NEWSನಮ್ಮರಾಜ್ಯಸಂಸ್ಕೃತಿ

ಚಾಮುಂಡಿ ಬೆಟ್ಟದಲ್ಲಿ ಮೊಬೈಲ್‌ ಕಸಿದ ವಾನರನಿಗೆ ಬಾಳೆಹಣ್ಣಿನ ಆಮಿಷ!

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮೊಬೈಲ್ ಕಸಿದ ವಾನರವೊಂದು ಮರವೇರಿ ಭಕ್ತರೊಬ್ಬರಿಗೆ ಕೆಲಕಾಲ ಆಟವಾಡಿಸಿದ ಘಟನೆ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ.

ಹಾಸನದಿಂದ ಬಂದ ಕುಟುಂಬ ನಾಡದೇವಿ ಚಾಮುಂಡಿಯ ದರ್ಶನ ಪಡೆಯಲು ಮೆಟ್ಟಿಲು ಮಾರ್ಗದಲ್ಲಿ ಸಾಗಲು ಸಜ್ಜಾಗಿದ್ದರು. ಪಾದದ ಬಳಿ ಇರುವ ಚಾಮುಂಡಿ ವಿಗ್ರಹಕ್ಕೆ ಪೂಜೆ ಸಲ್ಲಿಸುವ ವೇಳೆ ಮಹಿಳೆಯ ಕೈಯಲ್ಲಿದ್ದ ಪರ್ಸ್ ಕಸಿದ ಕೋತಿ ಮರವೇರಿ ಕುಳಿತಿದೆ.

ಆ ಬಳಿಕ ಪರ್ಸ್ ನಲ್ಲಿದ್ದ ಒಂದೊಂದೇ ವಸ್ತುಗಳನ್ನು ಬಿಸಾಡಿದ ಮಂಗ ಕೊನೆಗೆ ಮೊಬೈಲ್ ಬಿಡದೆ ಕೊಂಬೆಯಿಂದ ಕೊಂಬೆಗೆ ಜಿಗಿಯುತ್ತ ಭಕ್ತರನ್ನು ಪರದಾಡುವಂತೆ ಮಾಡಿದೆ.

ಈ ವೇಳೆ ಮೊಬೈಲ್‌ ಪಡೆದುಕೊಳ್ಳುವುದುಕ್ಕೆ ವಾನರನಿಗೆ ಬಾಳೆಹಣ್ಣೀನ ಆಮಿಷ ಒಡ್ಡಿದ್ದಾರೆ. ಆದರೆ ಮಂಗಮಾತ್ರ ಮೊಬೈಲ್ ಬಿಡದೆ. ತನ್ನ ಚೇಷ್ಟೆಯನ್ನು ಮುಂದುವರಿಇದೆ. ಹೀಗೆ ವಾನರ ಸುಮಾರು ಅರ್ಧಗಂಟೆ ಕಾಲ ತನ್ನ ಕುಚೇಷ್ಟೆ ಮುಂದುವರಿಸಿ ಕೊನೆಗೆ ತುಪುಕ್‌ ಎಂದುಮೊಬೈಲ್‌ ಬಿಸಾಡಿತು.

ಸದ್ಯ ಕೊನೆಗೂ ಮೊಬೈಲ್ ಚಿಕ್ಕಿತಲ್ಲ ಎಂದು ಭಕ್ತರು ನೆಮ್ಮದಿಯಿಂದ ನಾಡದೇವಿಯ ದರ್ಶನಕ್ಕೆ ತೆರಳಿದರು. ಈ ವಿಡಿಯೋ ಜಾಲತಾಣದಲ್ಲಿ ಈಗ ಫುಲ್ ವೈರಲ್ ಆಗುತ್ತದ್ದು ವಾರನರ ಆಟವನ್ನು ತಾಮಾಸೆಯಿಂದಲೇ ನೋಡಿ ಖುಷಿಪಡುತ್ತಿದ್ದಾರೆ.

Leave a Reply

error: Content is protected !!
LATEST
ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ