NEWSನಮ್ಮರಾಜ್ಯವಿಶೇಷ

ಅಮನ ಜೆ.ಕುಮಾರ್‌ರ ನಾಲ್ಕನೆ ಪುಸ್ತಕ “Galore of Mysteries”  ಲೋಕಾರ್ಪಣೆಗೊಳಿಸಿದ ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಗಡೆ 

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕುಮಾರಿ ಅಮನ ಜೆ.ಕುಮಾರ್ ಅವರ ನಾಲ್ಕನೆ ಪುಸ್ತಕ Galore of Mysteries ಅನ್ನು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಹಾಗೂ ಕರ್ನಾಟಕದ ಮಾಜಿ ಲೋಕಾಯುಕ್ತ ಎನ್. ಸಂತೋಷ್ ಹೆಗ್ಗಡೆ ಅವರು ಬಿಡುಗಡೆ ಮಾಡಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಸಂದೇಶವು ಈ ಪುಸ್ತಕದಲ್ಲಿ ಪ್ರಕಟವಾಗಿದ್ದು, ಈ ಪುಸ್ತಕಕ್ಕೆ ಮುನ್ನುಡಿಯನ್ನು ಚಂದ್ರಯಾನ – 3 , ISROದ ಪ್ರಾಜೆಕ್ಟ್ ಡೈರೆಕ್ಟರ್ ಡಾ. ಪಿ.ವೀರ ಮುತ್ತುವೇಲ್ ಬರೆದಿದ್ದಾರೆ.

ಈ ಪುಸ್ತಕ ಅಮನಳ 4 ನೆಯ ಪುಸ್ತಕ ಹಾಗೂ ಮೊದಲನೆಯದು fiction writing ಪುಸ್ತಕವಾಗಿದೆ. ಅಮನ ಬೆಂಗಳೂರಿನ ಬಿಷಪ್ ಕಾಟನ್ ಗರ್ಲ್ ಸ್ಕೂಲ್‌ನಲ್ಲಿ 10 ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಹಾರ್ವಡ್ ವಿಶ್ವ ವಿದ್ಯಾಲಯದಿಂದ “Masterpieces of World Literature” ಕೋರ್ಸ್ ಮಾಡಿದ್ದಾರೆ.

“ಅಮನಳ Galore of Mysteries” ಪುಸ್ತಕವು, ಕವನ ಹಾಗೂ ಕಿರು ಕಥೆಗಳ ಸಂಗ್ರಹವಾಗಿದ್ದು ರಹಸ್ಯಗಳ ಕೌತುಕವನ್ನು ಒಳಗೊಂಡಿದೆ. ಇದು ಸಾಹಸಮಯವಾಗಿದ್ದು ಭಯಾನಕ ಹಾಗೂ ಹಾಸ್ಯದಿಂದ ಕೂಡಿ ಓದುಗರನ್ನು ಪ್ರತಿಪುಟದಲ್ಲಿಯೂ ಕಲ್ಪನೆಯ ಲೋಕಕ್ಕೆ ಕರೆದೊಯ್ಯುವ ಆಕರ್ಷಣೆಯನ್ನು ಹೊಂದಿದೆ.

ಡಾ. ಲತಾ ಟಿ.ಎಸ್ ಹಾಗೂ ಜೈವಂತ್ ಕುಮಾರ್ ಅವರ ಮಗಳಾದ ಅಮನ 6ನೇ ತರಗತಿಯಲ್ಲಿದ್ದಾಗ ಇಂಗ್ಲಿಷ್ ಕವನಗಳನ್ನು ಬರೆಯಲು ಪ್ರಾರಂಭಿಸಿದ್ದು, ಅವಳ ಪ್ರಥಮ ಕವನ “Echoes of Soulful Poems” ಎರಡನೇ “World Amidst the Words” ಹಾಗೂ “Lafzon ki Mhfil “ ಮೂರನೇ ಹಿಂದಿ ಕವನ ಸಂಕಲನವು ಈಗಾಗಲೇ ಅಮೇಜಾನ್, ಪ್ಲಿಪ್ ಕಾರ್ಟ್ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಲಭ್ಯವಿವೆ.

ಅಮನಳ ದಾಖಲೆಗಳು: * ಭಾರತದ ಕಿರಿಯ ಕವಯಿತ್ರಿ ಇಂಡಿಯಾ ಬುಕ್ ಆಪ್ ರೆಕಾಡ್ಸ್ -2021 * ಏಷ್ಯಾ ಬುಕ್ ಆಪ್ ರೆಕಾಡ್ಸ್-2021 ಕಿರಿಯ ವಯಸ್ಸಿನಲ್ಲಿ ಕವಿತೆಗಳನ್ನು ಬರೆದಿರುವುದು. *ಕೌಟಿಲ್ಯ ವರ್ಷದ ಕಿರಿಯ ಕವಿ ಪ್ರಶಸ್ತಿ – 2021 ಗೋವಾದ ಗೌರವಾನ್ವಿತ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. *ನೋಬಲ್ ಬುಕ್ ಆಪ್ ವರ್ಲ್ಡ್ ರೆಕಾರ್ಡ್ ನಲ್ಲಿ ದಾಖಲೆ ಕಿರಿಯ ಕವಯಿತ್ರಿ.

*ವರ್ಲ್ಡ್ ರೆಕಾರ್ಡ್ ವಿಶ್ವವಿದ್ಯಾಲಯ ಪ್ರವೇಶ 2022, ಸತತ ವರ್ಷಗಳಲ್ಲಿ ಕವನ ಸಂಕಲನ ಪುಸ್ತಕಗಳನ್ನು ಪ್ರಕಟಿಸಿದ ಕಿರಿಯ ಕವಿಯಿತ್ರಿ *ಗೋಲ್ಡನ್ ಬುಕ್ ಆಪ್ ವರ್ಲ್ಡ್ ರೆಕಾರ್ಡ್ಸ್ 2022 ನಲ್ಲಿ ದಾಖಲೆ ಬರೆದಿದ್ದಾರೆ * ವಂಡರ್ ಬುಕ್ ಆಪ್ ವರ್ಲ್ಡ್ ರೆಕಾರ್ಡ್ಸ್ ಕಿರಿಯ ಕವಯತ್ರಿ * ಇಂಟರ್ನ್ಯಾಷನಲ್ ಬುಕ್ಅಪ್ ರೆಕಾರ್ಡ್ಸ್ ಕಿರಿಯ ಕವಿಯತ್ರಿ.

ಇನ್ನು ಇಲ್ಲಿಯವರೆಗೂ ಅಮನ ಇಂಗ್ಲಿಷ್ ಮತ್ತು ಹಿಂದಿಯಲ್ಲಿ 500 ಕ್ಕೂ ಹೆಚ್ಚು ಕವನಗಳನ್ನು ಬರೆದಿರುವುದು ಅವರ ಪ್ರತಿಭೆಯನ್ನು ಬಿಂಬಿಸುತ್ತಿದೆ ಎಂದರೆ ತಪ್ಪಾಗಲಾರದು.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ