, ಬಿಜೆಪಿ ಪಕ್ಷಗಳ ಭ್ರಷ್ಟಾಚಾರ, ದುರಾಡಳಿತದಿಂದಾಗಿ ಮತನೀಡಿದ ನಾವುಗಳೆಲ್ಲರೂ ಸಾಲಗಾರರಿಗೆ ಲಕ್ಷಾಂತರ ಕೋಟಿ ಬಡ್ಡಿ ಕಟ್ಟುತ್ತಾ ಬಡ್ಡಿ ಮಕ್ಕಳಾಗಿದ್ದೇವೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.

ಇಂದು (ಜು.22) ನಗರದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಅವರು, ರಾಷ್ಟ್ರದ ಸಾಲ 175 ಲಕ್ಷ ಕೋಟಿ ರೂಪಾಯಿಗಳಾಗಿದ್ದು , ರಾಜ್ಯದ ಸಾಲ 5.5 ಲಕ್ಷ ಕೋಟಿ ರೂ. ಮುಟ್ಟಿದೆ. 35 ಸಾವಿರ ಕೋಟಿ ರೂಪಾಯಿಗಳಷ್ಟು ಬಡ್ಡಿಯನ್ನು ಕಟ್ಟಬೇಕಾಗಿದೆ. ಹೀಗಿರುವಾಗ ನಾವೆಲ್ಲ ಬಡ್ಡಿ ಮಕ್ಕಳು ಅಲ್ಲದೆ ಮತ್ತೇನು ಎಂದು ಪ್ರಶ್ನಿಸಿದರು.

ದೆಹಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರ ಅಲ್ಲಿನ ಪ್ರಜೆಗಳಿಗೆ ಉಚಿತ ವಿದ್ಯುತ್, ಉಳಿಯುವ ನೀರು, ಶಿಕ್ಷಣ, ಆರೋಗ್ಯ, ಸಾರಿಗೆ ಸೇರಿದಂತೆ ಎಲ್ಲ ಸವಲತ್ತುಗಳನ್ನು ಉಚಿತವಾಗಿ ನೀಡುತ್ತಿದ್ದರೂ ಸಹ ಸಾಲರಹಿತ ಬಜೆಟ್ ಮಂಡಿಸುತ್ತಿರುವುದು ಆಮ್ ಆದ್ಮಿ ಪಕ್ಷದ ವಿಶೇಷತೆ ಎಂದು ಬಣ್ಣಿಸಿದರು.

ಕೌಟಿಲ್ಯನ ಅರ್ಥಶಾಸ್ತ್ರ ದ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಗಳಿಕೆ- ಉಳಿಕೆ – ಬಳಕೆ ” ಬಜೆಟ್‌ನ ಮೂಲ ಸ್ವರೂಪ. ದೇಶದಲ್ಲಿ ಗಳಿಕೆ ತೆರಿಗೆ ರೂಪದಲ್ಲಿ ಅತಿ ಹೆಚ್ಚಾಗಿದ್ದರೂ ಭ್ರಷ್ಟರ ಅಕ್ರಮ, ದುರಾಡಳಿತಗಳಿಂದಾಗಿ ಅವರುಗಳ ಸ್ವಾರ್ಥ ಗಳಿಕೆ ಹೆಚ್ಚಾಗಿದ್ದು, ಉಳಿಕೆ ಶೂನ್ಯಕ್ಕೆ ತಲುಪುತ್ತಿರುವುದು ದುರಂತ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಮ್ ಆದ್ಮಿ ಪಕ್ಷದ ಗ್ಯಾರೆಂಟಿಗಳನ್ನು ಕಾಪಿ ಮಾಡಿಲ್ಲ, ನೀಚತನದಿಂದ ಕದ್ದಿದೆ. ಇವರುಗಳ ಬಣ್ಣ ಆರು ತಿಂಗಳಲ್ಲಿ ಬಟಾ ಬಯಲಾಗಲಿದೆ. ರಾಜ್ಯದ ರೈತರಿಗೆ 24 ಗಂಟೆ ಉಚಿತ ವಿದ್ಯುತ್, ಸೂಕ್ತ ಬೆಂಬಲ ಬೆಲೆ, ಯುವಕರಿಗೆ ಉದ್ಯೋಗ, ಸಾಮಾನ್ಯ ಮಕ್ಕಳ ಭವಿಷ್ಯಗಾಗಿ ಉತ್ತಮ ಶಿಕ್ಷಣ ಹಾಗೂ ಆರೋಗ್ಯ ನೀಡಬೇಕೆ ಹೊರತು ಒಂದು ದಿವಸದ ಗ್ಯಾರಂಟಿಗಳಲ್ಲ ಎಂದು ಟೀಕಿಸಿದರು.

ಮಣಿಪುರ ಘಟನೆ ಯ ಬಗ್ಗೆ ಆತಂಕ: ಪ್ರಧಾನಿ ಮೋದಿ ರಾಷ್ಟ್ರದ ಜನತೆಯ ಮುಂದೆ ಕ್ಷಮೆ ಕೇಳಬೇಕು. ಸದಾ ಸಂವಿಧಾನ, ಪ್ರಜಾಪ್ರಭುತ್ವವನ್ನು ಉಳಿಸಲು ನಾವು ಮಹಾ ಮೈತ್ರಿಯಲ್ಲಿ ಜೋಡಣೆಯಾಗಿದ್ದೇವೆ. ಕರ್ನಾಟಕ ರಾಜ್ಯವನ್ನು ಭ್ರಷ್ಟರ ಕೈಯಿಂದ ಕಿತ್ತುಕೊಳ್ಳುವುದೇ ನಮ್ಮ ಹೆಗ್ಗುರಿ.

ಮುಂಬರುವ ರಾಜ್ಯದ ಜಿಲ್ಲಾ – ತಾಲೂಕು ಪಂಚಾಯಿತಿ, ಬಿಬಿಎಂಪಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ನಾವು ಸ್ಪರ್ಧೆ ಮಾಡಲಿದ್ದೇವೆ. ಪಕ್ಷದ ಕಾರ್ಯಕರ್ತರುಗಳು ಹಾಗೂ ನಾಯಕರುಗಳು ಹಗಲಿರುಳು ದುಡಿಯಬೇಕು ಎಂದು ಮುಖ್ಯಮಂತ್ರಿ ಚಂದ್ರು ಕರೆ ನೀಡಿದರು.

ಪದಗ್ರಹಣ ಸಮಾರಂಭದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಂಕಜ್ ಗುಪ್ತ, ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ , ನೂತನವಾಗಿ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಬಿ.ಟಿ. ನಾಗಣ್ಣ , ಅರ್ಜುನ ಪರಪ್ಪ ಹಲಗಿ ಗೌಡರ ಸೇರಿದಂತೆ ನೂತನವಾಗಿ ಆಯ್ಕೆಗೊಂಡಿರುವ ಉಪಾಧ್ಯಕ್ಷರು ಸಹ ಭಾಗವಹಿಸಿದ್ದರು.

Leave a Reply

error: Content is protected !!
LATEST
KSRTC ಬಸ್‌ - ಕಾರು ನಡುವೆ ಅಪಘಾತ: ಕಾರಿನಲ್ಲಿದ್ದ ನಾಲ್ವರು ಸೇರಿ ಹಲವರಿಗೆ ಗಾಯ NWKRTC: ಕರ್ತವ್ಯ ನಿರತರಾಗಿದ್ದಾಗಲೇ ಚಾಲಕರಿಗೆ ಹೃದಯಘಾತ - ವಿಜಯಪುರ ಬಸ್‌ ನಿಲ್ದಾಣದಲ್ಲೇ ಕುಸಿದು ಬಿದ್ದು ನಿಧನ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ, ಕೇಂದ್ರದ ಹಿಂದಿ ಹೇರಿಕೆಯಿಂದ ನಾಶವಾಗುತ್ತಿದೆ ಕನ್ನಡ : ರಮೇಶ್‌ ಬೆಳ್ಳಮ್ಕೊಂಡ KSRTC: 2024ರ ವೇತನ ಪರಿಷ್ಕರಣೆ ಸುಳಿವು ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ KKRTC ವಿಜಯಪುರ: ತಪ್ಪು ಮಾಡಿ ಅಮಾನತಾದ ಡಿಸಿ ಪರ ನಿಂತರೆ ನಿಗಮದ ಅಧಿಕಾರಿಗಳು!!? ಪಿರಿಯಾಪಟ್ಟಣ: ಲಂಚ ಸ್ವೀಕಾರ- ರೆಡ್ ಹ್ಯಾಂಡಾಗಿ ಲೋಕಾ ಬಲೆಗೆ ಬಿದ್ದ ಗುಮಾಸ್ತ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ