CrimeNEWSರಾಜಕೀಯ

ಮತ್ತೊಬ್ಬ ಬಿಎಂಟಿಸಿ ಚಾಲಕ ಆತ್ಮಹತ್ಯೆ: ಸಚಿವ ಶ್ರೀರಾಮುಲು ರಾಜೀನಾಮೆಗೆ ಎಎಪಿ ಆಗ್ರಹ – ಮನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸುವ ಎಚ್ಚರಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಒಂದೇ ದಿನ ಮೂವರು ಸಾರಿಗೆ ನೌಕರರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಸುವ ಮುನ್ನವೇ ಮತ್ತೊಬ್ಬ  ಬಿಎಂಟಿಸಿ 25ರ ಘಟಕದ ಚಾಲಕ  ಈಶಣ್ಣ ಗುರುವಾರ ಬೆಳಗ್ಗೆ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ ನಿಗಮದ ಅಧಿಕಾರಿಗಳು ಮತ್ತು ಸಾರಿಗೆ ಸಚಿವರ ವಿರುದ್ಧ ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್‌ ದಾಸರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಎಂಟಿಸಿ ಚಾಲಕ ಈಶಣ್ಣ.

ಇನ್ನು ನೌಕರರ ಸಮಸ್ಯೆ ಆಲಿಸದ ಸಾರಿಗೆ ಸಚಿವ ಶ್ರೀರಾಮುಲು ರಾಜೀನಾಮೆ ನೀಡಬೇಕು, ಇಲ್ಲದಿದ್ದರೆ, ಅವರ ಮನೆಗೆ ನೂರಾರು ಕಾರ್ಯಕರ್ತರೊಂದಿಗೆ ಮುತ್ತಿಗೆ ಹಾಕುತ್ತೇವೆ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮೋಹನ್‌ ದಾಸರಿ ಎಚ್ಚರಿಕೆ ನೀಡಿದರು.

ಕೆಲವು ದಿನಗಳ ಹಿಂದೆಯಷ್ಟೇ ಕೇವಲ 24 ಗಂಟೆಗಳ ಅಂತರಲ್ಲಿ ಮೂವರು ಸಾರಿಗೆ ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ವೇಳೆ ಆಮ್‌ ಆದ್ಮಿ ಪಾರ್ಟಿ ನಾಯಕರು ನೌಕರರ ಪರವಾಗಿ ದನಿ ಎತ್ತಿದ್ದರು. ಈ ಕಾರಣಕ್ಕೆ ಸುಮಾರು 18 ಎಎಪಿ ನಾಯಕರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ನೌಕರರ ಪರ ದನಿ ಎತ್ತುವರರನ್ನು ಹತ್ತಿಕ್ಕಲು ಸಚಿವ ಶ್ರೀರಾಮುಲು ಹಾಗೂ ಬಿಎಂಟಿಸಿ ಅಧ್ಯಕ್ಷ ನಂದೀಶ್‌ ರೆಡ್ಡಿಯವರು ಪೊಲೀಸ್‌ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಇದಕ್ಕೆಲ್ಲ ನಾವು ಹೆದರುವುದಿಲ್ಲ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಸಾರಿಗೆ ನೌಕರರ ಸಮಸ್ಯೆಗಳನ್ನು ಬಗೆಹರಿಸುವುದರಲ್ಲಿ ಸಚಿವ ಶ್ರೀರಾಮುಲು ಸಂಪೂರ್ಣ ವಿಫಲರಾಗಿದ್ದಾರೆ. ಅವರಿಗೆ ಹಣ ಮಾಡುವುದು ಮುಖ್ಯವಾಗಿದೆಯೇ ಹೊರತು ಸಾರಿಗೆ ವ್ಯವಸ್ಥೆಯ ಅಭಿವೃದ್ಧಿ ಹಾಗೂ ನೌಕರರ ಹಿತ ಬೇಕಾಗಿಲ್ಲ ಎಂದು ಆರೋಪಿಸಿದರು.

ಇನ್ನು ಬಿಎಂಟಿಸಿ ಅಧ್ಯಕ್ಷ ನಂದೀಶ್‌ ರೆಡ್ಡಿಯವರು ಹಾಗೂ ಕೆಲವು ಉನ್ನತ ಅಧಿಕಾರಿಗಳಿಂದಾಗಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಭ್ರಷ್ಟಾಚಾರಕ್ಕೆ ಸಹಕರಿಸದ ಪ್ರಾಮಾಣಿಕ ನೌಕರರು ನಿರಂತರವಾಗಿ ಕಿರುಕುಳ ಅನುಭವಿಸಬೇಕಾಗಿದೆ ಎಂದು ಕಿಡಿಕಾರಿದರು.

ನೌಕರರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲದ ಶ್ರೀರಾಮುಲು ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಾರಿಗೆ ಸಂಸ್ಥೆಯ ಘನತೆ ಉಳಿಸಬೇಕು. ಇಲ್ಲದಿದ್ದರೆ ಮಂಗಳವಾರ ಶ್ರೀರಾಮುಲು ನಿವಾಸದೆದುರು ಆಮ್‌ ಆದ್ಮಿ ಪಾರ್ಟಿ ವತಿಯಿಂದ ಬೃಹತ್‌ ಪ್ರತಿಭಟನೆ ನಡೆಸಿ ಮುತ್ತಿಗೆ ಹಾಕಲಾಗುವುದು ಎಂದು ಮೋಹನ್‌ ದಾಸರಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಚನ್ನಪ್ಪಗೌಡ ನೆಲ್ಲೂರು ಹಾಗೂ ಸುರೇಶ್‌ ರಾಥೋಡ್‌ ಮತ್ತಿತರರು ಭಾಗವಹಿಸಿದ್ದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ