ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಕಾನೂನು ವಿಭಾಗ ಇರುವುದು ಚಾಲನಾ ಸಿಬ್ಬಂದಿಗಳ ರಕ್ಷಣೆಗೆ. ಆದರೆ ಇಲ್ಲಿ ಅದರ ಬದಲಿಗೆ ಚಾಕಲರಿಗೆ ಶಿಕ್ಷೆಕೊಡಿಸುವುದಕ್ಕೆ, ಅವರ ವಿರುದ್ಧವೇ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವುದಕ್ಕೆ ಇದೆ ಎಂಬ ರೀತಿಯಲ್ಲಿ ಅಧಿಕಾರಿಗಳು ನಡೆದುಕೊಳ್ಳುತ್ತಿರುವುದು ಭಾರಿ ನೋವಿನ ಸಂಗತಿ.
ಹೌದು! ನಡೆಯುವವರು ಎಡವಿಬೀಳದೆ ಕುಳಿತಿರುವವರು ಬೀಳುತ್ತಾರೆಯೇ ಎಂಬ ಗಾದೆಯಂತೆ ರಸ್ತೆಯಲ್ಲಿ ವಾಹನಗಳು ಚಲಿಸುತ್ತಿವೆ ಎಂದರೆ ಅಲ್ಲಿ ಆಕಸ್ಮಿಕವಾಗಿ ಕೆಲವೊಮ್ಮೆ ಅಪಘಾತಗಳು ಸಂಭವಿಸುತ್ತವೆ. ಅಂದಮಾತ್ರಕ್ಕೆ 10-20 ವರ್ಷಗಳ ಚಾಲನಾ ಅನುಭವವಿರುವ ನೌಕರರು ತಪ್ಪು ಮಾಡಿದ್ದಾರೆ ಎಂದು ತೀರ್ಮಾನ ಮಾಡುವುದು ಸಾಧ್ಯವೇ ಇಲ್ಲ, ಅವರ ಪರ ನಿಂತು ಅವರ ರಕ್ಷಣೆ ಮಾಡಬೇಕು.
ಆದರೆ, ಅದನ್ನು ಸಾರಿಗೆ ನಿಗಮಗಳ ಕಾನೂನು ಅಧಿಕಾರಿಗಳು ಸಂಸ್ಥೆಯ ಹುಟ್ಟಿದಾಗಿನಿಂದ ಈವರೆಗೂ ಮಾಡಿಲ್ಲ, ಬದಲಿಗೆ ಅಪಘಾತವಾದ ಬಸ್ ಬಿಡಿಸಿಕೊಂಡು ನೌಕರರನ್ನು ಕಾಲ್ ಕಸಕ್ಕಿಂತ ಕೀಳಾಗಿ ನೋಡಿಕೊಂಡೆ ಬರುತ್ತಿದ್ದಾರೆ. ಇದರಿಂದ ಮಾನಸಿಕವಾಗಿ ಬಳಲುತ್ತಿರುವ ನೌಕರರು ಆತ್ಮಹತ್ಯೆ ಮಾರ್ಗ ಅನುಸರಿಸುತ್ತಿದ್ದಾರೆ. ಇದು ಬದಲಾಗಬೇಕಿದೆ.
ಆಕಸ್ಮಿಕವಾಗಿ ವಾಹನಗಳ ನಡುವೆ ಅಪಘಾತವಾದ ಕೂಡಲೇ ಸಂಬಂಧಪಟ್ಟ ಸಂಸ್ಥೆಯ ವಕೀಲರು ಚಾಲಕನ ಪರವಾಗಿ ಕಾನೂನು ಹೋರಾಟ ಮಾಡುವುದಕ್ಕೆ ಸಿದ್ಧರಾಗಬೇಕು. ಜತೆಗೆ ಚಾಲಕನಿಗೆ ಯಾವುದೇ ರೀತಿಯ ಶಿಕ್ಷೆ ಆಗದ ರೀತಿಯಲ್ಲಿ ಕಾನೂನು ಹೋರಾಟ ಮಾಡಬೇಕು.
ಕಾರಣ ರಸ್ತೆ ಅಪಘಾತಗಳು ಆಕಸ್ಮಿಕವಾಗಿ ಸಂಭವಿಸುತ್ತವೆ ಎಂದೆ ಅಪಘಾತ ವಿಮಾ ಕಂಪನಿಗಳು ಇರುವುದು ಹಾಗೂ ಚಾಲಕನಿಗೆ ಸರಿಯಾಗಿ ಚಾಲನೆ ಬರುತ್ತದೆಯೇ ಇಲ್ಲವೇ ಎಂದು ತಿಳಿದ ಬಳಿಕವೇ ಚಾಲನಾ ಪರವಾನಗಿಯನ್ನು ಆರ್ಟಿಒದಲ್ಲಿ ಕೊಡುವುದು. ಇಷ್ಟೆಲ್ಲ ಇದ್ದರೂ ಕೂಡ ತನ್ನ ಸಂಸ್ಥೆಯ ಚಾಲಕರ ಪರವಾಗಿ ಕಾನೂನು ಹೋರಾಟ ಮಾಡುವುದಿಲ್ಲ ಎಂದರೆ ಇದರ ಅರ್ಥವೇನು?
ಸಾರಿಗೆ ನಿಗಮಗಳಲ್ಲಿ ಇರುವ ಕಾನೂನು ವಿಭಾಗ ಹಾಗೂ ವಕೀಲರು ಕೇವಲ ಬಸ್ಗಳನ್ನು ಬಿಡಿಸಿಕೊಂಡು ಬರುವುದಕ್ಕೆ ಇರೋದ? ಹಾಗಾದರೆ ಸಂಸ್ಥೆಯಲ್ಲಿದ್ದುಕೊಂಡು ಸಾರ್ವಜನಿಕ ಸೇವೆ ಮಾಡುತ್ತಿರುವ ಚಾಲಕರು ಸಂಸ್ಥೆಗೆ ಏನೇನು ಅಲ್ಲವೆ? ಅಪಘಾತವಾದರೆ ಅವರು ಖಾಸಗಿ ವಕೀಲರ ಮೂಲಕ ಕಾನೂನು ಹೋರಾಟ ಮಾಡಬೇಕು ಎಂದರೆ ಇದರ ಅರ್ಥವೇನು?
ಸಂಸ್ಥೆಯಲ್ಲಿ ಸಾರ್ವಜನಿಕ ಸೇವೆ ಮಾಡುತ್ತಿರುವ ಚಾಲಕರು ಅವರ ಸ್ವಂತಕ್ಕಾಗಿ ಬಸ್ಗಳನ್ನು ತೆಗೆದುಕೊಂಡು ಹೋಗಿ ಅಪಘಾತ ಮಾಡಿದ್ದಾರೆ ಎಂದು ಸಂಸ್ಥೆಯ ವಕೀಲರು ನೌಕರರ ವಿರುದ್ಧವಾಗಿ ನಿಲ್ಲುತ್ತಿದ್ದಾರೆಯೇ? ಈ ಚಾಲಕರು ಬಸ್ ಓಡಿಸುತ್ತಿರುವುದರಿಂದಲೇ ವಕೀಲರಾಗಿರುವ ನಿಮಗೂ ಸಂಸ್ಥೆ ವೇತನ ಕೊಡುತ್ತಿದೆ ಎಂಬುದನ್ನು ತಾವು ಮರೆತಿದ್ದೀರಾ?
ಚಾಲಕರೆ ಇಲ್ಲ ಎಂದಮೇಲೆ ಸಾರಿಗೆ ಸಂಸ್ಥೆ ಎಲ್ಲಿರುತ್ತದೆ. ಸಂಸ್ಥೆಯೆ ಇಲ್ಲ ಎಂದ ಮೇಲೆ ನಿಮ್ಮ ಅವಶ್ಯಕತೆ ಯಾರಿಗೆ ಇರುತ್ತದೆ. ಇಲ್ಲಿ ಸಾರಿಗೆ ನಿಗಮಗಳು ಇವೆ ಎಂದರೆ ಅದಕ್ಕೆ ಚಾಲಕರೆ ಮೊದಲು. ಆನಂತರ ಎಂಡಿ, ಸಿಟಿಎಂ, ಡಿಸಿ, ಡಿಎಂ ಇತ್ಯಾದಿ ಹುದ್ದೆಗಳು ಬರುವುದು. ಆದರೆ ಇಲ್ಲಿ ಚಾಲನಾ ಸಿಬ್ಬಂದಿಗಳನ್ನು ರಕ್ಷಣೆ ಮಾಡಬೇಕಾದ ಸಂಸ್ಥೆಯ ಕಾನೂನು ವಿಭಾಗ ಅಪಘಾತವಾದ ಕೂಡಲೇ ಚಾಲಕರನ್ನು ಶತ್ರುಗಳ ರೀತಿ ನಡೆಸಿಕೊಳ್ಳುತ್ತಿರುವುದು ಏಕೆ ಎಂಬುವದಕ್ಕೆ ಇನ್ನೂ ಉತ್ತರ ಸಿಕ್ಕಿಲ್ಲ.
ಖಾಸಗಿ ಸಾರಿಗೆ ಕಂಪನಿಗಳ ಬಸ್ಗಳು ಅಪಘಾತವಾದರೆ ತಮ್ಮ ಚಾಲಕರ ರಕ್ಷಣೆಗೆ ವಕೀಲರನ್ನು ನೇಮಕ ಮಾಡಿಕೊಂಡಿದ್ದಾರೆ. ಆದರೆ ಸರ್ಕಾರಿ ಸಾರಿಗೆ ಸಂಸ್ಥೆಯಲ್ಲಿ ಚಾಲಕರಿಗೆ ಶಿಕ್ಷೆ ಕೊಡಿಸುವುದಕ್ಕೆ ವಕೀಲರನ್ನು ನೇಮಕ ಮಾಡಿಕೊಂಡಿದೆ ಎಂಬ ರೀತಿ ಸಂಸ್ಥೆಯ ಕಾನೂನು ವಿಭಾಗ ನಡೆದುಕೊಳ್ಳುತ್ತಿದೆ. ಇದು ಸರಿಯೇ?
ಚಾಲಕರು ಇರುವುದರಿಂದಲೇ ಇಡಿ ಸಂಸ್ಥೆಯಲ್ಲಿರುವ ಪ್ರತಿಯೊಬ್ಬರ ಕುಟುಂಬದವರಿಗೂ ಅನ್ನ ಸಿಗುತ್ತಿರುವುದು. ಅಂದಮೇಲೆ ನಿಮ್ಮ ಪಾಲಿಗೆ ಚಾಲಕರು ಅನ್ನಕೊಡುತ್ತಿರುವ ದೇವರಲ್ಲವೇ? ಆದರೆ ಅಂಥ ದೇವರುಗಳನ್ನೇ ನೀವು ಕೀಳಾಗಿ ಕಾಣುವ ಮೂಲಕ ಅವರಿಗೆ ಕೋರ್ಟ್ನಲ್ಲಿ ನ್ಯಾಯಕೊಡಿಸುವ ಬದಲು ಶಿಕ್ಷೆ ಆಗುವಂತೆ ನೋಡಿಕೊಳ್ಳುವುದಕ್ಕೇ ಹೆಚ್ಚಾಗಿ ಅವಸರ ಪಡುತ್ತೀರಿ ಎಂದರೆ ನಿಮ್ಮನ್ನು ಏನೆಂದು ಕರೆಯಬೇಕು ಹೇಳಿ?
ಇನ್ನು ಮುಂದಾದರೂ ಆಕಸ್ಮಿಕವಾಗಿ ಸಂಭವಿಸುವ ಅಪಘಾತದ ವೇಳೆ ಚಾಲಕರ ರಕ್ಷಣೆಗೆ ಸಂಸ್ಥೆಯ ಕಾನೂನು ವಿಭಾಗದ ಮುಂದಾಗಬೇಕು. ಜತೆಗೆ ಚಾಲಕರು ಯಾವುದೇ ಖಾಸಗಿ ವಕೀಲರ ಮೂಲಕ ಅಪಘಾತ ಪ್ರಕರಣವನ್ನು ಹಾಕದಂತೆ ನೋಡಿಕೊಳ್ಳಬೇಕು. ಆಗ ನೌಕರರು ಕೂಡ ಸಂಸ್ಥೆಗೆ ಇನ್ನಷ್ಟು ಪ್ರಾಮಾಣಿಕರಾಗಿ ಹಾಗೂ ನಿಷ್ಠಾವಂತರಾಗಿ ಇರುತ್ತಾರೆ.
ಈ ಬಗ್ಗೆ ಇನ್ನಾದರೂ ಸಂಬಂಧಪಟ್ಟ ಎಂಡಿಗಳು ಎಚ್ಚೆತ್ತುಕೊಂಡು ಕಾನೂನು ವಿಭಾಗದ ಅಧಿಕಾರಿಗಳಿಗೆ ತಿಳಿಹೇಳಿ ನೌಕರರಿಗೆ ಅನಾನುಕೂಲವಾಗದಂತೆ ನೋಡಿಕೊಳ್ಳಬೇಕು ಎಂಬುವುದು ವಿಜಯಪಥ ಮೀಡಿಯಾ ಕಳಕಳಿ.
Related

You Might Also Like
KSRTC ಅಧಿಕಾರಿಗಳು ಕಚೇರಿಗೆ ಬಂದಾಗ ತಮ್ಮ ಹಣ ಎಷ್ಟಿತ್ತು ಹೋಗುವಾಗ ಎಷ್ಟಿದೆ ಅಂತ ತಿಳಿಸಬೇಕು: ಎಂಡಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರವು ಕಚೇರಿಗಳಲ್ಲಿ ನಗದು ಘೋಷಣೆ ವಹಿ ನಿರ್ವಹಣೆ ಕುರಿತು ವಿವರವಾಗಿ ಮಾರ್ಗಸೂಚಿಗಳನ್ನು ನೀಡಿ, ನಿಗಮ/ ಮಂಡಳಿಗಳಲ್ಲಿ ಸಹ ನಗದು ಘೋಷಣೆ ವಹಿ ನಿರ್ವಹಣೆ ಮಾಡುವಂತೆ...
ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ನ್ಯಾ.ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಭು ಬಖ್ರು ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜ್ಯಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ...
BMTC ನೌಕರರಿಗೆ ಕಿರುಕುಳ: ಸಮಸ್ಯೆ ಕೇಳದ ಘಟಕ- 20ರ ಡಿಎಂ- ಸರ್ವಾಧಿಕಾರಿಯ ವರ್ತನೆ
2 ಗಂಟೆ ಬಳಿಕ ತನ್ನ ಕಚೇರಿ ಬಾಗಿಲು ಹಾಕಿಕೊಂಡು ಚೇಳಗಳ ಜತೆ ಹರಟೆ ನೌಕರರ ಸಮಸ್ಯೆ ಬಗೆಹರಿಸದೆ ದರ್ಪ ಮೆರೆಯುತ್ತಿರುವ ಕಿರಾತಕ ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ...
BMTC: ಹೋಟೆಲ್ಗೆ ನುಗ್ಗಿದ ಎಲೆಕ್ಟ್ರಿಕ್ ಬಸ್, ಓರ್ವ ಯುವತಿ ಸಾವು, ಮೂವರಿಗೆ ಗಾಯ
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಎಂದು ಕರೆಸಿಕೊಳ್ಳುವ ಬೆಂಗಳೂರು ಮಹಾನಗರ ಸಾರಿಗೆಯ ಎಲೆಕ್ಟ್ರಿಕ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಫುಟ್ಪಾತ್ಗೆ ನುಗ್ಗಿದ ಪರಿಣಾಮ ಯುವತಿಯೋರ್ವರು ಮೃತಪಪ್ಟಿದ್ದು, ಫುಟ್ಪಾತ್ ಮೇಲೆ...
ಸಾರಿಗೆ ನೌಕರರು ಮುಷ್ಕರ ಹೂಡುವುದಾಗಿ ಕೊಟ್ಟ ಮುಷ್ಕರದ ನೋಟಿಸ್ ಸಂಬಂಧ ನಿರ್ದೇಶನ ಕೋರಿ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಆ.5ರಿಂದ...
ಸಾರಿಗೆ ನೌಕರರ ಮುಷ್ಕರದ ಬಗ್ಗೆ ನನ್ನ ಅಭಿಪ್ರಾಯ-ಅನಿಸಿಕೆಗಳು
ಸಾರಿಗೆ ಮುಷ್ಕರ ಎಂಬುದು ಎಲ್ಲಾ ಅಧಿಕಾರಿಗಳು ಮತ್ತು ನೌಕರ ಸಿಬ್ಬಂದಿಗಳ ವೇತನಕ್ಕೆ ಸಂಬಂಧಪಟ್ಟಿರುವುದಾಗಿರುತ್ತದೆ.ಎಲ್ಲರೂ ಒಗ್ಗಟ್ಟಿನಿಂದ ಒಟ್ಟಾಗಿ ಮುಷ್ಕರ ಮಾಡಬೇಕಾಗಿದೆ. ಆದರೆ ನಮ್ಮ ನಿಗಮದಲ್ಲಿ ಅಧಿಕಾರಿಗಳು ಮತ್ತು ಆಡಳಿತ...
ಡಿ.31ರವರೆಗೆ ಸಾರಿಗೆ ನೌಕರರು ಮುಷ್ಕರ ಮಾಡದಂತೆ ಎಸ್ಮಾಜಾರಿ ಮಾಡಿದ ಸರ್ಕಾರ- ಎಸ್ಮಾ ಜಾರಿ ಮಾಡಿದರೆ ಮುಷ್ಕರಕ್ಕೆ ಅವಕಾಶವಿಲ್ಲವೇ? ತಜ್ಞರ ಹೇಳಿಕೆ ಏನು?
ಬೆಂಗಳೂರು: ತಮ್ಮ ಬೇಡಿಕೆ ಈಡೇರಿಕೆಗಾಗಿ ಸರ್ಕಾರದ ಬಾಗಿಲು ಬಡಿದು ಸುಸ್ತಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಸಿಬ್ಬಂದಿ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಜುಲೈ 29ರಿಂದ...
KSRTC ನೌಕರರ ವೇತನ ಹೆಚ್ಚಳ ಸಂಬಂಧ ಉಪವಾಸ ಸತ್ಯಾಗ್ರಹ ಮಾಡುವ ಕುರಿತು ಜು.18ರಂದು ಸುದ್ದಿಗೋಷ್ಠಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜು.29ರಿಂದ ಒಕ್ಕೂಟದಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವ...
ಜು.29ರೊಳಗೆ KSRTC ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಸದಿದ್ದರೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ: ಎಂಡಿಗೆ ಒಕ್ಕೂಟ ಮನವಿ
ಬೆಂಗಳೂರು: ಇಲ್ಲಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಇದೇ ಜುಲೈ...