ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಕಾನೂನು ವಿಭಾಗ ಇರುವುದು ಚಾಲನಾ ಸಿಬ್ಬಂದಿಗಳ ರಕ್ಷಣೆಗೆ. ಆದರೆ ಇಲ್ಲಿ ಅದರ ಬದಲಿಗೆ ಚಾಕಲರಿಗೆ ಶಿಕ್ಷೆಕೊಡಿಸುವುದಕ್ಕೆ, ಅವರ ವಿರುದ್ಧವೇ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವುದಕ್ಕೆ ಇದೆ ಎಂಬ ರೀತಿಯಲ್ಲಿ ಅಧಿಕಾರಿಗಳು ನಡೆದುಕೊಳ್ಳುತ್ತಿರುವುದು ಭಾರಿ ನೋವಿನ ಸಂಗತಿ.
ಹೌದು! ನಡೆಯುವವರು ಎಡವಿಬೀಳದೆ ಕುಳಿತಿರುವವರು ಬೀಳುತ್ತಾರೆಯೇ ಎಂಬ ಗಾದೆಯಂತೆ ರಸ್ತೆಯಲ್ಲಿ ವಾಹನಗಳು ಚಲಿಸುತ್ತಿವೆ ಎಂದರೆ ಅಲ್ಲಿ ಆಕಸ್ಮಿಕವಾಗಿ ಕೆಲವೊಮ್ಮೆ ಅಪಘಾತಗಳು ಸಂಭವಿಸುತ್ತವೆ. ಅಂದಮಾತ್ರಕ್ಕೆ 10-20 ವರ್ಷಗಳ ಚಾಲನಾ ಅನುಭವವಿರುವ ನೌಕರರು ತಪ್ಪು ಮಾಡಿದ್ದಾರೆ ಎಂದು ತೀರ್ಮಾನ ಮಾಡುವುದು ಸಾಧ್ಯವೇ ಇಲ್ಲ, ಅವರ ಪರ ನಿಂತು ಅವರ ರಕ್ಷಣೆ ಮಾಡಬೇಕು.
ಆದರೆ, ಅದನ್ನು ಸಾರಿಗೆ ನಿಗಮಗಳ ಕಾನೂನು ಅಧಿಕಾರಿಗಳು ಸಂಸ್ಥೆಯ ಹುಟ್ಟಿದಾಗಿನಿಂದ ಈವರೆಗೂ ಮಾಡಿಲ್ಲ, ಬದಲಿಗೆ ಅಪಘಾತವಾದ ಬಸ್ ಬಿಡಿಸಿಕೊಂಡು ನೌಕರರನ್ನು ಕಾಲ್ ಕಸಕ್ಕಿಂತ ಕೀಳಾಗಿ ನೋಡಿಕೊಂಡೆ ಬರುತ್ತಿದ್ದಾರೆ. ಇದರಿಂದ ಮಾನಸಿಕವಾಗಿ ಬಳಲುತ್ತಿರುವ ನೌಕರರು ಆತ್ಮಹತ್ಯೆ ಮಾರ್ಗ ಅನುಸರಿಸುತ್ತಿದ್ದಾರೆ. ಇದು ಬದಲಾಗಬೇಕಿದೆ.
ಆಕಸ್ಮಿಕವಾಗಿ ವಾಹನಗಳ ನಡುವೆ ಅಪಘಾತವಾದ ಕೂಡಲೇ ಸಂಬಂಧಪಟ್ಟ ಸಂಸ್ಥೆಯ ವಕೀಲರು ಚಾಲಕನ ಪರವಾಗಿ ಕಾನೂನು ಹೋರಾಟ ಮಾಡುವುದಕ್ಕೆ ಸಿದ್ಧರಾಗಬೇಕು. ಜತೆಗೆ ಚಾಲಕನಿಗೆ ಯಾವುದೇ ರೀತಿಯ ಶಿಕ್ಷೆ ಆಗದ ರೀತಿಯಲ್ಲಿ ಕಾನೂನು ಹೋರಾಟ ಮಾಡಬೇಕು.
ಕಾರಣ ರಸ್ತೆ ಅಪಘಾತಗಳು ಆಕಸ್ಮಿಕವಾಗಿ ಸಂಭವಿಸುತ್ತವೆ ಎಂದೆ ಅಪಘಾತ ವಿಮಾ ಕಂಪನಿಗಳು ಇರುವುದು ಹಾಗೂ ಚಾಲಕನಿಗೆ ಸರಿಯಾಗಿ ಚಾಲನೆ ಬರುತ್ತದೆಯೇ ಇಲ್ಲವೇ ಎಂದು ತಿಳಿದ ಬಳಿಕವೇ ಚಾಲನಾ ಪರವಾನಗಿಯನ್ನು ಆರ್ಟಿಒದಲ್ಲಿ ಕೊಡುವುದು. ಇಷ್ಟೆಲ್ಲ ಇದ್ದರೂ ಕೂಡ ತನ್ನ ಸಂಸ್ಥೆಯ ಚಾಲಕರ ಪರವಾಗಿ ಕಾನೂನು ಹೋರಾಟ ಮಾಡುವುದಿಲ್ಲ ಎಂದರೆ ಇದರ ಅರ್ಥವೇನು?
ಸಾರಿಗೆ ನಿಗಮಗಳಲ್ಲಿ ಇರುವ ಕಾನೂನು ವಿಭಾಗ ಹಾಗೂ ವಕೀಲರು ಕೇವಲ ಬಸ್ಗಳನ್ನು ಬಿಡಿಸಿಕೊಂಡು ಬರುವುದಕ್ಕೆ ಇರೋದ? ಹಾಗಾದರೆ ಸಂಸ್ಥೆಯಲ್ಲಿದ್ದುಕೊಂಡು ಸಾರ್ವಜನಿಕ ಸೇವೆ ಮಾಡುತ್ತಿರುವ ಚಾಲಕರು ಸಂಸ್ಥೆಗೆ ಏನೇನು ಅಲ್ಲವೆ? ಅಪಘಾತವಾದರೆ ಅವರು ಖಾಸಗಿ ವಕೀಲರ ಮೂಲಕ ಕಾನೂನು ಹೋರಾಟ ಮಾಡಬೇಕು ಎಂದರೆ ಇದರ ಅರ್ಥವೇನು?
ಸಂಸ್ಥೆಯಲ್ಲಿ ಸಾರ್ವಜನಿಕ ಸೇವೆ ಮಾಡುತ್ತಿರುವ ಚಾಲಕರು ಅವರ ಸ್ವಂತಕ್ಕಾಗಿ ಬಸ್ಗಳನ್ನು ತೆಗೆದುಕೊಂಡು ಹೋಗಿ ಅಪಘಾತ ಮಾಡಿದ್ದಾರೆ ಎಂದು ಸಂಸ್ಥೆಯ ವಕೀಲರು ನೌಕರರ ವಿರುದ್ಧವಾಗಿ ನಿಲ್ಲುತ್ತಿದ್ದಾರೆಯೇ? ಈ ಚಾಲಕರು ಬಸ್ ಓಡಿಸುತ್ತಿರುವುದರಿಂದಲೇ ವಕೀಲರಾಗಿರುವ ನಿಮಗೂ ಸಂಸ್ಥೆ ವೇತನ ಕೊಡುತ್ತಿದೆ ಎಂಬುದನ್ನು ತಾವು ಮರೆತಿದ್ದೀರಾ?
ಚಾಲಕರೆ ಇಲ್ಲ ಎಂದಮೇಲೆ ಸಾರಿಗೆ ಸಂಸ್ಥೆ ಎಲ್ಲಿರುತ್ತದೆ. ಸಂಸ್ಥೆಯೆ ಇಲ್ಲ ಎಂದ ಮೇಲೆ ನಿಮ್ಮ ಅವಶ್ಯಕತೆ ಯಾರಿಗೆ ಇರುತ್ತದೆ. ಇಲ್ಲಿ ಸಾರಿಗೆ ನಿಗಮಗಳು ಇವೆ ಎಂದರೆ ಅದಕ್ಕೆ ಚಾಲಕರೆ ಮೊದಲು. ಆನಂತರ ಎಂಡಿ, ಸಿಟಿಎಂ, ಡಿಸಿ, ಡಿಎಂ ಇತ್ಯಾದಿ ಹುದ್ದೆಗಳು ಬರುವುದು. ಆದರೆ ಇಲ್ಲಿ ಚಾಲನಾ ಸಿಬ್ಬಂದಿಗಳನ್ನು ರಕ್ಷಣೆ ಮಾಡಬೇಕಾದ ಸಂಸ್ಥೆಯ ಕಾನೂನು ವಿಭಾಗ ಅಪಘಾತವಾದ ಕೂಡಲೇ ಚಾಲಕರನ್ನು ಶತ್ರುಗಳ ರೀತಿ ನಡೆಸಿಕೊಳ್ಳುತ್ತಿರುವುದು ಏಕೆ ಎಂಬುವದಕ್ಕೆ ಇನ್ನೂ ಉತ್ತರ ಸಿಕ್ಕಿಲ್ಲ.
ಖಾಸಗಿ ಸಾರಿಗೆ ಕಂಪನಿಗಳ ಬಸ್ಗಳು ಅಪಘಾತವಾದರೆ ತಮ್ಮ ಚಾಲಕರ ರಕ್ಷಣೆಗೆ ವಕೀಲರನ್ನು ನೇಮಕ ಮಾಡಿಕೊಂಡಿದ್ದಾರೆ. ಆದರೆ ಸರ್ಕಾರಿ ಸಾರಿಗೆ ಸಂಸ್ಥೆಯಲ್ಲಿ ಚಾಲಕರಿಗೆ ಶಿಕ್ಷೆ ಕೊಡಿಸುವುದಕ್ಕೆ ವಕೀಲರನ್ನು ನೇಮಕ ಮಾಡಿಕೊಂಡಿದೆ ಎಂಬ ರೀತಿ ಸಂಸ್ಥೆಯ ಕಾನೂನು ವಿಭಾಗ ನಡೆದುಕೊಳ್ಳುತ್ತಿದೆ. ಇದು ಸರಿಯೇ?
ಚಾಲಕರು ಇರುವುದರಿಂದಲೇ ಇಡಿ ಸಂಸ್ಥೆಯಲ್ಲಿರುವ ಪ್ರತಿಯೊಬ್ಬರ ಕುಟುಂಬದವರಿಗೂ ಅನ್ನ ಸಿಗುತ್ತಿರುವುದು. ಅಂದಮೇಲೆ ನಿಮ್ಮ ಪಾಲಿಗೆ ಚಾಲಕರು ಅನ್ನಕೊಡುತ್ತಿರುವ ದೇವರಲ್ಲವೇ? ಆದರೆ ಅಂಥ ದೇವರುಗಳನ್ನೇ ನೀವು ಕೀಳಾಗಿ ಕಾಣುವ ಮೂಲಕ ಅವರಿಗೆ ಕೋರ್ಟ್ನಲ್ಲಿ ನ್ಯಾಯಕೊಡಿಸುವ ಬದಲು ಶಿಕ್ಷೆ ಆಗುವಂತೆ ನೋಡಿಕೊಳ್ಳುವುದಕ್ಕೇ ಹೆಚ್ಚಾಗಿ ಅವಸರ ಪಡುತ್ತೀರಿ ಎಂದರೆ ನಿಮ್ಮನ್ನು ಏನೆಂದು ಕರೆಯಬೇಕು ಹೇಳಿ?
ಇನ್ನು ಮುಂದಾದರೂ ಆಕಸ್ಮಿಕವಾಗಿ ಸಂಭವಿಸುವ ಅಪಘಾತದ ವೇಳೆ ಚಾಲಕರ ರಕ್ಷಣೆಗೆ ಸಂಸ್ಥೆಯ ಕಾನೂನು ವಿಭಾಗದ ಮುಂದಾಗಬೇಕು. ಜತೆಗೆ ಚಾಲಕರು ಯಾವುದೇ ಖಾಸಗಿ ವಕೀಲರ ಮೂಲಕ ಅಪಘಾತ ಪ್ರಕರಣವನ್ನು ಹಾಕದಂತೆ ನೋಡಿಕೊಳ್ಳಬೇಕು. ಆಗ ನೌಕರರು ಕೂಡ ಸಂಸ್ಥೆಗೆ ಇನ್ನಷ್ಟು ಪ್ರಾಮಾಣಿಕರಾಗಿ ಹಾಗೂ ನಿಷ್ಠಾವಂತರಾಗಿ ಇರುತ್ತಾರೆ.
ಈ ಬಗ್ಗೆ ಇನ್ನಾದರೂ ಸಂಬಂಧಪಟ್ಟ ಎಂಡಿಗಳು ಎಚ್ಚೆತ್ತುಕೊಂಡು ಕಾನೂನು ವಿಭಾಗದ ಅಧಿಕಾರಿಗಳಿಗೆ ತಿಳಿಹೇಳಿ ನೌಕರರಿಗೆ ಅನಾನುಕೂಲವಾಗದಂತೆ ನೋಡಿಕೊಳ್ಳಬೇಕು ಎಂಬುವುದು ವಿಜಯಪಥ ಮೀಡಿಯಾ ಕಳಕಳಿ.
Related

You Might Also Like
ಪೂಜೆಗೆ ಹೋದ ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್ಮೇಲ್: ಅರ್ಚಕನ ಬಂಧನ
ಬೆಂಗಳೂರು: ಮಹಿಳೆಯ ನಗ್ನ ವಿಡಿಯೋವನ್ನು ವಾಟ್ಸಪ್ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿ ಬಳಿಕ ಬ್ಲ್ಯಾಕ್ ಮಾಡುತ್ತಿದ್ದ ಕೇರಳ ತ್ರಿಶೂರ್ನ ಪ್ರತಿಷ್ಠಿತ ದೇವಾಲಯದ ಅರ್ಚಕನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಪ್ರತಿಷ್ಠಿತ...
BMTC ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣ: ಕಠಿಣ ಕ್ರಮಕ್ಕೆ ಆಯುಕ್ತರು, ಗೃಹ ಸಚಿವರಿಗೆ ಸಾರಿಗೆ ಸಚಿವರ ಆಗ್ರಹ
ಬೆಂಗಳೂರು: ತಾನು ಕೇಳಿದ ಸ್ಥಳದಲ್ಲಿ ಬಸ್ ನಿಲ್ಲಿಸಿಲ್ಲ ಎಂದು ಮೂರು ದಿನದ ಹಿಂದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಚಾಲಕನಿಗೆ ಮಹಿಳಾ ಟೆಕ್ಕಿ ಉದ್ಯೋಗಿಯೊಬ್ಬರು ಚಪ್ಪಲಿಯಿಂದ...
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...