CrimeNEWSದೇಶ-ವಿದೇಶ

ಧ್ವನಿ ಬದಲಾಯಿಸುವ ಮೊಬೈಲ್​ ಆ್ಯಪ್ ಬಳಸಿ 7 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಅನಕ್ಷರಸ್ಥ!!

ವಿಜಯಪಥ ಸಮಗ್ರ ಸುದ್ದಿ

ಭೋಪಾಲ್: ಧ್ವನಿ ಬದಲಾಯಿಸುವ ಮೊಬೈಲ್​ ಆ್ಯಪ್ ಬಳಸಿ ಕಾಲೇಜಿನ 7 ವಿದ್ಯಾರ್ಥಿನಿಯರ ಮೇಲೆ ಅನಕ್ಷರಸ್ಥನೊಬ್ಬ ಅತ್ಯಾಚಾರ ಎಸಗಿದ್ದಾನೆ. ಈ ಸಂಬಂಧ ಪೊಲೀಸರು ಒಟ್ಟು ಮೂವರನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ.

ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಮಿಲ್​ ಕಾರ್ಮಿಕ ಬ್ರಜೇಶ್ ಕುಶ್ವಾಹಾ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಂಡ ಪ್ರಮುಖ ಆರೋಪಿ.

ಅಚ್ಚರಿ ಎಂದರೆ ಈತನಿಗೆ ಓದು ಬರಹ ಏನೂಗೊತ್ತಿಲ್ಲ ಅನಕ್ಷರಸ್ಥನಾಗಿದ್ದಾನೆ. ಮಹಾರಾಷ್ಟ್ರದ ಕಂಪನಿಯೊಂದರಲ್ಲಿ ಕೆಲಸ ಮಾಡುವಾಗ ಕೈ ಸುಟ್ಟುಕೊಂಡಿದ್ದು, ಬಳಿಕ ತನ್ನ ಊರಿಗೆ ವಾಪಸ್ ಆಗಿದ್ದನು. ನಂತರ ಧ್ವನಿ ಬದಲಾಯಿಸುವ ಮೊಬೈಲ್​ ಆ್ಯಪ್​ ಬಳಸಿ ಕಾಲೇಜು ವಿದ್ಯಾರ್ಥಿನಿಯರೊಂದಿಗೆ ಮಹಿಳಾ ಪ್ರೊಫೆಸರ್​ನಂತೆ ಮಾತಾಡುತ್ತಿದ್ದನು ಎಂದು ತಿಳಿದು ಬಂದಿದೆ.

ವಿದ್ಯಾರ್ಥಿನಿಯರ ಜೊತೆಗೆ ಮಾತಾಡುವಾಗ ಮಹಿಳಾ ಪ್ರೊಫೆಸರ್​ನಂತೆ ಮಾತಾಡಿ ನಿಮ್ಮ ಮುಂದಿನ ಶಿಕ್ಷಣಕ್ಕೆ ಹಾಗೂ ಸ್ಕಾಲರ್ಶಿಪ್​ಗೆ ಸಹಾಯ ಮಾಡುವುದಾಗಿ ಹೇಳುತ್ತಿದ್ದನು. ಬಳಿಕ ಒಮ್ಮೆ ನಿರ್ಜನ ಪ್ರದೇಶದಲ್ಲಿ ಭೇಟಿ ಆಗಲು ಹೇಳಿ, ಬೈಕ್​ನಲ್ಲಿ ಬಂದು ಮನೆಗೆ ಕರೆದುಕೊಂಡು ಹೋಗುತ್ತಿದ್ದ.

ಬಳಿಕ ಅಲ್ಲಿಂದ ಅರಣ್ಯ ಪ್ರದೇಶಕ್ಕೆ ಜೊತೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗುತ್ತಿದ್ದ. ಇದೇ ರೀತಿ 7 ಕಾಲೇಜುಗಳ 7 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಎಂದು ಹೇಳಲಾಗಿದೆ.

ಇನ್ನು ಅತ್ಯಾಚರಕ್ಕೆ ಒಳಗಾದ ವಿದ್ಯಾರ್ಥಿನಿಯರು ಮಾನಕ್ಕೆ ಅಂಜಿ ದೂರು ನೀಡಲು ಮುಂದಾಗಿರಲಿಲ್ಲ. ಆದರೆ ಅವರಲ್ಲಿ ಒಬ್ಬ ಯುವತಿಯೊಬ್ಬರು ಈ ಸಂಬಂಧ ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಆರೋಪಿ ಕಾಲೇಜು ಬಳಿ ತಲೆಗೆ ಹೆಲ್ಮೆಟ್​ ಧರಿಸಿ ಬರುತ್ತಿದ್ದರಿಂದ ಪತ್ತೆ ಹಚ್ಚಲು ಪೊಲೀಸರಿಗೆ ಸ್ವಲ್ಪ ಕಷ್ಟವಾಗಿತ್ತು. ಆದರೆ ಎಲ್ಲ ಯುವತಿಯರ ಭೇಟಿ ಮಾಡಲು ಬಂದಾಗ ತನ್ನ ಕೈಗೆ ಆಗಿದ್ದ ಸುಟ್ಟ ಗಾಯ ಕಾಣಿಸಬಾರದೆಂದು​ ಹಾಕಿಕೊಳ್ಳುತ್ತಿದ್ದ ಗ್ಲೌಸ್​ಗಳೇ ಆರೋಪಿ ಹಿಡಿಯಲು ಪ್ರಮುಖ ಸುಳಿವು ನೀಡಿದವು.

ಸದ್ಯ ಆರೋಪಿಯ ಮನೆಯನ್ನು ಸರ್ಕಾರ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಿದೆ. ಈ ಬಗ್ಗೆ ಇನ್ನು ಹೆಚ್ಚಿನ ತನಿಖೆ ನಡೆಸಿ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ