CrimeNEWSಕ್ರೀಡೆ

ಏಷ್ಯನ್ ಮೆಡಲಿಸ್ಟ್ ಬಿಂದುರಾಣಿ ಮೇಲೆ ಕೋಚ್‌ವೊಬ್ಬರ ಪತ್ನಿಯಿಂದ ಹಲ್ಲೆ, ನಿಂದನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಏಷ್ಯನ್ ಮೆಡಲಿಸ್ಟ್ ಬಿಂದುರಾಣಿ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ದೌರ್ಜನ್ಯವೆಸಗಿರುವ ಆರೋಪ ಕೇಳಿಬಂದಿದೆ.

ಇಂದು ಕಂಠೀರವ ಸ್ಟೇಡಿಯಂನಲ್ಲಿ ಸೀನಿಯರ್ ಕೋಚ್ ಯತೀಶ್ ಎಂಬುವವರ ಪತ್ನಿ ಅವಾಚ್ಯವಾಗಿ ನಿಂದಿಸಿ ಬಿಂದುರಾಣಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಕಂಠೀರವ ಸ್ಟೇಡಿಯಂನಲ್ಲಿಂದು ಟೆಡ್ ಎಕ್ಸ್ ಇನ್ಸ್ ಫಿರೇಷನಲ್ ಶೋ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಶೋನಲ್ಲಿ ಬಾಲಿವುಡ್ ನಟ ಅಮೀರ್ ಖಾನ್, ವಿರಾಟ್ ಕೊಹ್ಲಿ ಸೇರಿದಂತೆ ದೊಡ್ಡ ದೊಡ್ಡ ಸೆಲಬ್ರೆಟಿಗಳು ಭಾಗಿಯಾಗಿದ್ರು. ಜತೆಗೆ ಬಿಂದು ರಾಣಿಗೂ ಸಹ ಭಾಗಿಯಾಗುವ ಅವಕಾಶ ಸಿಕ್ಕಿತ್ತು.

ಆದರೆ ಟೆಡ್‌ಎಕ್ಸ್ ಇನ್ಸ್ ಫಿರೇಷನಲ್ ಕಾರ್ಯಕ್ರಮಕ್ಕೆ ಭಾಗಿಯಾಗಿರುವ ಹಿನ್ನೆಲೆ ಬಿಂದುರಾಣಿ ಮೇಲೆ ನಿಂದನೆ ಜೊತೆಗೆ ಹಲ್ಲೆ ನಡೆದಿದೆ. ಕಾರ್ಯಕ್ರಮದಲ್ಲಿ ತಪ್ಪು ಮಾಹಿತಿ ಕೊಟ್ಟು ಅವಕಾಶ ಗಿಟ್ಟಿಸಿರೋದಾಗಿ ನಿಂದಿಸಿ ಸೀನಿಯರ್ ಕೋಚ್ ಯತೀಶ್ ಪತ್ನಿ ಹಲ್ಲೆ ಮಾಡಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣದಲ್ಲೂ ಯತೀಶ್​​ ಪತ್ನಿ ಬಿಂದುರಾಣಿಗೆ ಚಪ್ಪಳಿ ತೋರಿಸಿರುವ ಚಿತ್ರಣ ವೈರಲ್​ ಆಗುತ್ತಿದೆ. ಅನೇಕರು ಈ ಚಿತ್ರಣವನ್ನು ಹಂಚಿಕೊಳ್ಳುತ್ತಿದ್ದಾರೆ.

ಇನ್ನು ಸಂಪಗಿರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆ ಕುರಿತು ಬಿಂದುರಾಣಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಲು ಮುಂದಾಗಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ