ಮೈಸೂರು: ಬಸವ ಚರಿತ್ರೆ ಎಂಬುದು ಪ್ರಜಾಪ್ರಭುತ್ವ ಸ್ಥಾಪನೆಯ ಹೋರಾಟವಾಗಿದೆ. ಬುದ್ಧ ತನ್ನ ಬಿಕ್ಕುಗಳ ಮುಖಾಂತರ ಪ್ರಜಾಪ್ರಭುತ್ವದ ಬೀಜ ಬಿತ್ತಿದರು. ಆ ಬೀಜವು ಬಸವಣ್ಣನವರ ಮೂಲಕ ಅನುಭವ ಮಂಟಪದ ರೂಪತಾಳಿ ಮೊಳಕೆ ಹೊಡೆಯಿತು. ಹೀಗೆ ಬಿತ್ತಿ ಮೊಳಕೆಯೊಡೆದ ಬೀಜವು ಡಾ.ಬಿ.ಆರ್.ಅಂಬೇಡ್ಕರ್ ಅವರ ಮುಖಾಂತರ ಮರವಾಗಿ ಬೆಳೆಯಿತು. ಆ ಮರದಲ್ಲಿ ಬೆಳೆದ ಫಲವನ್ನು ನಾವೆಲ್ಲರೂ ಇಂದು ಅನುಭವಿಸುತ್ತಿದ್ದೇವೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಇಂದು ನಗರದ ಕಲಾಮಂದಿರದಲ್ಲಿ ಬಸವ ಬಳಗಗಳ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ “ಬಸವ ಜಯಂತಿ” ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದರ ಮೂಲ ಉದ್ದೇಶ ಜನರು ತಮಗೆ ಬೇಕಾದಂತೆ ಬದುಕನ್ನು ಬದುಕಲು ಹಾಗೂ ಆಡಳಿತ ವ್ಯವಸ್ಥೆಯಲ್ಲಿ ಜನಪರ ಯೋಜನೆ ಜಾರಿ ಮಾಡಿ ಸಮಸಮಾಜದ ನಿರ್ಮಾಣದ ಕಡೆಗೆ ನಾವು ಸಾಗಬೇಕಿದೆ. ನಮ್ಮ ದೇಶದ ಸಾಮಾಜಿಕ ಅಸಮಾನತೆ, ವರ್ಣಾಶ್ರಮದ ನೀತಿಗಳು, ಲಿಂಗತಾರತಮ್ಯ, ಜಾತೀಯತೆ ಮತ್ತು ಅಸ್ಪೃಶ್ಯತೆ ಇಡೀ ಮಾನವ ಕುಲಕ್ಕೆ ಅಂಟಿದ ಕಳಂಕವಾಗಿದೆ. ಈ ಎಲ್ಲಾ ತಾರತಮ್ಯಗಳ ವಿರುದ್ದವಾಗಿ ಬಸವಣ್ಣನವರು ತಮ್ಮ ಪ್ರಬಲವಾದ ಹೋರಾಟ ಮತ್ತು ನಿಲುವುಗಳ ಮೂಲಕ ನಿರ್ಮೂಲನೆ ಕಾರ್ಯಕ್ಕೆ ಮುಂದಾದರು ಎಂದರು.
ಬಸವಣ್ಣ ‘ದಯೆ ಇಲ್ಲದ ಧರ್ಮ ಯಾಕೆ’ ಎಂದು ಪ್ರಶ್ನಿಸಿದ್ದಾರೆ. ಕೆಲವು ವರ್ಗದ ಜನರನ್ನು ದೇವಸ್ಥಾನಗಳ ಪ್ರವೇಶಕ್ಕೆ ನಿರಾಕರಿಸಿದಾಗ ಬಸವಣ್ಣನವರು ‘ನನ್ನ ದೇಹವೆ ದೇಗುಲ’ ಎಂಬ ಸಂದೇಶದ ಮೂಲಕ ದೇವರ ಪರಿಕಲ್ಪನೆಯನ್ನು ಜಗದಲಕ್ಕೆ ಹಾಗೂ ಆಕಾಶದೆತ್ತರಕ್ಕೆ ವಿಸ್ತಿರಿಸಿದರು. ಈ ಬಗೆಯ ಉದಾತ್ತ ಕಲ್ಪನೆ ಹೊಂದಿರುವ ಬಸವ ತತ್ವದ ಅನುಯಾಯಿಗಳು ಅವರನ್ನು ಹೊಗಳುತ್ತ ಕೂರಬಾರದು ಎಂದು ಕಿವಿಮಾತು ಹೇಳಿದರು.
ಬಸವಣ್ಣನವರನ್ನು ನಮ್ಮ ಸರ್ಕಾರವು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ನಾವು ಸಾಂಸ್ಕೃತಿಕವಾಗಿ ಬಲಾಢ್ಯರಾಗದಿದ್ದರೆ ಬಲಿಷ್ಠವಾದ ಸಮಾಜ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಬಿಜ್ಜಳನ ಆಸ್ಥಾನದಲ್ಲಿ ಒಂದು ಭಾಗದ ನಿಧಿಯನ್ನು ಕೊಡುವುದಾಗಿ ಹೇಳಿದಾಗ, ಅರ್ಥ ಸಚಿವರಾಗಿ ಬಸವಣ್ಣ ಅದನ್ನು ನಿರಾಕರಿಸಿದ್ದರು. ಅದು ಸುಖೀರಾಜ್ಯದ ನಿರ್ಮಾಣಕ್ಕಾಗಿ ಮೀಸಲಿಡಬೇಕು ಎಂದಿದ್ದರು ಎಂದು ವಿವರಿಸಿದರು.
ಇನ್ನು ಇಂದು ಧರ್ಮ, ಜಾತಿ ಹೆಸರಿನಲ್ಲಿ ಜನರನ್ನು ವಿಂಗಡಿಸಲಾಗುತ್ತಿದೆ. ಸಮುದಾಯದ ಸಾಮರಸ್ಯವನ್ನು ಹಾಳು ಮಾಡಲಾಗುತ್ತಿದೆ. ಲಿಂಗತಾರತಮ್ಯ, ಮಹಿಳಾ ದೌರ್ಜನ್ಯ ಹಾಗೂ ಅಸ್ಪೃಶ್ಯತೆ ಆಚರಣೆಗಳು ಮನುಕುಲವನ್ನು ಅದೋಗತಿಗೆ ತಲುಪಿಸುತ್ತಿವೆ. ಇವೆಲ್ಲವನ್ನು ಪುನರುಜ್ಜೀವನಗೊಳಿಸಿ ಸಮಸಮಾಜ ನಿರ್ಮಾಣ ಮಾಡಲು ಅಗತ್ಯವಿರುವುದು ಬಸವಣ್ಣನ ನಿಲುವುಗಳು. ಆ ಮೂಲಕ ಸುಖೀರಾಜ್ಯದ ಸ್ಥಾಪನೆಯಾಗಲಿದೆ ಎಂದರು.
ಬುದ್ದ, ಬಸವ, ಅಂಬೇಡ್ಕರ್ ಎಂದರೆ ಆಚರಣೆಗಷ್ಟೇ ಸೀಮಿತವಲ್ಲ. ಇವರೆಲ್ಲರೂ ಬಹುದೊಡ್ಡ ಪ್ರಜಾಪ್ರಭುತ್ವವಾದಿಗಳು, ವಿಶ್ವಮಾನ್ಯತೆ ಗಳಿಸಿರುವ ಸಮಾಜ ಸುಧಾರಕರು. ವಿದೇಶದಲ್ಲಿ ನಾವು ಬುದ್ದನ ನಾಡಿನವರು ಎನ್ನುತ್ತೇವೆ. ಈ ಪರಂಪರೆಯಲ್ಲಿ ನಡೆದು ಬಂದಿರುವ ನಾವು ಈ ಮಹನೀಯರ ವಿಚಾರಗಳು ನಮ್ಮ ಸ್ವಾವಲಂಬಿ ಹಾಗೂ ಸ್ವಾಭಿಮಾನದ ಜೀವನಕ್ಕೆ ಪ್ರೇರಣಾಶಕ್ತಿಯಾಗಬೇಕಿದೆ. ಈ ಮುಖೇನ ನಾವೆಲ್ಲರೂ ಒಗ್ಗಟ್ಟಾಗಿ ನಮ್ಮ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಬಲಗೊಳಿಸಬೇಕಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಪೌರಾಡಳಿತ ಸಚಿವ ರಹೀಂಖಾನ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ.ದೇವೇಗೌಡ, ಡಿ.ರವಿಶಂಕರ್, ಕೆ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ, ಶ್ರೀವತ್ಸ, ಎಚ್.ಎಂ.ಗಣೇಶ್ ಪ್ರಸಾದ್, ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ ಅವರು ಸೇರಿದಂತೆ ಬಸವ ಬಳಗದ ಮುಖಂಡರು ಉಪಸ್ಥಿತರಿದ್ದರು.
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...