NEWSಉದ್ಯೋಗನಮ್ಮರಾಜ್ಯ

ರಾಜ್ಯ ಹೈಕೋರ್ಟ್‌ನ ಖಾಲಿ ಇರುವ ಚಾಲಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 25,550-81,100 ರೂ.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಹೈಕೋರ್ಟ್‌ನಲ್ಲಿ ಖಾಲಿ ಇರುವ ಚಾಲಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏಪ್ರಿಲ್ 6 ಕೊನೆಯ ದಿನವಾಗಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ವಾಹನ ಚಾಲಕರ ಹುದ್ದೆಗಳಿಗೆ ನಿಗದಿತ ಅವಧಿಯಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಹೈಕೋರ್ಟ್ ತನ್ನ ನೋಟಿಫಿಕೇಷನ್‌ನಲ್ಲಿ ಸ್ಪಷ್ಟಪಡಿಸಿದೆ.

ಅರ್ಹತೆ:  ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯನ್ನು ಕಡ್ಡಾಯವಾಗಿ ಪಾಸು ಮಾಡಿರಬೇಕು.

ಭಾರೀ ಪ್ರಯಾಣಿಕ ಮೋಟಾರು ವಾಹನ ಅಥವಾ ಸರಕು ಸಾಗಣೆ ಮಾಡುವ ಭಾರೀ ವಾಹನವನ್ನು ಚಾಲನೆ ಮಾಡುವ ಚಾಲನಾ ಪರವಾನಿಗೆ ಹೊಂದಿರಬೇಕು.

ಚಾಲನೆಯಲ್ಲಿ ಕನಿಷ್ಟ 5 ವರ್ಷಗಳ ಅನುಭವ ಹೊಂದಿರಬೇಕು. ಕನ್ನಡ ಹಾಗೂ ಇಂಗ್ಲಿಷ್ ಭಾಷೆ ತಿಳಿದಿರಬೇಕು.

ಕನಿಷ್ಠ 18 ವರ್ಷ ಪೂರೈಸಿರಬೇಕು 35 ಮೀರಿರಬಾರದು. (ಮೀಸಲು ಅನುಸಾರ ವಿನಾಯಿತಿ ಇದೆ).

ವೇತನ ಶ್ರೇಣಿ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕ ಉಚ್ಚ ನ್ಯಾಯಾಲಯದ (ಅಧಿಕಾರಿ ಮತ್ತು ನೌಕರರ ವೇತನ ಪರಿಷ್ಕೃತ ವೇತನ ಶ್ರೇಣಿ ನಿಯಮ 2018ರ ಅನುಸಾರ 25,550-81,100 ರೂ. ಹಾಗೂ ಇತರೆ ಭತ್ಯೆಗಳು ದೊರೆಯಲಿವೆ.

ಆಯ್ಕೆಯಾದ ಅಭ್ಯರ್ಥಿಯು ಆರಂಭಿಕ ಎರಡು ವರ್ಷಗಳ ಕಾಲ ಪರಿವೀಕ್ಷಣೆಯಲ್ಲಿ ಇರಲಿದ್ದು ನಂತರ ಕಾಯಂಗೊಳ್ಳಲಿದ್ದಾರೆ.

ಹೆಚ್ಚಿನ ಮಾಹಿತಿಗೆ ಈ ಲಿಂಕ್‌ಅನ್ನು ಕ್ಲಿಕ್‌ ಮಾಡಬಹುದು: https://karnatakajudiciary.kar.nic.in/recruitmentNotifications/drvr2023/Notification_RPC.pdf

ಅರ್ಜಿ ಸಲ್ಲಿಸಲು ಬಯಸುವವರು ಈ ಲಿಂಕ್‌ ಮೇಲೆ ಕ್ಲಿಕ್‌ ಮಾಡಬಹುದು: https://karnatakajudiciary.kar.nic.in/driverRPC2023.php

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ