CRIMENEWSನಮ್ಮಜಿಲ್ಲೆ

ಯೂನಿಸೆಕ್ಸ್‌ ಸಲೂನ್‌ ಅಂಡ್‌ ಸ್ಪಾ ಮೇಲೆ ದಾಳಿ: ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರ ವಶ- ನಾಲ್ವರು ಮಹಿಳೆಯರ ರಕ್ಷಣೆ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಸಲೂನ್‌ ಅಂಡ್‌ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧಯಲ್ಲಿ ತೊಡಗಿದ್ದ ಕೇಂದ್ರದ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ, ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ.

ನಗರದ ಬೆಂಗಳೂರು-ಮೈಸೂರು ಹೆದ್ದಾರಿಯ ಪಿಇಎಸ್‌ ಕಾಲೇಜು ಪಕ್ಕದಲ್ಲಿರುವ ಕ್ಲೌಡ್‌-11 ಹೆಸರಿನ ಯೂನಿಸೆಕ್ಸ್‌ ಸಲೂನ್‌ ಅಂಡ್‌ ಸ್ಪಾ ಮೇಲೆ ದಾಳಿ ನಡೆಸಿ ಸಲೂನ್‌ ಮಾಲಕಿ ಎಲಿಜೆಬತ್‌, ಓರ್ವ ಪಿಂಪ್, ಓರ್ವ ಗ್ರಾಹಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರದ ಪ್ರತಿಷ್ಠಿತ ಪಿಇಎಸ್‌ ಕಾಲೇಜು ಪಕ್ಕದಲ್ಲೇ ಈ ಕರಾಳ ದಂಧೆ ನಡೆದಿರುವುದು ಆತಂಕಕಾರಿ ಸಂಗತಿಯಾಗಿದೆ. ಈ ಹಿಂದೆಯೂ ಕ್ಲೌಡ್ 11 ಹೆಸರಿನ ಯೂನಿಸೆಕ್ಸ್ ಸಲೂನ್ ಅಂಡ್ ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಹಲವು ವರ್ಷಗಳಿಂದ ಸಲೂನ್‌ ಅಂಡ್‌ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿರುವ ಸಲೂನ್ ಮಾಲಕಿ ಎಲಿಜೆಬತ್‌ ವಿರುದ್ಧ ಈ ಹಿಂದೆ ಮೈಸೂರು, ಮಂಡ್ಯದಲ್ಲೂ ಪ್ರಕರಣ ದಾಖಲಾಗಿತ್ತು ಎನ್ನಲಾಗುತ್ತಿದೆ.

ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ, ಪರಶುರಾಮ್, ಸಿಪಿಐ ನವೀನ್ ಸುಪ್ಪೇಕರ್ ನೇತೃತ್ವದಲ್ಲಿ ದಾಳಿ ನಡೆಸಿದರು. ಈಗಾಗಲೇ ಒಮ್ಮೆ ದಾಳಿ ನಡೆಸಿ ಸ್ಪಾವನ್ನು ಬಂದ್‌ ಮಾಡಿಸಿದ್ದರೂ ಮತ್ತೆ ದಂಧೆ ನಡೆಸಲು ಅವಕಾಶ ನೀಡಿದ ಆರೋಪದ ಮೇರೆಗೆ ಕಟ್ಟಡ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸುವಂತೆ ಒಡನಾಡಿ ಸಂಸ್ಥೆ ಪೊಲೀಸರನ್ನು ಒತ್ತಾಯಿಸಿದೆ.

ಹೊರಗಿನಿಂದ ಮಹಿಳೆಯರನ್ನು ಕರೆತರುವುದರ ಜತೆಗೆ ಪಕ್ಕದ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ದಂಧೆಯಲ್ಲಿ ತೊಡಗಿಸಲು ಪ್ರಯತ್ನಿಸಿದ್ದ ಆರೋಪವೂ ಕೇಳಿಬಂದಿದೆ. ಇನ್ನು ಈ ಸಂಬಂಧ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ರೀತಿ ವೇಶ್ಯಾವಾಟಿಕೆಗೆ ಅವಕಾಶ ನೀಡುವಂತಹ ಬಾಡಿಗೆ ಕ್ಷೇತ್ರವನ್ನು ಸೀಜ್‌ ಮಾಡಬೇಕೆಂದು ಸರ್ಕಾರ ಎಲ್ಲ ಜಿಲ್ಲೆಗಳಿಗೂ ಆದೇಶ ಮಾಡಿದೆ. ಅದೇ ರೀತಿ ಮಕ್ಕಳ ಕಲ್ಯಾಣ ಸಮಿತಿ ವಿದ್ಯಾರ್ಥಿಗಳು ಓದುವ ಜಾಗದಲ್ಲಿ ಇಂತಹ ವಿಕೃತಿ ನಡೆಯುತ್ತಿರುವ ಸಂಬಂಧ ನಗರಸಭೆಗೆ ನೋಟಿಸ್‌ ನೀಡಬೇಕು. ಆರು ತಿಂಗಳ ಹಿಂದೆಯೂ ನಡೆದಿದೆ ಎಂದರೆ ಮುಂದೆಯೂ ನಡೆಯುತ್ತದೆ ಎಂದು ಮಾನವ ಹಕ್ಕುಗಳ ಆಯೋಗ ಆತಂಕ ವ್ಯಕ್ತಪಡಿಸಿದೆ.

ಇನ್ನು ಮಂಡ್ಯ ಜನರು ಮುಗ್ಧರು. ಈ ರೀತಿಯ ಅವಮಾನಗಳನ್ನು ಸಹಿಸಬಾರದು. ಮಕ್ಕಳು ಕಲಿಯುವ ಸ್ಥಳದಲ್ಲಿ ಈ ರೀತಿಯ ದಂಧೆ ನಡೆಯುತ್ತಿದೆ ಎಂದರೆ ಕಾನೂನು ಸುವ್ಯವಸ್ಥೆ, ಸುರಕ್ಷತೆ ಎಲ್ಲಿದೆ. ಮೈಸೂರನ್ನು ಬಿಟ್ಟು ಮಂಡ್ಯವನ್ನು ವೇಶ್ಯಾವಾಟಿಕೆಯ ಅಡ್ಡ ಮಾಡಿಕೊಳ್ಳುತ್ತಿರುವ ಬಗ್ಗೆ ಮಾಹಿತಿ ಬಂದಿದೆ ಎಂದು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ತಿಳಿಸಿದ್ದಾರೆ.

ಕ್ಲೌಡ್‌-11 ಯೂನಿಸೆಕ್ಸ್‌ ಮತ್ತು ಸ್ಪಾಗೆ ಯಾವುದೇ ಲೈಸೆನ್ಸ್‌ ಇಲ್ಲ. ಯಾವುದಕ್ಕೂ ಲೈಸೆನ್ಸ್‌ ಇಲ್ಲ. ನಗರಸಭೆ ಅಧಿಕಾರಿಗಳು ಏನು ಮಾಡುತ್ತಿದ್ದಾರೆ. ನಿರಂತರವಾಗಿ ಪರಿಶೀಲಿಸಬೇಕಲ್ಲವೇ. ಲೈಸೆನ್ಸ್‌ ಪಡೆದಿದ್ದಾರಾ, ಇಲ್ಲವಾ, ಲೈಸೆನ್ಸ್‌ ನವೀಕರಣ ಆಗಿದೆಯಾ ಎಂಬುದನ್ನು ನೋಡಿದ್ದಾರಾ. ಸುಮ್ಮನೆ ಕೂರುವುದಕ್ಕಾ ಅಧಿಕಾರಿಗಳು ಇರೋದು. ವಿದ್ಯಾರ್ಥಿಗಳು ಅಧ್ಯಯನ ಮಾಡುವ ಸ್ಥಳದಲ್ಲಿ ಇಂತಹ ವಿಕೃತಿ ನಡೆಯುವುದಾದರೆ ನಗರಸಭೆಗೆ ಬದ್ಧತೆ ಇಲ್ಲವೇ. ದಂಧೆಗೆ ಅವಕಾಶ ನೀಡಿರುವ ಕಟ್ಟಡ ಮಾಲೀಕರ ವಿರುದ್ಧವೂ ಕ್ರಮ ಆಗಬೇಕು ಎಂದು ಸ್ಟ್ಯಾನ್ಲಿ ಆಗ್ರಹಿಸಿದ್ದಾರೆ.

ಈ ಹಿಂದೆಯೂ ಇದೇ ಸ್ಪಾ ಮೇಲೆ ದಾಳಿ ನಡೆದಿತ್ತು. ನಂತರವೂ ಸ್ಪಾ ಮುಂದುವರೆಸಲು ಅವಕಾಶ ನೀಡಿರುವ ಕಟ್ಟಡ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು. ಸ್ಪಾಗೆ ಲೈಸೆನ್ಸ್‌ ನೀಡಿದ್ದರೆ ರದ್ದುಗೊಳಿಸಲು ನಗರಸಭೆಗೆ ತಿಳಿಸಲಾಗುವುದು ಎಂದು ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ