NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನಿಗಮಗಳಿಗೆ 541 ಕೋಟಿ ತೆರಿಗೆ ವಿನಾಯಿತಿ ಘೋಷಣೆ ಓಕೆ, ವೇತನ ಹಿಂಬಾಕಿ ಯಾವಾಗ ಕೊಡುತ್ತೀರಾ ಸಿಎಂ?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ನಾಲ್ಕೂ ಸಾರಿಗೆ ನಿಗಳಿಗೆ ರಾಜ್ಯ ಸರ್ಕಾರ 541 ಕೋಟಿ ತೆರಿಗೆ ವಿನಾಯಿತಿ ಘೋಷಿಸಿದೆ. ಇದರಿಂದ ಸಾರಿಗೆ ಸಂಸ್ಥೆ ಇನ್ನಷ್ಟು ಸಮರ್ಪಕವಾದ ಸೇವೆ ನೀಡುವುದಕ್ಕೆ ಶಕ್ತಿ ಬಂದಂತಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ನಿಗಮಗಳಿಗೆ ಒಂದು ವರ್ಷದಲ್ಲಿ ಒಟ್ಟು 541.87 ಕೋಟಿ ರೂ.ಗಳಷ್ಟು ಮೋಟಾರು ವಾಹನ ತೆರಿಗೆಯಲ್ಲಿ ವಿನಾಯಿತಿ ಸಿಗಲಿದ್ದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರಸ್ತಾಪಿಸಿರುವ ಈ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ.

ಹೀಗಾಗಿ ಕೆಎಸ್​ಆರ್​ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ ಮತ್ತು ಎನ್‌ಡಬ್ಲ್ಯುಕೆಆರ್‌ಟಿಸಿ ನಿಗಮನಗಳಿಗೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ ಘೋಷಿಸಿದೆ. ಶಕ್ತಿ ಯೋಜನೆ ಕಾಂಗ್ರೆಸ್ ಪಕ್ಷದ ಚುನಾವಣಾ ಗ್ಯಾರಂಟಿಗಳಲ್ಲಿ ಒಂದಾಗಿತ್ತು. ಅಧಿಕಾರಕ್ಕೆ ಬಂದ ಬಳಿಕ ಹೆಚ್ಚು ತಡ ಮಾಡದೇ ಈ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿತು.

ರಾಜ್ಯದ ಎಲ್ಲ ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಕಲ್ಪಿಸುವ ಸ್ಕೀಮ್ ಇದು. ಶಕ್ತಿ ಯೋಜನೆ ಜಾರಿಗೊಂಡ ಬಳಿಕ ಎಲ್ಲ ನಾಲ್ಕು ಸಾರಿಗೆ ನಿಗಮನಗಳ ಬಸ್ಸುಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಸರ್ಕಾರ ತೆಗೆದುಕೊಂಡಿರುವ ಕ್ರಮ ಶ್ಲಾಘನೀಯವಾಗಿದೆ.

ಸಾರಿಗೆ ನಿಗಮನಗಳಿಗೆ ಮೋಟಾರು ವಾಹನ ತೆರಿಗೆಯಲ್ಲಿ ಸಿಗಲಿರುವ ವಿನಾಯಿತಿ; ಒಂದು ವರ್ಷದಲ್ಲಿ ಒಟ್ಟು ವಿನಾಯಿತಿ ಮೊತ್ತ: 541.87 ಕೋಟಿ ರೂ. ಅದರಲ್ಲಿ ಕೆಎಸ್ಆರ್​ಟಿಸಿ: 243.52 ಕೋಟಿ ರೂಪಾಯಿ ವಿನಾಯಿತಿ.

ಬಿಎಂಟಿಸಿ: 119.88 ಕೋಟಿ ರೂಪಾಯಿ ವಿನಾಯಿತಿ, ಎನ್​ಡಬ್ಲ್ಯುಕೆಆರ್​ಟಿಸಿ (ವಾಯವ್ಯ ಸಾರಿಗೆ ನಿಗಮ): 103.91 ಕೋಟಿ ರೂಪಾಯಿ ವಿನಾಯಿತಿ. ಕೆಕೆಆರ್​ಟಿಸಿ (ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ): 114.16 ಕೋಟಿ ರೂಪಾಯಿ ವಿನಾಯಿತಿ ಸಿಗಲಿದೆ.

ಸಾರಿಗೆ ನಿಗಮಗಳಿಗೆ ಮೋಟಾರು ವಾಹನದಲ್ಲಿ ತೆರಿಗೆ ವಿನಾಯಿತಿ ನೀಡುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ ಅಂದಿನ ಸರ್ಕಾರ 1,500 ಕೋಟಿ ರೂ.ಗೂ ಹೆಚ್ಚು ಮೊತ್ತದಷ್ಟು ತೆರಿಗೆ ವಿನಾಯಿತಿ ನೀಡಿತ್ತು. ಶಕ್ತಿ ಯೋಜನೆಗೆ ಮೊದಲು ಸಾರಿಗೆ ನಿಗಮಗಳ ಒಟ್ಟಾರೆ ಆದಾಯ ಒಂದು ವರ್ಷದಲ್ಲಿ 8,000 ಕೋಟಿ ರೂ.ಗೂ ಹೆಚ್ಚು ಇತ್ತು.

ಸಬ್ಸಿಡಿ ಮತ್ತಿತರ ಕಾರಣಗಳಿಂದ 4,000 ಕೋಟಿ ರೂ.ಗೂ ಹೆಚ್ಚು ಆದಾಯ ನಷ್ಟ ಎದುರಾಗಿತ್ತು. ಇದರಲ್ಲಿ ಸಬ್ಸಿಡಿ ಮೊತ್ತವನ್ನು ಸರ್ಕಾರ ತುಂಬಿಸಿಕೊಡಬೇಕು. ಆದರೆ, ವಿವಿಧ ಸರ್ಕಾರಗಳು ಈವರೆಗೆ ಸಾವಿರಾರು ಕೋಟಿ ರೂ ಮೊತ್ತದಷ್ಟು ಸಬ್ಸಿಡಿ ಹಣವನ್ನು ಸಾರಿಗೆ ನಿಗಮಗಳಿಗೆ ವರ್ಗಾವಣೆ ಮಾಡದೇ ಬಾಕಿ ಉಳಿಸಿಕೊಂಡಿವೆ.

ಈ ಮಧ್ಯೆ ಶಕ್ತಿ ಸ್ಕೀಮ್​ನಿಂದ ನಿಗಮಗಳ ಆದಾಯಕ್ಕೆ ಇನ್ನಷ್ಟು ಖೋತಾ ಬಿದ್ದಿದೆ. 542 ಕೋಟಿ ರೂ ಮೋಟಾರು ತೆರಿಗೆ ವಿನಾಯಿತಿ ನೀಡುವ ಮೂಲಕ ಒಂದಷ್ಟು ನಷ್ಟದ ಹೊರೆಯನ್ನು ತಗ್ಗಿಸುವ ಪ್ರಯತ್ನ ಸರ್ಕಾರ ಮಾಡುತ್ತಿದೆ. ಆದರೆ, 2020ರ ಜನವರಿಯಿಂದ ನಿಗಮಗಳ ಅಧಿಕಾರಿಗಳು, ಸಿಬ್ಬಂದಿಗೆ ಹೆಚ್ಚಳವಾಗಿರುವ ವೇತನ ಹಿಂಬಾಕಿ ಕೊಡುವುದಕ್ಕೆ ಇನ್ನು ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದೆ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಅಧಿಕಾರಿಗಳು ಅಮಸಮಾಧಾನ ಹೊರಹಾಕುತ್ತಿದ್ದಾರೆ.

Leave a Reply

error: Content is protected !!
LATEST
BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ