NEWSನಮ್ಮಜಿಲ್ಲೆಬೆಂಗಳೂರು

ಜಿಬಿಎ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಆಟೋ ಟಿಪ್ಪರ್‌ಗಳ ಹಾಜರಾತಿ ಪ್ರಮಾಣ ಶೇ. 95ಕ್ಕೆ ಏರಿಕೆ: ಸಿಇಒ ಕರೀಗೌಡ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಸಂಗ್ರಹಣೆಯ ಆಟೋ ಟಿಪ್ಪರ್ ಗಳ ವಾಹನಗಳ ಸ್ಕ್ಯಾನಿಂಗ್ ಸಮಯ ಬದಲಾಯಿಸಲಾಗಿದ್ದು, ಎಲ್ಲಾ ಅಧಿಕಾರಿಗಳು ಪ್ರತಿನಿತ್ಯ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡುತ್ತಿರುವ ಪರಿಣಾಮ ಆಟೋ ಟಿಪ್ಪರ್ ಗಳ ಹಾಜರಾತಿ ಪ್ರಮಾಣ ಶೇ. 95% ಕ್ಕೆ ಏರಿಕೆಯಾಗಿದೆ ಎಂದು ಬೆಂ.ಘ.ತ್ಯಾ.ನಿ.ನಿ ದ ಸಿಇಓ ಕರೀಗೌಡ ಅವರು ತಿಳಿಸಿದ್ದಾರೆ.

ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ವತಿಯಿಂದ ಆಟೋ ಟಿಪ್ಪರ್‌ಗಳ ಸ್ಕ್ಯಾನಿಂಗ್ ಸಮಯವನ್ನು ಬೆಳಗ್ಗೆ 5.30 ರಿಂದ 6.30 ರವರೆಗೆ ನಿಗದಿಪಡಿಸಲಾಗಿದೆ. ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಕರೀಗೌಡ ರವರ ನೇತೃತ್ವದಲ್ಲಿ ಕಳೆದ 15 ದಿನಗಳಿಂದ ಬಿ.ಎಸ್.ಡ.ಬ್ಲ್ಯೂ.ಎಂ.ಎಲ್ ನ ಎಲ್ಲಾ ಅಧಿಕಾರಿಗಳು ಪ್ರತಿನಿತ್ಯ ಬೆಳಿಗ್ಗೆ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಆಟೋ ಟಿಪ್ಪರ್‌ಗಳು, ಪೌರಕಾರ್ಮಿಕರ ಹಾಜರಾತಿ ಪ್ರಕ್ರಿಯೆಯನ್ನು ಪರಿಶೀಲನೆ ನಡೆಸಲಾಗುತ್ತಿದೆ.

ನಗರದಲ್ಲಿ ಸುಮಾರು 200 ಮಸ್ಟರಿಂಗ್ ಕೇಂದ್ರಗಳಿದ್ದು, ಬೆಂ.ಘ.ತ್ಯಾ.ನಿ.ನಿ ದ ಸಿಇಒ, ಸಿಓಓ, 4 ಡಿಜಿಎಂಗಳು, 28 ಎಜಿಎಂ ಗಳು, ಚೀಫ್ ಮಾರ್ಷಲ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಪ್ರತಿನಿತ್ಯ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಹಾಜರಾತಿಯನ್ನು ಪರಿಶೀಲನೆ ನಡೆಸಲಿದ್ದಾರೆ.

ಜತೆಗೆ ಆಟೋ ಟಿಪ್ಪರ್‌ಗಳು ಮನೆ-ಮನೆಗೆ ಭೇಟಿ ನೀಡಿ ಹಸಿ ಹಾಗೂ ಒಣಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಲು ಸೂಚನೆ ನೀಡಲಾಗುತ್ತಿದೆ. ಈ ಪರಿಣಾಮ ಆಟೋ ಟಿಪ್ಪರ್‌ಗಳ ಹಾಜರಾತಿ ಪ್ರಮಾಣ ಶೇ. 85 % ರಿಂದ 95 % ಕ್ಕೆ ಏರಿಕೆಯಾಗಿದೆ. ಇದರಿಂದ ರಸ್ತೆ ಬದಿ ತ್ಯಾಜ್ಯ ಬಿಸಾಡುವ ಸಂಖ್ಯೆ ಕ್ರಮೇಣ ಕಡಿಮೆಯಾಗುತ್ತಿದ್ದು, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಮತ್ತಷ್ಟು ಸೂಕ್ತ ಕ್ರಮಗಳನ್ನ ಕೈಗೊಳ್ಳಲಾಗುವುದು.

ಟ್ರ್ಯಾಕ್ ಡ್ಯೂಟಿ ತಂತ್ರಾಂಶ ಅಭಿವೃದ್ಧಿ: ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವುದನ್ನು ಮೇಲ್ವಿಚಾರಣೆ ಮಾಡುವ ಸಲುವಾಗಿ ಟ್ರ್ಯಾಕ್ ಡ್ಯೂಟಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ಇದರಿಂದ ಎಲ್ಲಾ ಅಧಿಕಾರಿಗಳ ಹಾಜರಾತಿಯನ್ನು ಆನ್‌ಲೈನ್ ಮೂಲಕ ಪರಿಶೀಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್... ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ ಕೆಲ ಸಾರಿಗೆ ಅಧಿಕಾರಿಗಳಿಗೆ ವರದಾನವಾದ 17/1ನಿಯಮ- ಮೇ 10ರೊಳಗೆ ರದ್ದುಗೊಳಿಸಿ ಮೂಲ ಹುದ್ದೆಗೆ ನಿಯೋಜಿಸಲು ಎಂಡಿಗೆ ಸಾರಿ... ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಓಕೆನಾ ಅಥವಾ ವೇತನ ಆಯೋಗನಾ? ನೌಕರರ ಅಭಿಪ್ರಾಯವೇನು? KKRTC ವಿಜಯಪುರ: ಪ್ರತಿಷ್ಠಿತ ಸಾರಿಗೆ ಕಲ್ಯಾಣ ರಥ ಸ್ವಂತಕ್ಕೆ ಬಳಸುತ್ತಿರುವ ಕೆಲ ಅಧಿಕಾರಿಗಳು- ಮೌನವಾಗಿರುವ ಡಿಸಿ ಅಮಾ... ಕೇಂದ್ರ ಸರ್ಕಾರ 1966ರ ಸಕ್ಕರೆ ನಿಯಂತ್ರಣ ಕಾಯ್ದೆ ಬಗ್ಗೆ ಕೇಳಿರುವ ಅಭಿಪ್ರಾಯಕ್ಕೆ ರಾಜ್ಯ ಸರ್ಕಾರ ಸಮಿತಿ ರಚಿಸಿ ವರದಿ ...