NEWSನಮ್ಮಜಿಲ್ಲೆಸಂಸ್ಕೃತಿ

ಬನ್ನೂರು: ಜೋಡೆತ್ತುಗಳ ಬಂಡಿ ಓಟ – ಹೇಮಾದ್ರಾಂಬಾ ದೇವಿಗೆ ಹರಿಜನರಿಂದ ಅನ್ನನೈವೇದ್ಯ

ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ಪುರಾಣ ಪ್ರಸಿದ್ಧ ಶ್ರೀ ಹೇಮಾದ್ರಾಂಬಾ ಜಾತ್ರಾ ಮಹೋತ್ಸದ ಪಟ್ಟಣದಲ್ಲಿ ಕಳೆಗಟ್ಟಿದ್ದು, ಜಾತ್ರೆ ಅಂಗವಾಗಿ ಜೋಡೆತ್ತಿನ ಬಂಡಿಗಳನ್ನು ಪಟ್ಟಣದ ರಾಜ ಬೀದಿಗಳಲ್ಲಿ ಇಂದು ಓಡಿಸುವ ಮೂಲಕ ಪಟ್ಟಣದಲ್ಲಿ ಸಂಭ್ರಮ ಮನೆಮಾಡಿತ್ತು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇನ್ನು ನಾಳೆ (ಸೋಮವಾರ) ಅಲಂಕರಿಸಿದ ತೇರನ್ನು ರಾಜಬೀದಿಗಳಲ್ಲಿ ಎಳೆಯುವ ಮೂಲಕ ಭಕ್ತರು ಸಂಭ್ರಮಿಸಲಿದ್ದಾರೆ. ಹೌದು! ಅಲಂಕೃತಗೊಂಡ ತೇರನ್ನು ಫೆ.6ರಂದು ಬೆಳಗ್ಗೆ 8.30ಕ್ಕೆ ಎಳೆಯುವ ಮೂಲಕ ಗ್ರಾಮದ ಮುಖಂಡರು ಚಾಲನೆ ನೀಡಿಲಿದ್ದಾರೆ. ನಂತರ ತೇರಿನಬೀದಿ ಮೂಲಕ ಸಾಗುವ ರಥವು ದೊಡ್ಡಂಗಡಿ ಬೀದಿ ಮೂಲಕ ಸಾಗಿ ಮತ್ತೆ ದೇವಾಲಯದ ಆವರಣವನ್ನು ಬೆಳಗ್ಗೆ 11.30ಕ್ಕೆ ತಲುಪಲಿದೆ.

ಇನ್ನು ಇಂದು ಜೋಡೆತ್ತಿನ ಬಂಡಿಗಳನ್ನು ಪಟ್ಟಣದ ರಾಜ ಬೀದಿಗಳಲ್ಲಿ ಓಡಿಸಲಾಯಿತು. ಇದಕ್ಕೂ ಮುನ್ನಾ ಬೆಳಗ್ಗೆ ಪ್ರಾತಃಕಾಲದಲ್ಲಿ ವಿವಿಧ ಹೂಗಳಿಂದ ಅಲಂಕರಿಸಿದ ಹೇಮಾದ್ರಾಂಬಾ ದೇವಿಗೆ ಅಭಿಷೇಕ, ಕುಂಕುಮಾರ್ಚನೆ ಮತ್ತು ಮಹಾಮಂಗಳಾರತಿ ನೆರವೇರಿಸಲಾಯಿತು. ಈ ವೇಳೆ ಸಾವಿರಾರು ಭಕ್ತರು ದೇವಿ ದರ್ಶನ ಪಡೆದರು.

ವಿಶೇಷ ಪೂಜಾ ಕಾರ್ಯಕ್ರಮ ಅಂಗವಾಗಿ ಮಾಕನಹಳ್ಳಿಯ ದೇವಿ ತೋಪಿಗೆ ಹೇಮಾದ್ರಾಂಬಾ ಉತ್ಸವ ಮೂರ್ತಿಯನ್ನು ಫಲ್ಲಕ್ಕಿಮೇಲೆ ಕೂರಿಸಿ ಕರೆದೊಯ್ಯಲಾಯಿತು. ದೇವಿ ತೋಪಿನಲ್ಲಿ ದೇವಿಗೆ ಅವಭೃತಸ್ನಾನ ಮತ್ತು ಅನ್ನನೈವೇದ್ಯ ನೆರವೇರಿಸಲಾಯಿತು.

ಅವಭೃತಸ್ನಾನ ಮತ್ತು ಅನ್ನನೈವೇದ್ಯಕ್ಕಾಗಿ ಬನ್ನೂರಿನಿಂದ ಮಾಕನಹಳ್ಳಿಯ ದೇವಿ ತೋಪಿಗೆ ದೇವಿಯನ್ನು ಫಲ್ಲಕ್ಕಿ ಮೇಲೆ ಕೂರಿಸಿಕೊಂಡು ಮೆರವಣಿಗೆ ಮೂಲಕ ಪಟ್ಟಣದ ರಾಜ ಬೀಗಳಲ್ಲಿ, ಅಂದರೆ ದೇವಾಲಯದಿಂದ ರತ್ನಮಹಲ್ ಚಿತ್ರಮಂದಿ, ಚಾಮುಂಡಿ ದೇವಾಲಯ ರಸ್ತೆ ಮಾರ್ಗವಾಗಿ ದೇವಿ ತೋಪಿನವರೆಗೆ ಕರೆತರಲಾಯಿತು.

ಈ ವೇಳೆ ರಸ್ತೆಯುದ್ದಕ್ಕೂ ನೆರೆದಿದ್ದ ಭಕ್ತರು ದೇವಿ ದರ್ಶನ ಪಡೆದರು. ದೇವಿ ತೋಪಿನಲ್ಲಿ ಅವಭೃತ ಸ್ನಾತ ನೆರೆವೇರಿದ ಬಳಿಕ ಹರಿಜನರಿಂದ ನೈವೇದ್ಯ ನೀಡಲಾಯಿತು. ಈ ವೈಭವವನ್ನು ಕಣ್ತುಂಬಿಕೊಳ್ಳಲು ಜಿಲ್ಲೆಯ ನಾನಾ ಭಾಗಗಳಿಂದ ಭಕ್ತರು ಸಾಗರೋಪಾದಿಯಲ್ಲಿ ಆಗಮಿಸಿದ್ದರು.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ