NEWSನಮ್ಮಜಿಲ್ಲೆನಮ್ಮರಾಜ್ಯ

ಬನ್ನೂರು: ಬೀಡನಹಳ್ಳಿಯಲ್ಲಿ ಸಂಭ್ರಮದಿಂದ ಮಕರ ಸಂಕ್ರಾಂತಿ ಹಬ್ಬ ಆಚರಣೆ

ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ಹೋಬಳಿ ಸಮೀಪವಿರುವ ಬೀಡನಹಳ್ಳಿ ಗ್ರಾಮದಲ್ಲೂ ಪ್ರತಿವರ್ಷದಂತೆ ಈ ವರ್ಷವೂ ರಾಸುಗಳ ಕಿಚ್ಚು ಹಾಯಿಸಲಾಯಿತು. ಗ್ರಾಮದ ಹೊರ ಭಾಗದಲ್ಲಿರುವ ಶ್ರೀ ಶನೇಶ್ವರ ದೇಗುಲದ ಬಳಿ ಕಿಚ್ಚು ಹಾಯಿಸುವ ಮೂಲಕ ಊರಿನ ಹೃದಯ ಭಾಗದಲ್ಲಿರುವ ಶ್ರೀ ನಂದಿ ಬಸವೇಶ್ವರ ದೇಗುಲದ ವರೆಗೂ ಯುವ ಸಮೂಹ ಅಲಂಕರಿಸಿಕೊಂಡು ಕರೆತಂದಿದ್ದ ಎತ್ತುಗಳು, ಹಸುಗಳು, ಕುರಿಗಳು ಸೇರಿ ಎಲ್ಲ ರಾಸುಗಳನ್ನು ಮೆರವಣಿಗೆ ಮಾಡುವ ಮೂಲಕ ಸಂಭ್ರಮಿಸಿದರು.

ಗ್ರಾಮದಲ್ಲಿ ಹಿಂದಿನಿಂದ ನಡೆದುಕೊಂಡು ಬಂದಿರುವಂತೆ ಮೊದಲು ನಂದಿ ಬಸವೇಶ್ವರ ಸ್ವಾಮಿಯ ಬಸವನನ್ನು ಮೊದಲು ಕಿಚ್ಚುಹಾಯಿಸಲಾಯಿತು. ನಂತರ ಗ್ರಾಮಸ್ಥರು ಕರೆತಂದಿದ್ದ ಎಲ್ಲಾ ರಾಸುಗಳನ್ನು ಕಿಚ್ಚು ಹಾಯಿಸಲಾಯಿತು.

ಇನ್ನು ಹೋಬಳಿಯ ಅತ್ತಹಳ್ಳಿ, ಚಾಮನಹಳ್ಳಿ, ಬಸವನಹಳ್ಳಿ, ಹನುಮನಾಳು, ಮಾದಿಗಹಳ್ಳಿ, ಮಾಕನಹಳ್ಳಿ ಸೇರಿದಂತೆ ಎಲ್ಲಾ ಗ್ರಾಮಹಳಲ್ಲೂ ರಾಸುಗಳ ಕಿಚ್ಚು ಹಾಯಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಇನ್ನು ನಗರ ಪ್ರದೇಶಗಳ ಜೊತೆಗೆ ಹಳ್ಳಿಗಳಲ್ಲಿಯೂ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಗುರುವಾರ ಮುಂಜಾನೆಯೂ ಹಬ್ಬದ ಖರೀದಿ ಮುಂದುವರಿದಿತ್ತು. ಜನರು ಕಬ್ಬು, ಎಳ್ಳು–ಬೆಲ್ಲ, ಅವರೆ–ಗೆಣಸು ಮೊದಲಾದ ಸಾಮಗ್ರಿಗಳನ್ನು ಕೊಂಡು ತಂದರು.

ಮನೆಯಲ್ಲಿನ ಹೆಣ್ಣುಮಕ್ಕಳು ಹೊಸ ಬಟ್ಟೆ ತೊಟ್ಟು, ಅಕ್ಕಪಕ್ಕದ ಮನೆಮಂದಿಗೆಲ್ಲ ಎಳ್ಳು–ಬೆಲ್ಲ ಹಂಚುತ್ತ ಶುಭಾಶಯ ಕೋರಿದರು. ದೇವಾಲಯಗಳಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಬೆಳಗ್ಗೆಯಿಂದಲೇ ದೇಗುಲಗಳಲ್ಲಿ ಜನರ ಸಾಲು ನೆರೆದಿತ್ತು.

ಹಳ್ಳಿಗಳಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟಿತ್ತು. ರಾಸುಗಳ ಮೈ ತೊಳೆದು, ವಿವಿಧ ಸಾಮಗ್ರಿಗಳಿಂದ ಅಲಂಕರಿಸಿ, ಸಂಜೆ ಕಿಚ್ಚು ಹಾಯಿಸಲಾಯಿತು. ಊರಿನ ರಸ್ತೆಗಳಲ್ಲಿ ಕಿಚ್ಚು ಹಾಯಿಸುವ ದೃಶ್ಯ ಸಾಮಾನ್ಯವಾಗಿತ್ತು.

Leave a Reply

error: Content is protected !!
LATEST
ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ ಸಾರಿಗೆ ನೌಕರರ ವೇತನದಲ್ಲಿ ಹಣ ಕಟ್‌ ಮಾಡಿ ಎಲ್‌ಐಸಿ ಪಾಲಿಸಿಗೆ ಪಾವತಿಸದ ಬಗ್ಗೆ ದೂರು ಕೊಟ್ಟರೆ ಅಮಾನತು: ಸಚಿವ ರಾಮಲಿಂಗ... BMTC: ಚಾಲಕ ಕಂ. ನಿರ್ವಾಹಕರು ಆಗಸ್ಟ್‌ 14ರೊಳಗೆ ಸಂಪೂರ್ಣ ನಿರ್ವಾಹಕರಾಗಿ ಬದಲಾಗಬೇಕು: ಸಿಟಿಎಂ ಆದೇಶ