CRIMENEWSನಮ್ಮಜಿಲ್ಲೆ

ಯೂನಿಸೆಕ್ಸ್‌ ಸಲೂನ್‌ ಅಂಡ್‌ ಸ್ಪಾ ಮೇಲೆ ದಾಳಿ: ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರ ವಶ- ನಾಲ್ವರು ಮಹಿಳೆಯರ ರಕ್ಷಣೆ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಸಲೂನ್‌ ಅಂಡ್‌ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧಯಲ್ಲಿ ತೊಡಗಿದ್ದ ಕೇಂದ್ರದ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ, ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ.

ನಗರದ ಬೆಂಗಳೂರು-ಮೈಸೂರು ಹೆದ್ದಾರಿಯ ಪಿಇಎಸ್‌ ಕಾಲೇಜು ಪಕ್ಕದಲ್ಲಿರುವ ಕ್ಲೌಡ್‌-11 ಹೆಸರಿನ ಯೂನಿಸೆಕ್ಸ್‌ ಸಲೂನ್‌ ಅಂಡ್‌ ಸ್ಪಾ ಮೇಲೆ ದಾಳಿ ನಡೆಸಿ ಸಲೂನ್‌ ಮಾಲಕಿ ಎಲಿಜೆಬತ್‌, ಓರ್ವ ಪಿಂಪ್, ಓರ್ವ ಗ್ರಾಹಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರದ ಪ್ರತಿಷ್ಠಿತ ಪಿಇಎಸ್‌ ಕಾಲೇಜು ಪಕ್ಕದಲ್ಲೇ ಈ ಕರಾಳ ದಂಧೆ ನಡೆದಿರುವುದು ಆತಂಕಕಾರಿ ಸಂಗತಿಯಾಗಿದೆ. ಈ ಹಿಂದೆಯೂ ಕ್ಲೌಡ್ 11 ಹೆಸರಿನ ಯೂನಿಸೆಕ್ಸ್ ಸಲೂನ್ ಅಂಡ್ ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಹಲವು ವರ್ಷಗಳಿಂದ ಸಲೂನ್‌ ಅಂಡ್‌ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿರುವ ಸಲೂನ್ ಮಾಲಕಿ ಎಲಿಜೆಬತ್‌ ವಿರುದ್ಧ ಈ ಹಿಂದೆ ಮೈಸೂರು, ಮಂಡ್ಯದಲ್ಲೂ ಪ್ರಕರಣ ದಾಖಲಾಗಿತ್ತು ಎನ್ನಲಾಗುತ್ತಿದೆ.

ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ, ಪರಶುರಾಮ್, ಸಿಪಿಐ ನವೀನ್ ಸುಪ್ಪೇಕರ್ ನೇತೃತ್ವದಲ್ಲಿ ದಾಳಿ ನಡೆಸಿದರು. ಈಗಾಗಲೇ ಒಮ್ಮೆ ದಾಳಿ ನಡೆಸಿ ಸ್ಪಾವನ್ನು ಬಂದ್‌ ಮಾಡಿಸಿದ್ದರೂ ಮತ್ತೆ ದಂಧೆ ನಡೆಸಲು ಅವಕಾಶ ನೀಡಿದ ಆರೋಪದ ಮೇರೆಗೆ ಕಟ್ಟಡ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸುವಂತೆ ಒಡನಾಡಿ ಸಂಸ್ಥೆ ಪೊಲೀಸರನ್ನು ಒತ್ತಾಯಿಸಿದೆ.

ಹೊರಗಿನಿಂದ ಮಹಿಳೆಯರನ್ನು ಕರೆತರುವುದರ ಜತೆಗೆ ಪಕ್ಕದ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ದಂಧೆಯಲ್ಲಿ ತೊಡಗಿಸಲು ಪ್ರಯತ್ನಿಸಿದ್ದ ಆರೋಪವೂ ಕೇಳಿಬಂದಿದೆ. ಇನ್ನು ಈ ಸಂಬಂಧ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ರೀತಿ ವೇಶ್ಯಾವಾಟಿಕೆಗೆ ಅವಕಾಶ ನೀಡುವಂತಹ ಬಾಡಿಗೆ ಕ್ಷೇತ್ರವನ್ನು ಸೀಜ್‌ ಮಾಡಬೇಕೆಂದು ಸರ್ಕಾರ ಎಲ್ಲ ಜಿಲ್ಲೆಗಳಿಗೂ ಆದೇಶ ಮಾಡಿದೆ. ಅದೇ ರೀತಿ ಮಕ್ಕಳ ಕಲ್ಯಾಣ ಸಮಿತಿ ವಿದ್ಯಾರ್ಥಿಗಳು ಓದುವ ಜಾಗದಲ್ಲಿ ಇಂತಹ ವಿಕೃತಿ ನಡೆಯುತ್ತಿರುವ ಸಂಬಂಧ ನಗರಸಭೆಗೆ ನೋಟಿಸ್‌ ನೀಡಬೇಕು. ಆರು ತಿಂಗಳ ಹಿಂದೆಯೂ ನಡೆದಿದೆ ಎಂದರೆ ಮುಂದೆಯೂ ನಡೆಯುತ್ತದೆ ಎಂದು ಮಾನವ ಹಕ್ಕುಗಳ ಆಯೋಗ ಆತಂಕ ವ್ಯಕ್ತಪಡಿಸಿದೆ.

ಇನ್ನು ಮಂಡ್ಯ ಜನರು ಮುಗ್ಧರು. ಈ ರೀತಿಯ ಅವಮಾನಗಳನ್ನು ಸಹಿಸಬಾರದು. ಮಕ್ಕಳು ಕಲಿಯುವ ಸ್ಥಳದಲ್ಲಿ ಈ ರೀತಿಯ ದಂಧೆ ನಡೆಯುತ್ತಿದೆ ಎಂದರೆ ಕಾನೂನು ಸುವ್ಯವಸ್ಥೆ, ಸುರಕ್ಷತೆ ಎಲ್ಲಿದೆ. ಮೈಸೂರನ್ನು ಬಿಟ್ಟು ಮಂಡ್ಯವನ್ನು ವೇಶ್ಯಾವಾಟಿಕೆಯ ಅಡ್ಡ ಮಾಡಿಕೊಳ್ಳುತ್ತಿರುವ ಬಗ್ಗೆ ಮಾಹಿತಿ ಬಂದಿದೆ ಎಂದು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ತಿಳಿಸಿದ್ದಾರೆ.

ಕ್ಲೌಡ್‌-11 ಯೂನಿಸೆಕ್ಸ್‌ ಮತ್ತು ಸ್ಪಾಗೆ ಯಾವುದೇ ಲೈಸೆನ್ಸ್‌ ಇಲ್ಲ. ಯಾವುದಕ್ಕೂ ಲೈಸೆನ್ಸ್‌ ಇಲ್ಲ. ನಗರಸಭೆ ಅಧಿಕಾರಿಗಳು ಏನು ಮಾಡುತ್ತಿದ್ದಾರೆ. ನಿರಂತರವಾಗಿ ಪರಿಶೀಲಿಸಬೇಕಲ್ಲವೇ. ಲೈಸೆನ್ಸ್‌ ಪಡೆದಿದ್ದಾರಾ, ಇಲ್ಲವಾ, ಲೈಸೆನ್ಸ್‌ ನವೀಕರಣ ಆಗಿದೆಯಾ ಎಂಬುದನ್ನು ನೋಡಿದ್ದಾರಾ. ಸುಮ್ಮನೆ ಕೂರುವುದಕ್ಕಾ ಅಧಿಕಾರಿಗಳು ಇರೋದು. ವಿದ್ಯಾರ್ಥಿಗಳು ಅಧ್ಯಯನ ಮಾಡುವ ಸ್ಥಳದಲ್ಲಿ ಇಂತಹ ವಿಕೃತಿ ನಡೆಯುವುದಾದರೆ ನಗರಸಭೆಗೆ ಬದ್ಧತೆ ಇಲ್ಲವೇ. ದಂಧೆಗೆ ಅವಕಾಶ ನೀಡಿರುವ ಕಟ್ಟಡ ಮಾಲೀಕರ ವಿರುದ್ಧವೂ ಕ್ರಮ ಆಗಬೇಕು ಎಂದು ಸ್ಟ್ಯಾನ್ಲಿ ಆಗ್ರಹಿಸಿದ್ದಾರೆ.

ಈ ಹಿಂದೆಯೂ ಇದೇ ಸ್ಪಾ ಮೇಲೆ ದಾಳಿ ನಡೆದಿತ್ತು. ನಂತರವೂ ಸ್ಪಾ ಮುಂದುವರೆಸಲು ಅವಕಾಶ ನೀಡಿರುವ ಕಟ್ಟಡ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು. ಸ್ಪಾಗೆ ಲೈಸೆನ್ಸ್‌ ನೀಡಿದ್ದರೆ ರದ್ದುಗೊಳಿಸಲು ನಗರಸಭೆಗೆ ತಿಳಿಸಲಾಗುವುದು ಎಂದು ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...