NEWSಕ್ರೀಡೆ

ಹಾರ್ದಿಕ್ ಪಾಂಡ್ಯಗೆ ಮತ್ತೊಂದು ಬ್ಯಾಡ್‌ ನ್ಯೂಸ್‌ : ಮುಂಬೈ ಇಂಡಿಯನ್ಸ್​ಗೆ ಬಿಗ್ ಶಾಕ್

ವಿಜಯಪಥ ಸಮಗ್ರ ಸುದ್ದಿ

ಪಿಎಲ್ 2024 ರಲ್ಲಿ ಸತತ ಎರಡು ಪಂದ್ಯಗಳನ್ನು ಸೋತಿರುವ ಮುಂಬೈ ಇಂಡಿಯನ್ಸ್​ಗೆ ಇದೀಗ ಮತ್ತೊಂದು ಆಘಾತ ಉಂಟಾಗಿದೆ. ತಂಡದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಮುಂದಿನ ಕೆಲ ಪಂದ್ಯಗಳಲ್ಲೂ ಆಡಲು ಸಾಧ್ಯವಾಗುವುದಿಲ್ಲ ಎಂಬ ಸುದ್ದಿ ಹೊರಬಿದ್ದಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಐಪಿಎಲ್ 2024 ರಲ್ಲಿ ಕೆಟ್ಟ ಆರಂಭ ಪಡೆದುಕೊಂಡಿದೆ. ಟೂರ್ನಮೆಂಟ್ ಈಗಷ್ಟೇ ಆರಂಭಗೊಂಡಿದ್ದರೂ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ತಂಡ ಗುಜರಾತ್ ಟೈಟಾನ್ಸ್ ಮತ್ತು ಎಸ್​ಆರ್​ಹೆಚ್ ವಿರುದ್ಧ ಸತತ ಎರಡು ಪಂದ್ಯಗಳಲ್ಲಿ ಸೋತಿದೆ.

ಈ ಸೋಲಿನ ಹಿನ್ನಡೆ ನಡುವೆ ಮುಂಬೈ ಇಂಡಿಯನ್ಸ್​ಗೆ ಮತ್ತೊಂದು ಆಘಾತ ಉಂಟಾಗಿದೆ. ತಂಡದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಮುಂದಿನ ಕೆಲ ಪಂದ್ಯಗಳಲ್ಲೂ ಆಡಲು ಸಾಧ್ಯವಾಗುವುದಿಲ್ಲ ಎಂಬ ಸುದ್ದಿ ಹೊರಬಿದ್ದಿದೆ. ವಿಶ್ವದ ನಂಬರ್ ಒನ್ ಟಿ20 ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಸ್ಪೋರ್ಟ್ಸ್ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಇದುವರೆಗೂ ಚೇತರಿಸಿಕೊಳ್ಳಲು ಸಾಧ್ಯವಾಗಿಲ್ಲ.

ಸೂರ್ಯ ಇನ್ನೂ ಸಂಪೂರ್ಣ ಫಿಟ್ ಆಗಿರದ ಕಾರಣ ಎನ್​ಸಿಎನಿಂದ ಆಡಲು ಅನುಮತಿ ಪಡೆದಿಲ್ಲ. ಹೀಗಾಗಿ ಅವರು ಮುಂಬರುವ ಕೆಲವು ಐಪಿಎಲ್ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಇವರ ಪುನರಾಗಮನ ಸ್ವಲ್ಪ ಸಮಯ ತೆಗೆದುಕೊಳ್ಳಬಹುದು ಎಂದು ಬಿಸಿಸಿಐ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸ್ವೀಕರಿಸಲಾಗಿದೆ.

ಆದಾಗ್ಯೂ, ಬಿಸಿಸಿಐ ಸೂರ್ಯಕುಮಾರ್ ಯಾದವ್ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳಲು ಬಯಸುತ್ತಿಲ್ಲ. ಏಕೆಂದರೆ ಐಪಿಎಲ್ ನಂತರ ಟಿ20 ವಿಶ್ವಕಪ್ ಜೂನ್‌ನಲ್ಲಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿದ್ದು, ಅಲ್ಲಿ ಇವರ ಪಾತ್ರ ಪ್ರಮುಖವಾಗಿರುತ್ತದೆ. ಹೀಗಾಗಿ ಐಪಿಎಲ್ ಆಡಿಲ್ಲದಿದ್ದರೂ ವಿಶ್ವಕಪ್​ಗೆ ಇವರು ಬೇಕು ಎಂಬ ನಿರ್ಧಾರದಲ್ಲಿದೆ ಬಿಸಿಸಿಐ.

ಸೂರ್ಯಕುಮಾರ್ ಯಾದವ್ ಅನುಪಸ್ಥಿತಿಯಲ್ಲಿ ಮುಂಬೈ ತಂಡ ಪಂಜಾಬ್​ನ ಸ್ಫೋಟಕ ಬ್ಯಾಟರ್ ನಮನ್ ಧೀರ್​ಗೆ ಅವಕಾಶ ನೀಡುತ್ತಿದೆ. ಈ ಬಲಗೈ ಬ್ಯಾಟ್ಸ್‌ಮನ್ ಇದುವರೆಗಿನ ಎರಡೂ ಪಂದ್ಯಗಳಲ್ಲಿ 50 ರನ್ ಗಳಿಸಿದ್ದಾರೆ. ಸೂರ್ಯಕುಮಾರ್ ಆದಷ್ಟು ಬೇಗ ಮರಳಲಿ ಎಂದು ಮುಂಬೈ ತಂಡ ಬಯಸುತ್ತದೆ. ಹಾರ್ದಿಕ್ ಪಡೆ ಸೋಮವಾರ ರಾಜಸ್ಥಾನ್ ರಾಯಲ್ಸ್ ಅನ್ನು ಎದುರಿಸಲಿದೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...