NEWSನಮ್ಮಜಿಲ್ಲೆನಮ್ಮರಾಜ್ಯ

ರಾತ್ರಿಪಾಳಿ ಬಸ್‌ ಸಿಬ್ಬಂದಿಗೆ ಕೊಠಡಿ ವ್ಯವಸ್ಥೆ ಕಲ್ಪಿಸಿ: ಸಿಇಒಗೆ ಶಾಸಕ ಚಿಮ್ಮನಕಟ್ಟಿ ಮನವಿ

ವಿಜಯಪಥ ಸಮಗ್ರ ಸುದ್ದಿ

ಬಾದಾಮಿ: ಬಾಗಲಕೋಟೆ ಜಿಲ್ಲೆ ಬಾದಾಮಿ ಮತಕ್ಷೇತ್ರದ ವ್ಯಾಪ್ತಿಗೆ ಬರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ರಾತ್ರಿ ಪಾಳಿಯ ಬಸ್‌ಗಳ ಚಾಲಕ ಹಾಗೂ ನಿರ್ವಾಹಕರಿಗೆ ಕೊಠಡಿ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಬಾದಾಮಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ಪತ್ರ ಬರೆದಿದ್ದಾರೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ರಾತ್ರಿ ತಂಗುವ (ವಸ್ತಿ) ಬಸ್ಸುಗಳು ನನ್ನ ಬಾದಾಮಿ ಮತಕ್ಷೇತ್ರದ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಶಾಲಾ, ಕಾಲೇಜು ಮಕ್ಕಳ ಹಿತದೃಷ್ಟಿಯಿಂದ ಇರುತ್ತಿದ್ದು, ಬಸ್ಸುಗಳಲ್ಲಿ ತಂಗಲು ಚಾಲಕ ಹಾಗೂ ನಿರ್ವಾಹಕರಿಗೆ ತುಂಬಾ ಅನಾನುಕೂಲವಾಗುತ್ತಿದೆ.

ಅಲ್ಲದೆ ಸಿಬ್ಬಂದಿಗಳ ಹತ್ತಿರ ಟಿಕೆಟ್, ಪ್ರಯಾಣದ ಹಣವು ಇರುತ್ತಿದ್ದು, ಇದರ ಸುರಕ್ಷತೆಯ ಸಲುವಾಗಿ ನನ್ನ ಬಾದಾಮಿ ಗ್ರಾಮೀಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಇರುವ ಎಲ್ಲ ವಸ್ತಿ ಬಸ್ಸುಗಳ ಸಿಬ್ಬಂದಿಯವರ ಹಿತದೃಷ್ಟಿಯಿಂದ ತಾವು ಬಸ್ಸಿನ ಸಿಬ್ಬಂದಿಯವರಿಗೆ ಆಯಾ ಗ್ರಾಮದ ಶಾಲೆಗಳಲ್ಲಿನ ಅಥವಾ ಪಂಚಾಯಿತಿಯಲ್ಲಿನ ಒಂದು ಕೊಠಡಿಯನ್ನು ಹಾಗೂ ಶೌಚಾಲಯ ವ್ಯವಸ್ಥೆಯೊಂದಿಗೆ ಸೌಲಭ್ಯ ಕಲ್ಪಿಸುವಂತೆ ತಮ್ಮಲ್ಲಿ ಕೋರುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಭವಿಷ್ಯದಲ್ಲೂ ಬೆಂಗಳೂರು ಉತ್ತಮವಾಗಿರುವಂತೆ ಯೋಜನೆ ರೂಪಿಸಬೇಕು; ಇಲ್ಲದಿದ್ದರೇ ಬೆಂಗಳೂರಿಗೆ ನಾವು ಮೋಸ ಮಾಡಿದಂತೆ: ಡಿಸಿ... ಬಿಬಿಎಂಪಿ ಕಾಮಗಾರಿಗಳ ಗುಣಮಟ್ಟ ಪರೀಕ್ಷೆಗೆ “ಸಂಚಾರಿ ಪ್ರಯೋಗಾಲಯ”: ಡಿಸಿಎಂ ವೀಕ್ಷಣೆ "ನಮ್ಮ ರಸ್ತೆ 2025" ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ಸ್ಪೈನಲ್ ಕಾರ್ಡ್ ಶಸ್ತ್ರ ಚಿಕಿತ್ಸೆ ಬಳಿಕ ಕುರುಬೂರು ಶಾಂತಕುಮಾರ್ ಆರೋಗ್ಯದಲ್ಲಿ ಚೇತರಿಕೆ ಸರ್ಕಾರ ನಿಮ್ಮಗಳ ದ್ವಂದ ನಿಲುವನ್ನು ಉಪಯೋಗಿಸಿಕೊಂಡು ಸಾರಿಗೆ ನೌಕರರ ಹೊಟ್ಟೆಗೆ ತಣ್ಣೀರುಬಟ್ಟೆ ಕಟ್ತಾ ಇದೆ ದೇಹಲಿ 4ನೇ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ರೇಖಾ ಗುಪ್ತಾ KSRTC ತುಮಕೂರು: ಡಿಸಿ ಚಂದ್ರಶೇಖರ್ ಅಮಾನತಿಗೆ ದೂರುಕೊಟ್ಟು ಎಂಡಿಗೆ ಒತ್ತಾಯ KSRTC ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್‌: HRMS ತಂತ್ರಾಂಶದ ಮೂಲಕವೇ ರಜೆ ಅರ್ಜಿ ಸಲ್ಲಿಸಬೇಕು- ಮುಖ್ಯ ಸಿಬ್ಬಂದಿ ವ್ಯವಸ... KSRTC ಉತ್ತಮ ಸಾಧನೆ ತೋರಿದ ಡಿಸಿಗಳು, ಉಸ್ತುವಾರಿ ಅಧಿಕಾರಿಗಳು, ಘಟಕ ವ್ಯವಸ್ಥಾಪಕರಿಗೆ ನಗದು ಪುರಸ್ಕಾರ ಸಾರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ- ನಿಲ್ದಾಣಕ್ಕೂ ಮೊದಲೆ ಇಳಿದ ಮಹಿಳೆ ಪರ ನಿಂತು ನಾನು ಪೊಲೀಸ್‌ ಎಂದಳು!!