ಬನ್ನೂರು: ಪ್ರತಿ ವರ್ಷ ಏಕಕಾಲಕ್ಕೆ ನಡೆಯುವ ಏಳೂರಿನ ಮಾರಮ್ಮ ದೇವತೆಗಳ ಹಬ್ಬ ಮಂಗಳವಾರ (ಫೆ.18) ಮತ್ತು ಬುಧವಾರ (ಫೆ.19) ಆಯಾಯ ಗ್ರಾಮಗಳಲ್ಲಿ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ, ಈ ಬಾರಿ ಬೀಡನಹಳ್ಳಿಯಲ್ಲಿ ಮಾರಿಹಬ್ಬದ ಸಂಭ್ರಮ ಇಲ್ಲ.
ಹೌದು! ಬೀಡನಹಳ್ಳಿಯ ಚಾಮುಂಡೇಶ್ವರಿ ದೇವಸ್ಥಾನದ ಅರ್ಚಕರೂ ಆದ ದೇವರಗುಡ್ಡ ವಯೋಸಹಜವಾಗಿ ನಿಧನರಾಗಿರುವುದರಿಂದ ಹಬ್ಬವನ್ನು ಈ ಬಾರಿ ಮಾಡದಂತೆ ಗ್ರಾಮದ ಮುಖಂಡರು ನಿರ್ಧರಿಸಿರುವುದರಿಂದ ಹಬ್ಬದ ಸಡಗರವಿಲ್ಲ.
ಇನ್ನು ಉಳಿದ ಮಾಕನಹಳ್ಳಿ, ಬಸವನಹಳ್ಳಿ, ಬನ್ನೂರು, ಬೆಟ್ಟಹಳ್ಳಿ, ಚಾಮನಹಳ್ಳಿ ಮತ್ತು ಅತ್ತಹಳ್ಳಿ ಗ್ರಾಮಗಳಲ್ಲಿ ಹಬ್ಬದ ಸಡಗರ ಮನೆ ಮಾಡಿದೆ. ತಲಾತಲಾಂತರದಿಂದಲೂ ಏಕಕಾಲಕ್ಕೆ ಹಬ್ಬ ಆಚರಣೆ ಮಾಡಿಕೊಂಡು ಬರಲಾಗುತ್ತಿದ್ದು, ಅದರಂತೆ ಈ ವರ್ಷ ಫೆ. 18 ಮತ್ತು 19ರಂದು ಹಬ್ಬ ಆಚರಣೆ ಮಾಡಲಾಗುತ್ತಿದೆ.
ಹಬ್ಬದ ಅಂಗವಾಗಿ ಮಂಗಳವಾರ ಆಯಾಯ ಗ್ರಾಮ ದೇವತೆ ಮಾರಮ್ಮನಿಗೆ ವಿಶೇಷ ಮೊದಲ ಪೂಜೆ (ತಂಪು ಸೇವೆ) ಕಾರ್ಯಕ್ರಮ ನೆರವೇರಿಸಲಾಯಿತು. ಈ ಹಿನ್ನೆಲೆಯಲ್ಲಿ ಇಂದು ಗ್ರಾಮದ ಹೆಂಗಳೆಯರು ಬಿಂದಿಗೆಯಲ್ಲಿ ನೀರು ತುಂಬಿಸಿ (ಮೀಸಲು ನೀರು) ಗಂಗೆ ಪೂಜೆ ನೆರವೇರಿಸಿ ಮನೆಗೆ ತೆಗೆದುಕೊಂಡು ಹೋಗುವ ಸಂಭ್ರಮ ಮನೆ ಮಾಡಿತು.
ಬುಧವಾರ (ನಾಳೆ) ಮುಂಜಾನೆ ಮಡೆ ಊಯುವರು: ಉತ್ತನಹಳ್ಳಿ ಮಾರಮ್ಮನಿಗೆ ಗ್ರಾಮದ ಪ್ರತಿ ಮನೆಯಿಂದ ಒಬ್ಬರಂತೆ ಮುಂಜಾನೆ 4.30ರಲ್ಲಿ ಒಂದೆಡೆ ಸೇರಿ ಮಡೆ ಊಯ್ಯುವರು. (ಹೊಸ ಮಡಿಕೆ, ತಂದು ಅದರಲ್ಲಿ ಅಕ್ಕಿ, ಬೇಳೆ, ಉಪ್ಪು ಅದಕ್ಕೆ ತಕ್ಕಷ್ಟು ನೀರು ಹಾಕಿ ಅನ್ನಮಾಡುವುದು) ನಂತರ ಈ ಅನ್ನ ಪ್ರಸಾದ ಸಿದ್ಧವಾಎ ಮಡಿಕೆಯ ಬಾಯಿಯನ್ನು ಅಡಕೆಯ ಎಲೆ( ಒಡಾಳೆ)ಯಿಂದ ಮುಚ್ಚಿ ಅದನ್ನು ಒಡಾಳೆ ದಾರದಿಂದಲೇ ಕಟ್ಟುತ್ತಾರೆ. ಈ ವೇಳೆ ಜವನ ಬೇವಿನ ಸೊಪ್ಪು ಕಟ್ಟುವ ಮೂಲಕ ಅಲಂಕರಿಸಿ ತಾವು ಮಡೆ ಊಯ್ಯಿದಿರುವ ಮಡಿಕೆಯನ್ನು ಗುರುತು ಹಾಕಿಕೊಂಡು ಬರುತ್ತಾರೆ.
ಮತ್ತೆ ಮಧ್ಯಾಹ್ನನದ ನಂತರ ಗ್ರಾಮದ ಹೆಂಗಳೆಯರು ತಂಬಿಟ್ಟಿನಾರತಿ ಜತೆಗೆ ಹಣ್ಣು ಕಾಯಿ ಭೂಪ ಸಮೇತ ಮಾರಮ್ಮ ಮತ್ತು ಮುತ್ತತ್ತಿರಾಯನ ಪೂಜೆ ಹೊತ್ತು ಗ್ರಾಮಗಳ ರಾಜ ಬೀದಿಗಳ ಮೂಲಕ ಮೆರವಣಿಗೆ ಹೊರಟು ಮಡೆ ಊಯ್ಯಿದಿರುವ ಸ್ಥಳ ತಲುಪುತ್ತಾರೆ.
ಈ ಸ್ಥಳದಲ್ಲಿ ತಮ್ಮ ಮುಂಜಾನೆ ಮಡೆ ಊಯ್ಯಿದಿರುವ ಮಡಿಕೆಯ ಬಳಿ ತಾವು ಮೆರವಣಿಗೆ ಮೂಲಕ ಹೊತ್ತು ತಂದ ತಂಬಿಟ್ಟಿನಾರತಿ ಇಟ್ಟು ಹಣ್ಣು ಮುರಿದು, ಕಾಯಿ ಒಡೆದು ಗಂಧದಕಡ್ಡಿ ಹಚ್ಚಿ ಹೆಂಗಳೆಯರು ಭಕ್ತಿಭಾವದಿಂದ ಪೂಜೆ ನೆರವೇರಿಸುತ್ತಾರೆ.
ಗ್ರಾಮದ ರಾಜ ಬೀದಿಯಲ್ಲಿ ಮೆರವಣಿಗೆ ಹೊರಟ ಪೂಜೆಗಳನ್ನು ಬನ್ನೂರು ಹೆಗ್ಗೆರೆಗೆ ತಂದು ಮತ್ತೆ ಹೂ ಹೊಂಬಾಳೆ ಮಾಡಿದ ಬಳಿಕ ಬೀಡನಹಳ್ಳಿ ಮಾರಮ್ಮ ಮತ್ತು ಮುತ್ತತ್ತಿರಾಯನ ಪೂಜೆಗಳನ್ನು ಹೊತ್ತ ದೇವರ ಗುಡ್ಡಪ್ಪಂದಿರು ಮಡೆ ಊಯ್ಯಿದಿರುವ ಸ್ಥಳಕ್ಕೆ ತಲುಪಿ ಅಲ್ಲಿ ಮೂರು ಸುತ್ತು ಪ್ರದಕ್ಷಿಣೆ ಹಾಕುವರು. ಆದರೆ ಈ ಬಾರಿ ಇಲ್ಲ.
ಮಡೆಗಳ ಮೇಲೆ ತೀರ್ಥ ಪ್ರೊಕ್ಷಣೆ ಮಾಡುವರು. ಆ ನಂತರ ಮಡೆ ಊಯ್ಯಿದಿರುವ ಮಡಿಕೆಗಳನ್ನು ಹೊತ್ತು ಮನೆಗಳಿಗಳತ್ತ ಗ್ರಾಮದ ಯುವಕರು ತೆರಳುವರು. ಇನ್ನು ಮನೆ ಬಾಗಿಲ ಬಳಿ ಮಡೆ ಹೊತ್ತವರ ಪಾದಪೂಜೆಯನ್ನು ಅಂದರೆ ಗಂಗೆಯನ್ನೆರೆಯುವ ಮೂಲಕ ದೇವರ ಸ್ವರೂಪಿ ಎಂದು ಮಡೆಯನ್ನು ಮನೆಗೆ ಬರಮಾಡಿಕೊಳ್ಳುವರು. ಆ ಮಡೆ ಪ್ರಸಾದವನ್ನು ಮನೆಯ ಪ್ರತಿ ಸದಸ್ಯರು ಸ್ವೀಕರಿಸುವರು. ಈ ಮೂಲಕ ಮಡೆ ಪ್ರಸಾದ ಪೂರ್ಣಗೊಳ್ಳುವುದು.
Related

You Might Also Like
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...