ಪ್ರಣಾಳಿಕೆ ಭರವಸೆ ಈಡೇರಿಸಿ ಅಂತ ಎಲ್ಲ ಸಂಘಟನೆಗಳು ಸರ್ಕಾರಕ್ಕೆ ಒತ್ತಾಯಿಸಿ: ಸಾರಿಗೆ ನೌಕರರ ಆಗ್ರಹ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದುಕೊಳ್ಳಲಿ ಅಥವಾ ಬಿಡಲಿ. ಆದರೆ, ಕಾಂಗ್ರೆಸ್ ಪಕ್ಷ ಚುನಾವಣೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯಂತೆ, ನೀವು ಕೊಟ್ಟಿರುವ ಭರವಸೆ ಈಡೇರಿಸಿ ಎಂದು ಎಲ್ಲ ಸಂಘಟನೆಗಳು ಒತ್ತಾಯ ಮಾಡಿ ಎಂದು ನೌಕರರು ಆಗ್ರಹಿಸುತ್ತಿದ್ದಾರೆ.
ಇದನ್ನು ಬಿಟ್ಟು ಮತ್ತೆ ಬೇರೇನು ಮಾಡಬೇಡಿ. ಇದನ್ನು ಕೇಳಲಿಕ್ಕೆ ಜಂಟಿ ಕ್ರಿಯಾ ಸಮಿತಿಯವರಿಗೆ ಏನು ತೊಂದರೆ ಆಗುತ್ತಿದೆ ಎಂಬುವುದನ್ನು ಅವರು ಸ್ಪಷ್ಟವಾಗಿ ಹೇಳಬೇಕು ಎಂದು ಸಮಸ್ತ ಅಧಿಕಾರಿಗಳು/ನೌಕರರು ಆಗ್ರಹಿಸುತಿದ್ದಾರೆ.
ಸಮಸ್ತ ಅಧಿಕಾರಿಗಳು/ ನೌಕರರ ಪರವಾಗಿರುವರು ಮೊದಲು ನೌಕರರ ಕುಟುಂಬದ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಲು ಏನು ಮಾಡಬೇಕೋ ಅದನ್ನು ಮಾಡಿ. ಆ ನಂತರ ಸಂಸ್ಥೆಯ ಆರ್ಥಿಕ ಸ್ಥಿತಿ ಬಗ್ಗೆ ವಿಚಾರ ಮಾಡುವಿರಂತೆ. ಅದಕ್ಕಾಗಿ ಉಚಿತ ಬಸ್ ಪಾಸ್ಗಳನ್ನು, ಶಕ್ತಿ ಯೋಜನೆ, ಇತರ ಸಾರ್ವಜನಿಕ ಯೋಜನೆಗಳನ್ನು ಜಾರಿಗೆ ತಂದಿರುವ ಸರ್ಕಾರ ಕ್ರಮ ತಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.
ಇನ್ನು ನೀವು ಮತ್ತು ನಿಮ್ಮ ಸಂಘಟನೆಗಳು ಸರ್ಕಾರದ ಪ್ರತಿನಿಧಿಗಳೋ ಅಥವಾ ಸಾರಿಗೆ ನೌಕರರ ಪ್ರತಿನಿಧಿಗಳೋ? ಅದನ್ನು ಹೇಳಿ. ಸರ್ಕಾರದ ಎಲ್ಲ ಇಲಾಖೆ, ಇತರ ನಿಗಮ ಮಂಡಳಿ ನೌಕರರ ವೇತನದಂತೆ ವೇತನ ಆಯೋಗದಂತೆ ವೇತನ ಹಾಗೂ ಅವರಂತೆ ಸಮಾನ ಪಿಂಚಣಿ ಯೋಜನೆ ಸೌಲಭ್ಯ ಕಲ್ಪಿಸಿ ಎಂದು ಒತ್ತಾಯಿಸುತ್ತಿದ್ದಾರೆ.
2020 ಜನವರಿ 1ರಿಂದ ಅನ್ವಯವಾಗಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳು ಬಾಕಿ ಇರುವ ವೇತನ ಕೊಡುವುದಕ್ಕೆ ಬೇಡಿಕೆ ಇಡಿ. ಇದಕ್ಕೆ ಒಕ್ಕೂಟದ ಸಂಘಟನೆಗಳ ಜತೆ ಜಂಟಿ ಸಂಘಟನೆಗಳು ಚರ್ಚಿಸಿ ಯೋಗ್ಯವಾದ ನಿರ್ಧಾರಕ್ಕೆ ಬನ್ನಿ.
ನಿಮಗೆ ಒಕ್ಕೂಟ ಈ ಬೇಡಿಕೆಗೆ ಬೇಷರತ್ ಬೆಂಬಲ ಕೊಡುತ್ತದೆ. ಈಗ ನಿರ್ಧಾರ ನಿಮ್ಮ ಅಂಗಳದಲ್ಲಿ ಇದೆ. ತಾವು ಒಳ್ಳೆಯ ನಿರ್ಧಾರಕ್ಕೆ ಬನ್ನಿ. ಸಾರಿಗೆ ನೌಕರರಿಗೆ ಒಳ್ಳೆಯದು ಮಾಡಿ ಎಂದು ನೌಕರರು ಒತ್ತಾಯ ಮಾಡುತ್ತಿದ್ದಾರೆ.
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...