NEWSನಮ್ಮಜಿಲ್ಲೆಸಿನಿಪಥ

ನಿರೂಪಕಿ ಅಪರ್ಣಾಗೆ ಇನ್ನಷ್ಟು ಖ್ಯಾತಿ ಹೆಚ್ಚಿಸಿದ್ದ ಮಜಾ ಟಾಕೀಸ್​..!

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಜಾ ಟಾಕೀಸ್​ ಮೂಲಕವೂ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡಿದ್ದ ನಿರೂಪಕಿ ಅಪರ್ಣಾ ಅವರು ತಮ್ಮ ಮಾಧುರ್ಯದ ಧ್ವನಿಪಟಲದಿಂದ ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವುದರಲ್ಲೇ ಖ್ಯಾತಿ ಗಳಿಸಿದ್ದ ನಿರೂಪಕಿ. ಅವರು ಕ್ಯಾನ್ಸರ್​ನಿಂದ ಬಳಲುತ್ತಿದ್ದರಂತೆ. ಅದು ಅಭಿಮಾನಿಗಳಿಗೆ ಗೊತ್ತಿರಲಿಲ್ಲ. ಆದರೆ, ಆ ಸುದ್ದಿ ಕೇಳಿ ಅಭಿಮಾನಿಗಳು ಶಾಕ್​ಗೆ ಒಳಗಾಗಿದ್ದಾರೆ.

ಹೌದು, ಕನ್ನಡವನ್ನು ಸ್ಪಷ್ಟವಾಗಿ ಮಾತಾಡುತ್ತಿದ್ದ ಚಲುವೆ ಅಪರ್ಣಾ ಅವರು ನೋಡುವುದಕ್ಕೂ ಅಷ್ಟೇ ಸುಂದರವಾಗಿದ್ದರು. ಇನ್ನು ಬಿಗ್​ಬಾಸ್​ ಸೀಸನ್​ 1ಕ್ಕೆ ಎಂಟ್ರಿ ಕೊಟ್ಟಿ ಅದರಲ್ಲೂ ಮಿಂಚಿದ್ದರು. ಆ ಬಳಿಕವೂ ಹಲವು ಕಾರ್ಯಕ್ರಮಳಲ್ಲಿ ಅವರು ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದರು. ಇದಾದ ಬಳಿಕ ನಟ ಸೃಜನ್ ಲೋಕೇಶ್ ಬ್ಯಾನರ್‌ನಡಿ ಮೂಡಿಬಂದ ‘ಮಜಾ ಟಾಕೀಸ್’ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದರು.

ಅದರಲ್ಲೂ ಕೂಡ ನಿರೂಪಕಿ ಅಪರ್ಣಾ ಅವರು ಅತಿ ಹೆಚ್ಚು ಖ್ಯಾತಿ ಪಡೆದುಕೊಂಡರು. ಇನ್ನು ವಿಶೇಷ ಎಂದರೆ ನಿರೂಪಕಿ ಅಪರ್ಣಾ ಅವರನ್ನು ಖುದ್ದು ನಟ ಸೃಜನ್ ಲೋಕೇಶ್ ಅವರೇ ಈ ಶೋಗೆ ಬರುವಂತೆ ಒತ್ತಾಯ ಮಾಡಿದ್ದರು. ಇದಾದ ಬಳಿಕ ಮಜಾ ಟಾಕೀಸ್​ನಲ್ಲಿ ವರಲಕ್ಷ್ಮೀ ಪಾತ್ರದ ಮೂಲಕ ಎಲ್ಲರ ಮನೆಮಾತಾಗಿದ್ದರು.

ಇನ್ನು ವರಲಕ್ಷ್ಮೀ ಪಾತ್ರದಲ್ಲಿ ನಟಿಸಿದ್ದ ಅಪರ್ಣಾ ಅವರ ಸಲ್ಲು, ಒಬಾಮಾ ಕಾಲ್ ಮಾಡೋದು ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಈ ಮೂಲಕ ಕೂಡ ಅಭಿಮಾನಿ ಬಳಗವನ್ನು ಇನ್ನಷ್ಟು ಗಳಿಸಿಕೊಂಡಿದ್ದರು. ವರಲಕ್ಷ್ಮೀ ಪಾತ್ರ ಮಾಡಿದ ಮೇಲೆ ಅವರ ನಿಜ ಜೀವನದಲ್ಲಿ ಸಾಕಷ್ಟು ಬದಲಾವಣೆಗಳು ಕೂಡ ಆಗಿದ್ದವು. ಈ ಮಜಾ ಟಾಕೀಸ್​ ಮಾಡಿದ ಮೇಲೆ ಕಾಮಿಡಿ ಸಿನಿಮಾಕ್ಕೆ ಆಫರ್ ಬಂದಿತಂತೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ