NEWSನಮ್ಮಜಿಲ್ಲೆಸಂಸ್ಕೃತಿ

₹600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪ ವರ್ಷದೊಳಗೆ ಪೂರ್ಣಗೊಳಿಸಿ ಲೋಕಾರ್ಪಣೆ: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಮ್ಮ ಸರ್ಕಾರ ಆರಂಭಿಸಿದ ₹600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪವನ್ನು ಮುಂದಿನ ವರ್ಷ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಇಂದು ನಗರದ ಕಲಾಮಂದಿರದಲ್ಲಿ ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಆಯೋಜಿಸಿದ್ದ “ಬಸವ ಜಯಂತಿ-2025” “ನಮ್ಮ ನಡೆ ಅನುಭವ ಮಂಟಪದ ಕಡೆ” ಕಾರ್ಯಕ್ರಮ ಉದ್ಘಾಟಿಸಿ ಮಾನಾಡಿದರು

ಸಕಲ ವೃತ್ತಿಗಳೂ ಪವಿತ್ರ ಎನ್ನುವ ಮಹಾನ್ ಮಾನವೀಯ ಸಂದೇಶವನ್ನು ಜಗತ್ತಿಗೆ ನೀಡಿದ ಬಸವಣ್ಣನವರು ಕ್ರಾಂತಿಪುರುಷ ಮಾತ್ರವಲ್ಲ, ವಿಶ್ವ ವಿಖ್ಯಾತ ಆರ್ಥಿಕ ತಜ್ಞರೂ ಆಗಿದ್ದರು. ಕಾಯಕ ಮತ್ತು ದಾಸೋಹದ ಶ್ರಮ ಸಂಸ್ಕೃತಿಯ ಮಹತ್ವವನ್ನು ಬಸವಣ್ಣ ಇಡೀ ವಿಶ್ವಕ್ಕೆ ನೀಡಿದರು ಎಂದರು.

ಬಸವಾದಿ ಶರಣರಿಂದ ಆದ ಜಾತಿ ವ್ಯವಸ್ಥೆ ವಿರುದ್ಧದ ಸಾಮಾಜಿಕ ಕ್ರಾಂತಿ ಪ್ರಪಂಚದ ಬೇರೆ ಎಲ್ಲೂ ನಡೆದಿಲ್ಲ. ಸಮ ಸಮಾಜ ಮತ್ತು ಜಾತ್ಯತೀತ ಸಮಾಜ ನಿರ್ಮಾಣಕ್ಕಾಗಿ ಹೋರಾಡಿದ ಬಸವಾದಿ ಶರಣರು ನುಡಿದಂತೆ ನಡೆದರು ಎಂದು ತಿಳಿಸಿದರು.

ಇನ್ನು ಜಾತಿ, ವರ್ಗ ರಹಿತ ಮಾನವೀಯ ಸಮಾಜ ಅವರ ತುಡಿತವಾಗಿತ್ತು. ಬಸವಾದಿ ಶರಣರ ಅನುಭಾವವೇ ವಚನಗಳಾಗಿವೆ. ವಚನ‌ ಎಂದರೆ ಮಾತು. ಕನ್ನಡ ಸಾಹಿತ್ಯದಲ್ಲಿ ವಚನ ಮತ್ತು ದಾಸ ಸಾಹಿತ್ಯ ದೊಡ್ಡ ಮೈಲಿಗಲ್ಲು. ಅಕ್ಷರ ಸಂಸ್ಕೃತಿಯಿಂದ ವಂಚಿತರನ್ನಾಗಿ ಮಾಡಲಾಗಿದ್ದವರಿಗೆ ವಚನ ಸಾಹಿತ್ಯ ಆಡು ಮಾತಿನ ಮೂಲಕ ತಲುಪಿತು ಎಂದರು.

ಸಂಸ್ಕೃತ ಕಲಿಯುವ ಶೂದ್ರರ ಕಿವಿಗೆ ಕಾದ ಸೀಸ ಹುಯ್ಯುವ ಶಿಕ್ಷೆ ಇದ್ದುದ್ದರಿಂದ ಶೂದ್ರ ಸಮುದಾಯ ಶಿಕ್ಷಣದಿಂದ ವಂಚಿತರಾದರು. ನನ್ನ ಅಪ್ಪ, ಅಮ್ಮ ಇಬ್ಬರೂ ಶಿಕ್ಷಣದಿಂದ ವಂಚಿತರಾಗಿದ್ದರು. ರಾಜಪ್ಪ ಮೇಸ್ಟ್ರು ಕಾರಣದಿಂದ ನಾನು ನೇರವಾಗಿ ಐದನೇ ತರಗತಿಗೆ ದಾಖಲಾಗಿ ಶಿಕ್ಷಣ ಪಡೆದು ಎರಡು ಬಾರಿ ಮುಖ್ಯಮಂತ್ರಿಯಾದೆ. ಅಂಬೇಡ್ಕರ್ ಅವರ ಕಾರಣದಿಂದ ನನಗೆ ಶಿಕ್ಷಣ ಸಿಕ್ಕರೆ, ಸಂವಿಧಾನದ ಕಾರಣದಿಂದ ನಾನು ಮುಖ್ಯಮಂತ್ರಿಯಾದೆ ಎಂದು ಹೇಳಿದರು.

ಬಸವ ಬಳಗಗಳ ಒಕ್ಕೂಟದ ಬೇಡಿಕೆಯಂತೆ ಬಸವ ಭವನ ನಿರ್ಮಿಸಲು ಹೆಚ್ಚಿನ‌ ಅನುದಾನವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು. ಸಮಾರಂಭದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಚಿವ ಎಚ್‌.ಸಿ.ಮಹದೇವಪ್ಪ ಸೇರಿದಂತೆ ಹಲವರು ಇದ್ದರು.

Megha
the authorMegha

Leave a Reply

error: Content is protected !!
Latest news
BMTC ಘಟಕ-29ರ ಆವರಣದಲ್ಲೇ ನಡೆದ ಅಪಘಾತ: ಗಾಯಾಳು ಚಾಲಕನಿಗೆ 6 ಸಾವಿರ ಕೊಟ್ಟು ಸುಮ್ಮನಾದ ಅಧಿಕಾರಿಗಳು- ಬಸ್‌ ನಿಲ್ಲಿಸಿ... KSRTC ಪುತ್ತೂರು: ಬಿದ್ದು ಎರಡೂ ಕಾಲುಗಳ ಮುರಿದುಕೊಂಡಿದ್ದ ಚಾಲಕನಿಗೆ 71 ಸಾವಿರ ರೂ. ನೆರವು- ಧೈರ್ಯ ತುಂಬಿದ ಡಿಎಂ KSRTC ಅರಸೀಕೆರೆ: ಚಾಲನಾ ಸಿಬ್ಬಂದಿ ಒಗ್ಗಟ್ಟಿಗೆ ಮಣಿದು ಎಂಡಿಗೆ ನೋಟಿಸ್‌ ಜಾರಿ ಮಾಡಿದ ಕಾರ್ಮಿಕ ಆಯುಕ್ತರು ಅರ್ಹ ದಲಿತರು, ಹಿಂದುಳಿದವರಿಗೆ ಯೋಜನೆ ಸೌಲಭ್ಯ ತಲುಪಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಅನುರಾಧ ತಾಕೀತು ಮಾವು ಬೆಳೆ ಹೆಕ್ಟೇರಿಗೆ 80 ಸಾವಿರ ರೂ. ಸಿಗಲಿದ್ದು ರೈತರು ಬೆಳೆ ವಿಮೆಗೆ ಅರ್ಜಿ ಹಾಕಿ: ಹಿರಿಯ ಸಹಾಯಕ ತೋಟಗಾರಿಕೆ ನಿರ್... ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ಭಾರಿ ನಗದು ಬಹುಮಾನ: ಕ್ರೀಡಾಪಟುಗಳ ಬದುಕಿಗೆ ಭರವಸೆ ನೀಡಿದ ಸಿಎಂ BMTC: ಮಹಿಳಾ ಕಂಡಕ್ಟರ್‌ಗಳಿಗೆ ಶೇ.33ರಷ್ಟು ಮುಂಬಡ್ತಿ ಮೀಸಲಾತಿ ಅಸಾಧ್ಯ- ಸಂಸ್ಥೆ ನಿಯಮದಲ್ಲೂ ಇಲ್ಲ ಅವಕಾಶ ಎಂದ ಸಿಪಿಎ... ಶಕ್ತಿಯೋಜನೆಗಾಗಿ ರಾಜಸ್ಥಾನದ ಆಧಾರ್‌ ಕಾರ್ಡ್‌ಗೆ ಬೆಂಗಳೂರು ನಿವಾಸಿ ಎಂಬ ನಕಲಿ ಕಾರ್ಡ್‌ ಸೃಷ್ಟಿಸಿಕೊಂಡು ಮಹಿಳೆ ಓಡಾಟ! BMTC ಘಟಕ 29: ಡಿಪೋ ಆವರಣದಲ್ಲಿ ಎಲೆಕ್ಟ್ರಿಕ್ ಬಸ್ ಡಿಕ್ಕಿ- ಚಾಲಕನಿಗೆ ತೀವ್ರ ಗಾಯ ತಿ.ನರಸೀಪುರ: ಯುವಕನ ಕಿರುಕುಳದಿಂದ ಮದುವೆ ನಿಶ್ಚಯವಾಗಿದ್ದ ಯುವತಿ ಜತೆಗೆ ಅಪ್ಪಅಮ್ಮ ಆತ್ಮಹತ್ಯೆ