NEWSಕೃಷಿನಮ್ಮರಾಜ್ಯ

ಟನ್‌ ಕಬ್ಬಿಗೆ 4500 ರೂ. ನಿಗದಿಗೊಳಿಸಿ: ಕೇಂದ್ರ ಸರ್ಕಾರಕ್ಕೆ ಅತ್ತಹಳ್ಳಿ ದೇವರಾಜ್ ಆಗ್ರಹ

ಕಬ್ಬಿನಿಂದ ಸಕ್ಕರೆ ಎಥಾನಾಲ್‌, ವಿದ್ಯುತ್, ಕಾಂಪೋಸ್ಟ್ ಗೊಬ್ಬರ ಇನ್ನು ಇತರ ಉತ್ಪನ್ನಗಳನ್ನು ಉತ್ಪಾದಿಸುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ನಿರಂತರವಾಗಿ ವಂಚನೆ ಮಾಡುತ್ತಿವೆ. ಸರ್ಕಾರದ ಆದೇಶಗಳನ್ನು ವಾಮ ಮಾರ್ಗದಲ್ಲಿ ನಿರ್ಲಕ್ಷಿಸುತ್ತಿವೆ- ಅತ್ತಹಳ್ಳಿ ದೇವರಾಜ್‌

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಕಬ್ಬಿನ FRP ಬೆಲೆ ಒಂದು ಟನ್ ಕಬ್ಬಿಗೆ 3650 ರೂ. ಬೆಲೆ ನಿಗದಿ ಪಡಿಸಿದ್ದು ಕಬ್ಬು ಬೆಳೆಗಾರ ರೈತರಿಗೆ ನ್ಯಾಯ ಸಮ್ಮತವಲ್ಲ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘ ಖಂಡಿಸುತ್ತದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಹೇಳಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೇಂದ್ರ ಸಚಿವ ಸಂಪುಟ ನಿನ್ನೆ ತೀರ್ಮಾನಿಸಿ ಘೋಷಣೆ ಮಾಡಿರುವ 2026- 27ನೇ ಸಾಲಿಗೆ 10.25 ಸಕ್ಕರೆ ಇಳುವವರಿ ಟನ್ ಕಬ್ಬಿಗೆ 3650 ರೂ. ರೈತರ ಉತ್ಪಾದನ ವೆಚ್ಚಕಿಂತ ಕಡಿಮೆಯಾಗಿದೆ ಎಂದು ಕಿಡಿಕಾರಿದ್ದಾರೆ.

ಇನ್ನು ಕರ್ನಾಟಕ ಸರ್ಕಾರ 4450 ರೂ. ನಿಗದಿ ಮಾಡಬೇಕೆಂದು ವರದಿ ನೀಡಿದೆ ಇದನ್ನು ಗಮನಿಸಿ ಹೆಚ್ಚುವರಿ ಬೆಲೆ ನಿಗದಿ ಮಾಡಬೇಕಾಗಿತ್ತು. ಇದು ರೈತರನ್ನು ಕಬ್ಬು ಬೆಳೆಯಿಂದ ಒಕ್ಕಲಿಬಿಸುವ ಕಾರ್ಯವಾಗಿದೆ. ಕೂಡಲೇ ಎಫ್‌ಆರ್‌ಪಿ ದರ ಪುನರ್ ಪರಿಸಿಲಿಸಿ ಟನ್ ಕಬ್ಬಿಗೆ 4500 ರೂ. ನಿಗದಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಕಬ್ಬಿನಿಂದ ಸಕ್ಕರೆ ಎಥಾನಾಲ್‌, ವಿದ್ಯುತ್, ಕಾಂಪೋಸ್ಟ್ ಗೊಬ್ಬರ ಇನ್ನು ಇತರ ಉತ್ಪನ್ನಗಳನ್ನು ಉತ್ಪಾದಿಸುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ನಿರಂತರವಾಗಿ ವಂಚನೆ ಮಾಡುತ್ತಿವೆ. ಸರ್ಕಾರದ ಆದೇಶಗಳನ್ನು ವಾಮ ಮಾರ್ಗದಲ್ಲಿ ನಿರ್ಲಕ್ಷಿಸುತ್ತಿವೆ ಎಂದು ಆರೋಪಿಸಿದ್ದಾರೆ.

ಇನ್ನು ಕಬ್ಬಿನ ಹಣ ಪಾವತಿ ಸಕಾಲಕ್ಕೆ ಸಮರ್ಪಕವಾಗಿ ಮಾಡುತ್ತಿಲ್ಲ. ಇಂತಹ ವಿಚಾರದಲ್ಲಿ ಕೇಂದ್ರ ಸರ್ಕಾರ ಸಕ್ಕರೆ ನಿಯಂತ್ರಣ ಕಾಯ್ದೆ 1966 ತಿದ್ದುಪಡಿ ಮಾಡಬೇಕು. ಈ ಮೂಲಕ ಕಾನೂನು ಉಲ್ಲಂಘಿಸುವ ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಶಿಕ್ಷೆ ನೀಡುವ ಕಠಿಣ ಕಾಯ್ದೆ ಜಾರಿಗೆ ತರಬೇಕು ಎಂದು ಅತ್ತಹಳ್ಳಿ ದೇವರಾಜ್ ಒತ್ತಾಯಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಟನ್‌ ಕಬ್ಬಿಗೆ 4500 ರೂ. ನಿಗದಿಗೊಳಿಸಿ: ಕೇಂದ್ರ ಸರ್ಕಾರಕ್ಕೆ ಅತ್ತಹಳ್ಳಿ ದೇವರಾಜ್ ಆಗ್ರಹ ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ