NEWSನಮ್ಮಜಿಲ್ಲೆನಮ್ಮರಾಜ್ಯ

ರಕ್ಷಣೆ ಪಡೆ ಸಿಬ್ಬಂದಿಗೆ ಕೇಳಿಸಿದ ಮಗು ಅಳುತ್ತಿರುವ ಧ್ವನಿ: ಅಂತಿಮ ಘಟ್ಟ ತಲುಪಿದ ರಕ್ಷಣೆ ಕಾರ್ಯ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: 2 ವರ್ಷದ ಸಾತ್ವಿಕ್​ನನ್ನು ರಕ್ಷಣೆ ಮಾಡಲು ಎನ್​​ಡಿಆರ್​ಎಫ್​, ಎಸ್​ಡಿಆರ್​ಎಫ್​ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ವೇಗವಾಗಿ ನಡೆಯುತ್ತಿದೆ.

ಇನ್ನೇನು ಕೆಲವೇ ಗಂಟೆಗಳಲ್ಲಿ ಮಗುವನ್ನು ಹೊರ ತೆಗೆಯಲಾಗುತ್ತದೆ. ಈಗಾಗಲೇ ಕೊಳವೆ ಬಾವಿಯಲ್ಲಿ ಸಿಲುಕಿಕೊಂಡಿರುವ ಮಗು ಅಳುತ್ತಿರುವ ಧ್ವನಿಯನ್ನು ರಕ್ಷಣೆ ಪಡೆ ಸಿಬ್ಬಂದಿ ಕೇಳಿಸಿಕೊಂಡಿದ್ದಾರೆ.

ಇಂಡಿ ತಾಲೂಕಿನ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ NDRF, SDRF ತಂಡಗಳು ರಕ್ಷಣಾ ಕಾರ್ಯಾಚರಣೆಯ ವೇಗ ಹೆಚ್ಚಿಸಿವೆ.

ಸತತ 17 ಗಂಟೆಗಳಿಂದ ಈ ರಕ್ಷಣಾ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ರಕ್ಷಣೆ ಕಾರ್ಯ ಅಂತಿಮ ಘಟ್ಟ ತಲುಪಿದ್ದು ಕೆಲವೇ ಗಂಟೆಗಳಲ್ಲಿ ಮಗು ಹೊರತೆಗೆಯಲಿದ್ದಾರೆ.

ಆದರೆ, ಈ ವೇಳೆ ಕಲ್ಲು ಬಂಡೆ ಅಡ್ಡಿಯಾಗಿದ್ರಿಂದ ರಕ್ಷಣಾ ಕಾರ್ಯದಲ್ಲಿ ಕೊಂಚ ವಿಳಂಬವಾಗಿದೆ. ಇದು ಬಿಟ್ಟರೇ ಎಲ್ಲವೂ ಸುಗಮವಾಗಿ ನಡೆಯುತ್ತಿದ್ದ ಕಾರಣ ಇನ್ನೇನು ಕೆಲವೇ ಕೆಲವು ಗಂಟೆಗಳಲ್ಲಿ ಸಾತ್ವಿಕ್​ ಪ್ರಪಂಚವನ್ನು ಮರಳಿ ನೋಡಲಿದ್ದಾನೆ ಎಂಬ ಭರವಸೆ ಮೂಡಿದೆ.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ