ನಾಳೆ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ ಸರ್ಕಾರಿ ಬಸ್ಗಳ ಬದಲು ಖಾಸಗಿ ಬಸ್ಗಳ ಓಡಿಸಲು ಸಕಲ ಸಿದ್ಧತೆ

ಬೆಂಗಳೂರು: 2024ರ ಜನವರಿ 1ರಿಂದ ಆಗಬೇಕಿರುವ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 5ರಂದು ರಾಜ್ಯಾದ್ಯಾಂತ ಸರ್ಕಾರಿ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ಇದ್ದರಿಂದ ಎಚ್ಚೆತ್ತುಕೊಂಡಿರುವ ಎಲ್ಲ ಜಿಲ್ಲೆಗಳ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ಸರ್ಕಾರಿ ಬಸ್ಗಳ ಬದಲು ಖಾಸಗಿ ಬಸ್ಗಳನ್ನು ಓಡಿಸುವುದಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿವೆ.
ಹೌದು, ಈ ಹಿಂದೆಯೂ ಸಹ ಸಾರಿಗೆ ನೌಕರರು ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅನಿರ್ದಿಷ್ಟಾವಧಿ ಧರಣಿ ನಡೆಸಿದ್ದರು. ಈಗ ಮತ್ತೆ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ.
ಹೀಗಾಗಿ ಮುಷ್ಕರ ಬೇಡ ಅಂತ ಸಾರಿಗೆ ನೌಕರರ ಸಂಘಟನೆಗಳ ಜತೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರು ಸಭೆ ನಡೆಸಲು ತೀರ್ಮಾನಿಸಿದ್ದಾರೆ. ಆದ್ರೆ ಸಭೆಯಲ್ಲಿ ಸಿಎಂ ನಿರ್ಧಾರ ಏನು ಎಂಬ ಕೂತೂಹಲ ಮನೆ ಮಾಡಿದೆ. ಇನ್ನೂ ಸಂಘಟನೆಯ ಮುಖಂಡರು ಸಹ ಈ ಬಾರಿ ಜೋರಾಗಿಯೇ ಪ್ರತಿಭಟಿಸಿ ಹೋರಾಟ ಮಾಡೋಕೆ ಸಕಲ ತಯಾರಿಗಳನ್ನು ಮಾಡಿಕೊಂಡಿದ್ದಾರೆ.
ಒಂದು ವೇಳೆ ಮಂಗಳವಾರ ಮುಷ್ಕರ ಆರಂಭವಾದರೆ ಸಹಜವಾಗಿಯೇ ಸಾರ್ವಜನಿಕರಿಗೆ ಸಮಸ್ಯೆ ತಪ್ಪಿದ್ದಲ್ಲ. ಹೀಗಾಗಿ ಎಚ್ಚೆತ್ತಿರುವ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಅಂದು ಸಾರಿಗೆ ಬಸ್ಗಳ ಬದಲಾಗಿ ಖಾಸಗಿ ವಾಹನಗಳನ್ನ ರಸ್ತೆಗಿಳಿಸೋಕೆ ಪ್ಲಾನ್ ಮಾಡಿದೆ.
ಈ ಜಿಲ್ಲೆಯಲ್ಲಿ ಪ್ರತಿನಿತ್ಯ 584 ಬಸ್ಗಳು ಸಂಚಾರ ಮಾಡುತ್ತಿದ್ದು, 3400ಕ್ಕೂ ಹೆಚ್ಚು ಟ್ರಿಪ್ಗಳಾಗುತ್ತಿದೆ. ಹೀಗಾಗಿ ಸಾವಿರಾರು ಮಂದಿ ಈ ಕೆಎಸ್ಆರ್ಟಿಸಿ ಬಸ್ಗಳನ್ನೇ ಅವಲಂಬಿಸಿದ್ದಾರೆ. ಹೀಗಾಗಿ ಮುಷ್ಕರ ನಡೆದರೆ ಪ್ರಯಾಣಿಕರಿಗೆ ತೊಂದರೆ ಆಗಬಾರದೆಂದು ಮುಂದಾಲೋಚನೆ ಮಾಡಿರುವ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ಈಗಾಗಲೇ ಖಾಸಗಿ ವಾಹನಗಳ ಮಾಲೀಕರ ಜತೆ ಸಭೆ ನಡೆಸಿದ್ದು ಖಾಸಗಿ ಬಸ್ಗಳನ್ನು ಓಡಿಸುವುದಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ.
ಇನ್ನು ಜಿಲ್ಲೆಯಲ್ಲಿರುವ 200ಕ್ಕೂ ಹೆಚ್ಚು ಸ್ಟೇಜ್ ಹಾಗೂ ಕಂಟ್ರ್ಯಾಕ್ಟ್ ಕ್ಯಾರೇಜ್ ಖಾಸಗಿ ಬಸ್ಗಳನ್ನು ರಸ್ತೆಗಿಳಿಯಲಿವೆಯಂತೆ. ಇದರ ಜತೆಗೆ ಜಿಲ್ಲೆಯಲ್ಲಿರುವ 587 ಶಾಲಾ ಬಸ್ಗಳನ್ನು ಬಳಸಿಕೊಳ್ಳಲು ಶಾಲೆಗಳ ಮಾಲೀಕರು ಜತೆ ಸಮಾಲೋಚನೆ ಮಾಡಿದ್ದಾರೆ. ಮತ್ತೊಂದು ಕಡೆ ಸ್ಥಳೀಯವಾಗಿ ಆಟೋಗಳನ್ನು ಸಹ ಬಳಸಿಕೊಳ್ಳೋಕೆ ನಿರ್ಧಾರ ಮಾಡಲಾಗಿದೆ.
ಚಾಮರಾಜನಗರದಲ್ಲೂ ಇದೇ ಸಿದ್ಧತೆ: ಸಾರಿಗೆ ನೌಕರರ ಮುಷ್ಕರಕ್ಕೆ ಪ್ಲ್ಯಾನ್ ಹಿನ್ನೆಲೆಯಲ್ಲಿ ಖಾಸಗಿ ಬಸ್, ಮ್ಯಾಕ್ಸಿ ಕ್ಯಾಬ್, ಆಟೋ ಸೇರಿದಂತೆ ಬದಲಿ ವ್ಯವಸ್ಥೆ ಮಾಡಿಕೊಳ್ಳಲು ಈಗಾಗಲೇ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಜನರು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಬದಲಿ ವ್ಯವಸ್ಥೆ ಮಾಡಿಕೊಳ್ಳಲೂ ನಿರ್ಧರಿಸಿದೆ.
ಈ ಹಿನ್ನೆಲೆಯಲ್ಲಿ ಈಗಾಗಲೇ ಈ ಸಂಬಂಧ ಅಧಿಕಾರಿಗಳಿಗೂ ಕೂಡ ಸೂಚಿಸಲಾಗಿದೆ. ಲಭ್ಯವಿರುವ ಎಲ್ಲ ಕಡೆಯೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಲೂ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾಹಿತಿ ನೀಡಿದ್ದಾರೆ.
ಇತ್ತ ರಾಯಚೂರು ಜಿಲ್ಲಾಡಳಿತದಿಂದ ಪರ್ಯಾಯ ವ್ಯವಸ್ಥೆಗೆ ಸಿದ್ಧತೆ ನಡೆದಿದೆ. ರಾಯಚೂರಿನಲ್ಲಿ ಖಾಸಗಿ ಹಾಗೂ ಶಾಲಾ ಬಸ್ಗಳ ಬಳಕೆಗೆ ಜಿಲ್ಲಾಡಳಿತ ಮುಂದಾಗಿದೆ. ಸೋಮವಾರ ಸಭೆ ಕರೆದಿರುವ ಜಿಲ್ಲಾಡಳಿತ, ಸಭೆಯಲ್ಲಿ ಖಾಸಗಿ ವಾಹನಗಳ ಬಳಕೆ ಹಾಗೂ ದರ ನಿಗದಿ ಬಗ್ಗೆ ಚರ್ಚೆ ಮಾಡಲಿದೆ.
373 ಶಾಲಾ ಬಸ್, 60 ಮಿನಿ ಬಸ್ ಸೇರಿ ಒಟ್ಟು 738 ವಾಹನಗಳನ್ನ ಗುರುತಿಸಿರುವ ಜಿಲ್ಲಾಡಳಿತ ಶಾಲಾ ಕಾಲೇಜು ವಿದ್ಯಾರ್ಥಿಗಳು ಪ್ರಯಾಣಿಕರ ಅನುಕೂಲಕ್ಕಾಗಿ ಖಾಸಗಿ ವಾಹನಗಳ ಬಳಕೆಗೆ ಜಿಲ್ಲಾಡಳಿತ ಮುಂದಾಗಿದೆ. ಇನ್ನೂ ಖಾಸಗಿ ಚಾಲಕರು ಹಾಗೂ ಸಾರಿಗೆ ಇಲಾಖೆ ಟ್ರೈನಿ ಚಾಲಕರ ಬಳಕೆ ಮಾಡಿಕೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ. ಅಂತಾರಾಜ್ಯ ಪ್ರಯಾಣಕ್ಕಾಗಿ ಆಂಧ್ರಪ್ರದೇಶದಿಂದ ಹೆಚ್ಚುವರಿ ಬಸ್ ಓಡಾಟಕ್ಕೆ ಕರ್ನೂಲ್ ಜಿಲ್ಲಾಡಳಿತ ಜತೆ ಚರ್ಚಿಸಲಾಗಿದೆ.
ಒಟ್ಟಿನಲ್ಲಿ ಸಿಎಂ ಸಭೆಯ ನಂತರವಷ್ಟೇ ಮುಷ್ಕರ ರದ್ದಾಗುತ್ತಾ, ಇಲ್ಲ ಆರಂಭವಾಗುತ್ತಾ ಅನ್ನೋ ನಿರ್ಧಾರ ಹೊರಬರಬೇಕಿದೆ. ಆದ್ರೂ ಒಂದು ವೇಳೆ ಮುಷ್ಕರ ಆರಂಭವೇ ಆದರೆ ಖಾಸಗಿ ಬಸ್ಗಳ ಮೂಲಕವೇ ಸಾರ್ವಜನಿಕರಿಗೆ ಸಂಪೂರ್ಣ ಸೇವೆ ಒದಗಿಸೋದು ಕಷ್ಟ ಸಾಧ್ಯವಾಗಬಹುದು ಎಂದು ಹೇಳಲಾಗುತ್ತಿದೆ.
Related

You Might Also Like
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ನಿಧನ
ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ಇಂದು ತಡರಾತ್ರಿ ನಿಧನಹೊಂದಿದ್ದಾರೆ. ಕೆಂಗೇರಿ ಸಮೀಪ ಶ್ರೀಮಠ ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಿಕ...
EPS ಪಿಂಚಣಿದಾರರಿಗೆ ಕನಿಷ್ಠ ಪಿಂಚಣಿ ಜಾರಿಗೆ ಸಂಸತ್ತಿನಲ್ಲಿ ಒತ್ತಾಯಿಸಲು ಆಗ್ರಹಿಸಿ ಸಂಸದರ ಮನೆ ಮುಂದೆ ಧರಣಿಗೆ ನಿರ್ಧಾರ
ಮೈಸೂರು: ಇಪಿಎಸ್ ನಿವೃತ್ತ ನೌಕರರಿಗೆ ಕನಿಷ್ಠ ಪಿಂಚಣಿ 7500 ರೂ.+ ಇತರೆ ಸೌಲಭ್ಯಗಳನ್ನು ಜಾರಿ ಮಾಡುವ ಸಂಬಂಧ ಲೋಕಸಭೆ ಅಧಿವೇಶನದಲ್ಲಿ ಗಮನ ಸೆಳೆಯುವಂತೆ ಮೈಸೂರು ಹಾಗೂ ಚಾಮರಾಜನಗರ...