NEWSನಮ್ಮರಾಜ್ಯರಾಜಕೀಯ

ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರ: ಫೆ.16ರಂದು ವಿಧಾನ ಪರಿಷತ್ ಉಪ ಚುನಾವಣೆ – ಜಿಲ್ಲಾಧಿಕಾರಿ ಡಾ.ಶಿವಶಂಕರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಭಾರತ ಚುನಾವಣಾ ಆಯೋಗವು, ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆಯ ಅಧಿಸೂಚನೆಯನ್ನು ಹೊರಡಿಸಿದೆ.

ಹೀಗಾಗಿ ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಯು 2024 ಫೆಬ್ರವರಿ 16 ರಂದು ಮತದಾನ ನಡೆಯಲಿದೆ. ಫೆಬ್ರವರಿ 20 ರಂದು ಮತ ಎಣಿಕೆ ನಡೆಯಲಿದೆ.

ಈ ನಡುವೆ ಚುನಾವಣೆಯ ಮಾದರಿ ಚುನಾವಣಾ ನೀತಿ ಸಂಹಿತೆಯು 16.01.2024 ರಿಂದಲೇ ಚುನಾವಣೆ ನಡೆಯುವ ಕ್ಷೇತ್ರ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಡಾ.ಶಿವಶಂಕರ. ಎನ್ ತಿಳಿಸಿದ್ದಾರೆ.

ಭಾರತ ಚುನಾವಣಾ ಆಯೋಗದ ಚುನಾವಣಾ ವೇಳಾ ಪಟ್ಟಿಯಂತೆ ಚುನಾವಣಾ ಅಧಿಸೂಚನೆ 23 ಜನವರಿ 2024 (ಮಂಗಳವಾರ), ನಾಮಪತ್ರ ಸಲ್ಲಿಸಲು ಕೊನೆಯ ದಿನ. 30 ಜನವರಿ 2024 (ಮಂಗಳವಾರ), ನಾಮಪತ್ರಗಳ ಪರಿಶೀಲನೆ ದಿನಾಂಕ- 31 ಜನವರಿ 2024 (ಬುಧವಾರ), ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನಾಂಕ 2 ಫೆಬ್ರವರಿ 2024 (ಶುಕ್ರವಾರ)

ಮತದಾನದ 16 ಫೆಬ್ರವರಿ 2024 (ಶುಕ್ರವಾರ), ಮತದಾನದ ಸಮಯ- ಬೆಳಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ನಡೆಯಲಿದೆ. ಇನ್ನು ಮತ ಎಣಿಕೆ 20 ಫೆಬ್ರವರಿ 2024 (ಮಂಗಳವಾರ), ಚುನಾವಣಾ ಪ್ರಕ್ರಿಯೆ ಕೊನೆಗೊಳ್ಳುವ 23 ಫೆಬ್ರವರಿ 2024 (ಶುಕ್ರವಾರ) ಎಂದು ತಿಳಿಸಿದ್ದಾರೆ.

ಭಾರತದ ಚುನಾವಣಾ ಆಯೋಗವು 16.01.2024 ರಂದು ಹೊರಡಿಸಲಾದ ಚುನಾವಣಾ ವೇಳಾ ಪಟ್ಟಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ 178-ಹೊಸಕೋಟೆ, 179-ದೇವನಹಳ್ಳಿ, 180-ದೊಡ್ಡಬಳ್ಳಾಪುರ, 181-ನೆಲಮಂಗಲ ನಾಲ್ಕು ವಿಧಾನಸಭಾ ಕ್ಷೇತ್ರಗಳು ಒಳಗೊಂಡಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಡಾ.ಶಿವಶಂಕರ ಎನ್ ತಿಳಿಸಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ