NEWSನಮ್ಮಜಿಲ್ಲೆನಮ್ಮರಾಜ್ಯ

ಬನ್ನೂರು: ಬೀಡನಹಳ್ಳಿಯಲ್ಲಿ ಸಂಭ್ರಮದಿಂದ ಮಕರ ಸಂಕ್ರಾಂತಿ ಹಬ್ಬ ಆಚರಣೆ

ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ಹೋಬಳಿ ಸಮೀಪವಿರುವ ಬೀಡನಹಳ್ಳಿ ಗ್ರಾಮದಲ್ಲೂ ಪ್ರತಿವರ್ಷದಂತೆ ಈ ವರ್ಷವೂ ರಾಸುಗಳ ಕಿಚ್ಚು ಹಾಯಿಸಲಾಯಿತು. ಗ್ರಾಮದ ಹೊರ ಭಾಗದಲ್ಲಿರುವ ಶ್ರೀ ಶನೇಶ್ವರ ದೇಗುಲದ ಬಳಿ ಕಿಚ್ಚು ಹಾಯಿಸುವ ಮೂಲಕ ಊರಿನ ಹೃದಯ ಭಾಗದಲ್ಲಿರುವ ಶ್ರೀ ನಂದಿ ಬಸವೇಶ್ವರ ದೇಗುಲದ ವರೆಗೂ ಯುವ ಸಮೂಹ ಅಲಂಕರಿಸಿಕೊಂಡು ಕರೆತಂದಿದ್ದ ಎತ್ತುಗಳು, ಹಸುಗಳು, ಕುರಿಗಳು ಸೇರಿ ಎಲ್ಲ ರಾಸುಗಳನ್ನು ಮೆರವಣಿಗೆ ಮಾಡುವ ಮೂಲಕ ಸಂಭ್ರಮಿಸಿದರು.

ಗ್ರಾಮದಲ್ಲಿ ಹಿಂದಿನಿಂದ ನಡೆದುಕೊಂಡು ಬಂದಿರುವಂತೆ ಮೊದಲು ನಂದಿ ಬಸವೇಶ್ವರ ಸ್ವಾಮಿಯ ಬಸವನನ್ನು ಮೊದಲು ಕಿಚ್ಚುಹಾಯಿಸಲಾಯಿತು. ನಂತರ ಗ್ರಾಮಸ್ಥರು ಕರೆತಂದಿದ್ದ ಎಲ್ಲಾ ರಾಸುಗಳನ್ನು ಕಿಚ್ಚು ಹಾಯಿಸಲಾಯಿತು.

ಇನ್ನು ಹೋಬಳಿಯ ಅತ್ತಹಳ್ಳಿ, ಚಾಮನಹಳ್ಳಿ, ಬಸವನಹಳ್ಳಿ, ಹನುಮನಾಳು, ಮಾದಿಗಹಳ್ಳಿ, ಮಾಕನಹಳ್ಳಿ ಸೇರಿದಂತೆ ಎಲ್ಲಾ ಗ್ರಾಮಹಳಲ್ಲೂ ರಾಸುಗಳ ಕಿಚ್ಚು ಹಾಯಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಇನ್ನು ನಗರ ಪ್ರದೇಶಗಳ ಜೊತೆಗೆ ಹಳ್ಳಿಗಳಲ್ಲಿಯೂ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಗುರುವಾರ ಮುಂಜಾನೆಯೂ ಹಬ್ಬದ ಖರೀದಿ ಮುಂದುವರಿದಿತ್ತು. ಜನರು ಕಬ್ಬು, ಎಳ್ಳು–ಬೆಲ್ಲ, ಅವರೆ–ಗೆಣಸು ಮೊದಲಾದ ಸಾಮಗ್ರಿಗಳನ್ನು ಕೊಂಡು ತಂದರು.

ಮನೆಯಲ್ಲಿನ ಹೆಣ್ಣುಮಕ್ಕಳು ಹೊಸ ಬಟ್ಟೆ ತೊಟ್ಟು, ಅಕ್ಕಪಕ್ಕದ ಮನೆಮಂದಿಗೆಲ್ಲ ಎಳ್ಳು–ಬೆಲ್ಲ ಹಂಚುತ್ತ ಶುಭಾಶಯ ಕೋರಿದರು. ದೇವಾಲಯಗಳಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಬೆಳಗ್ಗೆಯಿಂದಲೇ ದೇಗುಲಗಳಲ್ಲಿ ಜನರ ಸಾಲು ನೆರೆದಿತ್ತು.

ಹಳ್ಳಿಗಳಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟಿತ್ತು. ರಾಸುಗಳ ಮೈ ತೊಳೆದು, ವಿವಿಧ ಸಾಮಗ್ರಿಗಳಿಂದ ಅಲಂಕರಿಸಿ, ಸಂಜೆ ಕಿಚ್ಚು ಹಾಯಿಸಲಾಯಿತು. ಊರಿನ ರಸ್ತೆಗಳಲ್ಲಿ ಕಿಚ್ಚು ಹಾಯಿಸುವ ದೃಶ್ಯ ಸಾಮಾನ್ಯವಾಗಿತ್ತು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ