NEWSನಮ್ಮರಾಜ್ಯಶಿಕ್ಷಣ-

ಪೋಸ್ಟ್ ಮೆಟ್ರಿಕ್, ಮೆರಿಟ್-ಕಮ್-ಮೀನ್ಸ್ ಶುಲ್ಕ ಮರುಪಾವತಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ : 2023-24ನೇ ಶೈಕಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪೋಸ್ಟ್ ಮೆಟ್ರಿಕ್ ಮತ್ತು ಮೆರಿಟ್-ಕಮ್-ಮೀನ್ಸ್ ಶುಲ್ಕ ಮರುಪಾವತಿ ವಿದ್ಯಾರ್ಥಿವೇತನ (ಪಿ.ಯು.ಸಿ, ಡಿಪ್ಲೊಮಾ, ತಾಂತ್ರಿಕ ಮತ್ತು ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್) ಗಳಲ್ಲಿ ಓದುತ್ತಿರುವ ಕರ್ನಾಟಕ ರಾಜ್ಯದಲ್ಲಿರುವ ಅರ್ಹ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ಆನ್ಲೈನ್ https://ssp.Karnataka.gov.in (ಸ್ಟೇಟ್ ಸ್ಕಾಲರ್ಷಿಪ್ ಪೋರ್ಟಲ್) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 15: ವಿದ್ಯಾರ್ಥಿಯು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ), ವಿದ್ಯಾರ್ಥಿಯು ಕರ್ನಾಟಕ ನಿವಾಸಿಯಾಗಿರಬೇಕು, ವಿದ್ಯಾರ್ಥಿಯು ಓದುತ್ತಿರುವ ಹಿಂದಿನ ವರ್ಷದಲ್ಲಿ ಕನಿಷ್ಠ 50% ಅಂಕಗಳನ್ನು ಗಳಿಸಿರಬೇಕು.

ಮೆಟ್ರಿಕ್ ನಂತರದ (ಶುಲ್ಕ ಮರುಪಾವತಿ) ಗಾಗಿ ವಿದ್ಯಾರ್ಥಿಯ ಕುಂಟುಂಬದ ವಾರ್ಷಿಕ ಆದಾಯವು ರೂ.2.00ಲಕ್ಷ ಮೀರಿರಬಾರದು. 5.ಮೆರಿಟ್-ಕಮ್-ಮೀನ್ಸ್ (ಶುಲ್ಕ ಮರುಪಾವತಿ)ಗಾಗಿ ವಿದ್ಯಾರ್ಥಿಯ ಕುಂಟುಂಬದ ವಾರ್ಷಿಕ ಆದಾಯವು ರೂ.2.50ಲಕ್ಷ ಮೀರಿರಬಾರದು.

ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ https://Dom.Karnataka.gov.in ಅನ್ನು ವೀಕ್ಷಿಸಿ, ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು (MIC) ಸಂಪರ್ಕಿಸುವುದು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990, ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ 080-22866966, ದೊಡ್ಡಬಳ್ಳಾಪುರ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ:080-27627444/ 9986874875, ನೆಲಮಂಗಲ ತಾಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ 080-27725445/9986951290.

ದೇವನಹಳ್ಳಿ ತಾಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ:080-27682882/8861926851, ಹೊಸಕೋಟೆ ತಾಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ:080-27931899/7676905779 ಅನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ