Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಬನ್ನೂರು: ಬೀಡನಹಳ್ಳಿಯಲ್ಲಿ ಸಂಭ್ರಮದಿಂದ ಮಕರ ಸಂಕ್ರಾಂತಿ ಹಬ್ಬ ಆಚರಣೆ

ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ಹೋಬಳಿ ಸಮೀಪವಿರುವ ಬೀಡನಹಳ್ಳಿ ಗ್ರಾಮದಲ್ಲೂ ಪ್ರತಿವರ್ಷದಂತೆ ಈ ವರ್ಷವೂ ರಾಸುಗಳ ಕಿಚ್ಚು ಹಾಯಿಸಲಾಯಿತು. ಗ್ರಾಮದ ಹೊರ ಭಾಗದಲ್ಲಿರುವ ಶ್ರೀ ಶನೇಶ್ವರ ದೇಗುಲದ ಬಳಿ ಕಿಚ್ಚು ಹಾಯಿಸುವ ಮೂಲಕ ಊರಿನ ಹೃದಯ ಭಾಗದಲ್ಲಿರುವ ಶ್ರೀ ನಂದಿ ಬಸವೇಶ್ವರ ದೇಗುಲದ ವರೆಗೂ ಯುವ ಸಮೂಹ ಅಲಂಕರಿಸಿಕೊಂಡು ಕರೆತಂದಿದ್ದ ಎತ್ತುಗಳು, ಹಸುಗಳು, ಕುರಿಗಳು ಸೇರಿ ಎಲ್ಲ ರಾಸುಗಳನ್ನು ಮೆರವಣಿಗೆ ಮಾಡುವ ಮೂಲಕ ಸಂಭ್ರಮಿಸಿದರು.

ಗ್ರಾಮದಲ್ಲಿ ಹಿಂದಿನಿಂದ ನಡೆದುಕೊಂಡು ಬಂದಿರುವಂತೆ ಮೊದಲು ನಂದಿ ಬಸವೇಶ್ವರ ಸ್ವಾಮಿಯ ಬಸವನನ್ನು ಮೊದಲು ಕಿಚ್ಚುಹಾಯಿಸಲಾಯಿತು. ನಂತರ ಗ್ರಾಮಸ್ಥರು ಕರೆತಂದಿದ್ದ ಎಲ್ಲಾ ರಾಸುಗಳನ್ನು ಕಿಚ್ಚು ಹಾಯಿಸಲಾಯಿತು.

ಇನ್ನು ಹೋಬಳಿಯ ಅತ್ತಹಳ್ಳಿ, ಚಾಮನಹಳ್ಳಿ, ಬಸವನಹಳ್ಳಿ, ಹನುಮನಾಳು, ಮಾದಿಗಹಳ್ಳಿ, ಮಾಕನಹಳ್ಳಿ ಸೇರಿದಂತೆ ಎಲ್ಲಾ ಗ್ರಾಮಹಳಲ್ಲೂ ರಾಸುಗಳ ಕಿಚ್ಚು ಹಾಯಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಇನ್ನು ನಗರ ಪ್ರದೇಶಗಳ ಜೊತೆಗೆ ಹಳ್ಳಿಗಳಲ್ಲಿಯೂ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಗುರುವಾರ ಮುಂಜಾನೆಯೂ ಹಬ್ಬದ ಖರೀದಿ ಮುಂದುವರಿದಿತ್ತು. ಜನರು ಕಬ್ಬು, ಎಳ್ಳು–ಬೆಲ್ಲ, ಅವರೆ–ಗೆಣಸು ಮೊದಲಾದ ಸಾಮಗ್ರಿಗಳನ್ನು ಕೊಂಡು ತಂದರು.

ಮನೆಯಲ್ಲಿನ ಹೆಣ್ಣುಮಕ್ಕಳು ಹೊಸ ಬಟ್ಟೆ ತೊಟ್ಟು, ಅಕ್ಕಪಕ್ಕದ ಮನೆಮಂದಿಗೆಲ್ಲ ಎಳ್ಳು–ಬೆಲ್ಲ ಹಂಚುತ್ತ ಶುಭಾಶಯ ಕೋರಿದರು. ದೇವಾಲಯಗಳಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಬೆಳಗ್ಗೆಯಿಂದಲೇ ದೇಗುಲಗಳಲ್ಲಿ ಜನರ ಸಾಲು ನೆರೆದಿತ್ತು.

ಹಳ್ಳಿಗಳಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟಿತ್ತು. ರಾಸುಗಳ ಮೈ ತೊಳೆದು, ವಿವಿಧ ಸಾಮಗ್ರಿಗಳಿಂದ ಅಲಂಕರಿಸಿ, ಸಂಜೆ ಕಿಚ್ಚು ಹಾಯಿಸಲಾಯಿತು. ಊರಿನ ರಸ್ತೆಗಳಲ್ಲಿ ಕಿಚ್ಚು ಹಾಯಿಸುವ ದೃಶ್ಯ ಸಾಮಾನ್ಯವಾಗಿತ್ತು.

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ