ಯೂನಿಸೆಕ್ಸ್ ಸಲೂನ್ ಅಂಡ್ ಸ್ಪಾ ಮೇಲೆ ದಾಳಿ: ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರ ವಶ- ನಾಲ್ವರು ಮಹಿಳೆಯರ ರಕ್ಷಣೆ

ಮಂಡ್ಯ: ಸಲೂನ್ ಅಂಡ್ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧಯಲ್ಲಿ ತೊಡಗಿದ್ದ ಕೇಂದ್ರದ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ, ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ.
ನಗರದ ಬೆಂಗಳೂರು-ಮೈಸೂರು ಹೆದ್ದಾರಿಯ ಪಿಇಎಸ್ ಕಾಲೇಜು ಪಕ್ಕದಲ್ಲಿರುವ ಕ್ಲೌಡ್-11 ಹೆಸರಿನ ಯೂನಿಸೆಕ್ಸ್ ಸಲೂನ್ ಅಂಡ್ ಸ್ಪಾ ಮೇಲೆ ದಾಳಿ ನಡೆಸಿ ಸಲೂನ್ ಮಾಲಕಿ ಎಲಿಜೆಬತ್, ಓರ್ವ ಪಿಂಪ್, ಓರ್ವ ಗ್ರಾಹಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಪ್ರತಿಷ್ಠಿತ ಪಿಇಎಸ್ ಕಾಲೇಜು ಪಕ್ಕದಲ್ಲೇ ಈ ಕರಾಳ ದಂಧೆ ನಡೆದಿರುವುದು ಆತಂಕಕಾರಿ ಸಂಗತಿಯಾಗಿದೆ. ಈ ಹಿಂದೆಯೂ ಕ್ಲೌಡ್ 11 ಹೆಸರಿನ ಯೂನಿಸೆಕ್ಸ್ ಸಲೂನ್ ಅಂಡ್ ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಹಲವು ವರ್ಷಗಳಿಂದ ಸಲೂನ್ ಅಂಡ್ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿರುವ ಸಲೂನ್ ಮಾಲಕಿ ಎಲಿಜೆಬತ್ ವಿರುದ್ಧ ಈ ಹಿಂದೆ ಮೈಸೂರು, ಮಂಡ್ಯದಲ್ಲೂ ಪ್ರಕರಣ ದಾಖಲಾಗಿತ್ತು ಎನ್ನಲಾಗುತ್ತಿದೆ.
ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ, ಪರಶುರಾಮ್, ಸಿಪಿಐ ನವೀನ್ ಸುಪ್ಪೇಕರ್ ನೇತೃತ್ವದಲ್ಲಿ ದಾಳಿ ನಡೆಸಿದರು. ಈಗಾಗಲೇ ಒಮ್ಮೆ ದಾಳಿ ನಡೆಸಿ ಸ್ಪಾವನ್ನು ಬಂದ್ ಮಾಡಿಸಿದ್ದರೂ ಮತ್ತೆ ದಂಧೆ ನಡೆಸಲು ಅವಕಾಶ ನೀಡಿದ ಆರೋಪದ ಮೇರೆಗೆ ಕಟ್ಟಡ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸುವಂತೆ ಒಡನಾಡಿ ಸಂಸ್ಥೆ ಪೊಲೀಸರನ್ನು ಒತ್ತಾಯಿಸಿದೆ.
ಹೊರಗಿನಿಂದ ಮಹಿಳೆಯರನ್ನು ಕರೆತರುವುದರ ಜತೆಗೆ ಪಕ್ಕದ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ದಂಧೆಯಲ್ಲಿ ತೊಡಗಿಸಲು ಪ್ರಯತ್ನಿಸಿದ್ದ ಆರೋಪವೂ ಕೇಳಿಬಂದಿದೆ. ಇನ್ನು ಈ ಸಂಬಂಧ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ರೀತಿ ವೇಶ್ಯಾವಾಟಿಕೆಗೆ ಅವಕಾಶ ನೀಡುವಂತಹ ಬಾಡಿಗೆ ಕ್ಷೇತ್ರವನ್ನು ಸೀಜ್ ಮಾಡಬೇಕೆಂದು ಸರ್ಕಾರ ಎಲ್ಲ ಜಿಲ್ಲೆಗಳಿಗೂ ಆದೇಶ ಮಾಡಿದೆ. ಅದೇ ರೀತಿ ಮಕ್ಕಳ ಕಲ್ಯಾಣ ಸಮಿತಿ ವಿದ್ಯಾರ್ಥಿಗಳು ಓದುವ ಜಾಗದಲ್ಲಿ ಇಂತಹ ವಿಕೃತಿ ನಡೆಯುತ್ತಿರುವ ಸಂಬಂಧ ನಗರಸಭೆಗೆ ನೋಟಿಸ್ ನೀಡಬೇಕು. ಆರು ತಿಂಗಳ ಹಿಂದೆಯೂ ನಡೆದಿದೆ ಎಂದರೆ ಮುಂದೆಯೂ ನಡೆಯುತ್ತದೆ ಎಂದು ಮಾನವ ಹಕ್ಕುಗಳ ಆಯೋಗ ಆತಂಕ ವ್ಯಕ್ತಪಡಿಸಿದೆ.

ಇನ್ನು ಮಂಡ್ಯ ಜನರು ಮುಗ್ಧರು. ಈ ರೀತಿಯ ಅವಮಾನಗಳನ್ನು ಸಹಿಸಬಾರದು. ಮಕ್ಕಳು ಕಲಿಯುವ ಸ್ಥಳದಲ್ಲಿ ಈ ರೀತಿಯ ದಂಧೆ ನಡೆಯುತ್ತಿದೆ ಎಂದರೆ ಕಾನೂನು ಸುವ್ಯವಸ್ಥೆ, ಸುರಕ್ಷತೆ ಎಲ್ಲಿದೆ. ಮೈಸೂರನ್ನು ಬಿಟ್ಟು ಮಂಡ್ಯವನ್ನು ವೇಶ್ಯಾವಾಟಿಕೆಯ ಅಡ್ಡ ಮಾಡಿಕೊಳ್ಳುತ್ತಿರುವ ಬಗ್ಗೆ ಮಾಹಿತಿ ಬಂದಿದೆ ಎಂದು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ತಿಳಿಸಿದ್ದಾರೆ.
ಕ್ಲೌಡ್-11 ಯೂನಿಸೆಕ್ಸ್ ಮತ್ತು ಸ್ಪಾಗೆ ಯಾವುದೇ ಲೈಸೆನ್ಸ್ ಇಲ್ಲ. ಯಾವುದಕ್ಕೂ ಲೈಸೆನ್ಸ್ ಇಲ್ಲ. ನಗರಸಭೆ ಅಧಿಕಾರಿಗಳು ಏನು ಮಾಡುತ್ತಿದ್ದಾರೆ. ನಿರಂತರವಾಗಿ ಪರಿಶೀಲಿಸಬೇಕಲ್ಲವೇ. ಲೈಸೆನ್ಸ್ ಪಡೆದಿದ್ದಾರಾ, ಇಲ್ಲವಾ, ಲೈಸೆನ್ಸ್ ನವೀಕರಣ ಆಗಿದೆಯಾ ಎಂಬುದನ್ನು ನೋಡಿದ್ದಾರಾ. ಸುಮ್ಮನೆ ಕೂರುವುದಕ್ಕಾ ಅಧಿಕಾರಿಗಳು ಇರೋದು. ವಿದ್ಯಾರ್ಥಿಗಳು ಅಧ್ಯಯನ ಮಾಡುವ ಸ್ಥಳದಲ್ಲಿ ಇಂತಹ ವಿಕೃತಿ ನಡೆಯುವುದಾದರೆ ನಗರಸಭೆಗೆ ಬದ್ಧತೆ ಇಲ್ಲವೇ. ದಂಧೆಗೆ ಅವಕಾಶ ನೀಡಿರುವ ಕಟ್ಟಡ ಮಾಲೀಕರ ವಿರುದ್ಧವೂ ಕ್ರಮ ಆಗಬೇಕು ಎಂದು ಸ್ಟ್ಯಾನ್ಲಿ ಆಗ್ರಹಿಸಿದ್ದಾರೆ.
ಈ ಹಿಂದೆಯೂ ಇದೇ ಸ್ಪಾ ಮೇಲೆ ದಾಳಿ ನಡೆದಿತ್ತು. ನಂತರವೂ ಸ್ಪಾ ಮುಂದುವರೆಸಲು ಅವಕಾಶ ನೀಡಿರುವ ಕಟ್ಟಡ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು. ಸ್ಪಾಗೆ ಲೈಸೆನ್ಸ್ ನೀಡಿದ್ದರೆ ರದ್ದುಗೊಳಿಸಲು ನಗರಸಭೆಗೆ ತಿಳಿಸಲಾಗುವುದು ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.
Related


You Might Also Like
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...












