NEWSನಮ್ಮಜಿಲ್ಲೆಸಂಸ್ಕೃತಿ

ಬನ್ನೂರು: ಇಂದು ಬೀಡನಹಳ್ಳಿಯಲ್ಲಿ ಚಾಮುಂಡೇಶ್ವರಿ ಹಬ್ಬದ ಸಂಭ್ರಮ

ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ಪ್ರತಿ ವರ್ಷದಂತೆ ಈ ವರ್ಷವೂ ನಾಡ ದೇವತೆ ಶ್ರೀ ಚಾಮುಂಡೇಶ್ವರಿಯ ಅಮ್ಮನವರ ಹಬ್ಬ ಇಂದು (ಸೆ.26) ಬೀಡನಹಳ್ಳಿ ಗ್ರಾಮಗಳಲ್ಲಿ ವಿಜೃಂಭಣೆಯಿಂದ ನಡೆಯುತ್ತಿದೆ.

ಬೀಡನಹಳ್ಳಿಯ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಲಿದ್ದು, ಇದಕ್ಕೂ ಮುನ್ನಾ ಬನ್ನೂರು ಸಮೀಪ ಹರಿಯುತ್ತಿರುವ ಕಾವೇರಿ ನದಿಯಲ್ಲಿ ಮಾರಮ್ಮ ಹಾಗೂ ಮುತ್ತತ್ತಿರಾಯನ ಪೂಜೆಗಳನ್ನು ಹೂ ಹೊಂಬಾಳಿ ಮಾಡಿಕೊಂಡು ಬರುವ ಮೂಲಕ ಹಬ್ಬದ ಸಡಗರವಿಲ್ಲ ಇಮ್ಮಡಿಗೊಳ್ಳಲಿದೆ.

ಇನ್ನು ಗ್ರಾಮದ ಹಬ್ಬದ ಸಡಗರ ಮನೆ ಮಾಡಿದೆ. ತಲಾತಲಾಂತರದಿಂದಲೂ ಹಬ್ಬ ಆಚರಣೆ ಮಾಡಿಕೊಂಡು ಬರಲಾಗುತ್ತಿದ್ದು, ಅದರಂತೆ ಈ ವರ್ಷ ನವರಾತ್ರಿಯ ಐದನೆ ದಿನವಾದ ಇಂದು ಗ್ರಾಮದಲ್ಲಿ ಸಂಭ್ರಮ ಮನೆ ಮಾಡಿದೆ. ಜತೆಗೆ ಗ್ರಾಮದ ರಾಜ ಬೀದಿಗಳಲ್ಲಿ ವಿದ್ಯುತ್‌ ದೀಪಾಲಂಕರವನ್ನು ಮಾಡಲಾಗಿದ್ದು ರಾಜ ಬೀದಿಗಳು ಚಿತ್ತಾರದಿಂದ ಕಂಗೊಳಿಸುತ್ತಿವೆ.

ಹಬ್ಬದ ಅಂಗವಾಗಿ ಗ್ರಾಮ ದೇವತೆ ಚಾಮುಂಡಿಗೆ ವಿಶೇಷ ಮೊದಲ ಪೂಜೆ ಕಾರ್ಯಕ್ರಮ ನೆರವೇರಿಸಲಾಯಿತು. ಈ ಹಿನ್ನೆಲೆಯಲ್ಲಿ ಕಳೆದ ಶುಕ್ರವಾರ ಗ್ರಾಮದ ಹೆಂಗಳೆಯರು ಬಿಂದಿಗೆಯಲ್ಲಿ ನೀರು ತುಂಬಿಸಿ (ಮೀಸಲು ನೀರು) ಗಂಗೆ ಪೂಜೆ ನೆರವೇರಿಸಿ ಮನೆಗೆ ತೆಗೆದುಕೊಂಡು ಹೋಗುವ ಸಂಭ್ರಮ ಮನೆ ಮಾಡಿತು.

ಇಂದು ಮಧ್ಯಾಹ್ನನದ ನಂತರ ಗ್ರಾಮದ ಹೆಂಗಳೆಯರು ತಂಬಿಟ್ಟಿನಾರತಿ ಜತೆಗೆ ಹಣ್ಣು ಕಾಯಿ ಭೂಪ ಸಮೇತ ಮಾರಮ್ಮ ಮತ್ತು ಮುತ್ತತ್ತಿರಾಯನ ಪೂಜೆ ಹೊತ್ತು ಗ್ರಾಮಗಳ ರಾಜ ಬೀದಿಗಳ ಮೂಲಕ ಮೆರವಣಿಗೆ ಹೊರಟು ತಾಯಿ ಚಾಮುಂಡಿಯ ದೇವಸ್ಥಾನವನ್ನು ತಲುಪುತ್ತಾರೆ.

ಬಳಿ ತಾವು ಮೆರವಣಿಗೆ ಮೂಲಕ ಹೊತ್ತು ತಂದ ತಂಬಿಟ್ಟಿನಾರತಿ ಇಟ್ಟು ಹಣ್ಣು ಮುರಿದು, ಕಾಯಿ ಒಡೆದು ಗಂಧದಕಡ್ಡಿ ಹಚ್ಚಿ ಹೆಂಗಳೆಯರು ಭಕ್ತಿಭಾವದಿಂದ ನಾಡದೇವತೆಗೆ ಪೂಜೆ ನೆರವೇರಿಸುತ್ತಾರೆ.

ಇದಕ್ಕೂ ಮುನ್ನ ಗ್ರಾಮದ ರಾಜ ಬೀದಿಯಲ್ಲಿ ಮೆರವಣಿಗೆ ಹೊರಟ ಪೂಜೆಗಳನ್ನು ಬನ್ನೂರು ಹೆಗ್ಗೆರೆಗೆ ತಂದು ಮತ್ತೆ ಹೂ ಹೊಂಬಾಳೆ ಮಾಡಿದ ಬಳಿಕ ಬೀಡನಹಳ್ಳಿ ಮಾರಮ್ಮ ಮತ್ತು ಮುತ್ತತ್ತಿರಾಯನ ಪೂಜೆಗಳನ್ನು ಹೊತ್ತ ದೇವರ ಗುಡ್ಡಪ್ಪಂದಿರು ಚಾಮುಂಡಿ ದೇವಸ್ಥಾನ ತಲುಪಿ ಅಲ್ಲಿ ಮೂರು ಸುತ್ತು ಪ್ರದಕ್ಷಿಣೆ ಹಾಕುವರು.

ಹೆಂಗಳೆಯರು ಹೊತ್ತು ತಂದ ಪೂಜಾರತಿಗೆ ತೀರ್ಥ ಪ್ರೊಕ್ಷಣೆ ಮಾಡುವರು. ಆ ನಂತರ ದೇವಾಲಯದಾವರಣದಲ್ಲೇ ಗ್ರಾಮದೇವತೆ ಚಾಮುಂಡಿಗೆ ಪೂಜೆ ನೆರವೇರಿಸಲಾಗುವುದು.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ