ಮೈಸೂರು: ಬಸವ ಚರಿತ್ರೆ ಎಂಬುದು ಪ್ರಜಾಪ್ರಭುತ್ವ ಸ್ಥಾಪನೆಯ ಹೋರಾಟವಾಗಿದೆ. ಬುದ್ಧ ತನ್ನ ಬಿಕ್ಕುಗಳ ಮುಖಾಂತರ ಪ್ರಜಾಪ್ರಭುತ್ವದ ಬೀಜ ಬಿತ್ತಿದರು. ಆ ಬೀಜವು ಬಸವಣ್ಣನವರ ಮೂಲಕ ಅನುಭವ ಮಂಟಪದ ರೂಪತಾಳಿ ಮೊಳಕೆ ಹೊಡೆಯಿತು. ಹೀಗೆ ಬಿತ್ತಿ ಮೊಳಕೆಯೊಡೆದ ಬೀಜವು ಡಾ.ಬಿ.ಆರ್.ಅಂಬೇಡ್ಕರ್ ಅವರ ಮುಖಾಂತರ ಮರವಾಗಿ ಬೆಳೆಯಿತು. ಆ ಮರದಲ್ಲಿ ಬೆಳೆದ ಫಲವನ್ನು ನಾವೆಲ್ಲರೂ ಇಂದು ಅನುಭವಿಸುತ್ತಿದ್ದೇವೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಇಂದು ನಗರದ ಕಲಾಮಂದಿರದಲ್ಲಿ ಬಸವ ಬಳಗಗಳ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ “ಬಸವ ಜಯಂತಿ” ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದರ ಮೂಲ ಉದ್ದೇಶ ಜನರು ತಮಗೆ ಬೇಕಾದಂತೆ ಬದುಕನ್ನು ಬದುಕಲು ಹಾಗೂ ಆಡಳಿತ ವ್ಯವಸ್ಥೆಯಲ್ಲಿ ಜನಪರ ಯೋಜನೆ ಜಾರಿ ಮಾಡಿ ಸಮಸಮಾಜದ ನಿರ್ಮಾಣದ ಕಡೆಗೆ ನಾವು ಸಾಗಬೇಕಿದೆ. ನಮ್ಮ ದೇಶದ ಸಾಮಾಜಿಕ ಅಸಮಾನತೆ, ವರ್ಣಾಶ್ರಮದ ನೀತಿಗಳು, ಲಿಂಗತಾರತಮ್ಯ, ಜಾತೀಯತೆ ಮತ್ತು ಅಸ್ಪೃಶ್ಯತೆ ಇಡೀ ಮಾನವ ಕುಲಕ್ಕೆ ಅಂಟಿದ ಕಳಂಕವಾಗಿದೆ. ಈ ಎಲ್ಲಾ ತಾರತಮ್ಯಗಳ ವಿರುದ್ದವಾಗಿ ಬಸವಣ್ಣನವರು ತಮ್ಮ ಪ್ರಬಲವಾದ ಹೋರಾಟ ಮತ್ತು ನಿಲುವುಗಳ ಮೂಲಕ ನಿರ್ಮೂಲನೆ ಕಾರ್ಯಕ್ಕೆ ಮುಂದಾದರು ಎಂದರು.
ಬಸವಣ್ಣ ‘ದಯೆ ಇಲ್ಲದ ಧರ್ಮ ಯಾಕೆ’ ಎಂದು ಪ್ರಶ್ನಿಸಿದ್ದಾರೆ. ಕೆಲವು ವರ್ಗದ ಜನರನ್ನು ದೇವಸ್ಥಾನಗಳ ಪ್ರವೇಶಕ್ಕೆ ನಿರಾಕರಿಸಿದಾಗ ಬಸವಣ್ಣನವರು ‘ನನ್ನ ದೇಹವೆ ದೇಗುಲ’ ಎಂಬ ಸಂದೇಶದ ಮೂಲಕ ದೇವರ ಪರಿಕಲ್ಪನೆಯನ್ನು ಜಗದಲಕ್ಕೆ ಹಾಗೂ ಆಕಾಶದೆತ್ತರಕ್ಕೆ ವಿಸ್ತಿರಿಸಿದರು. ಈ ಬಗೆಯ ಉದಾತ್ತ ಕಲ್ಪನೆ ಹೊಂದಿರುವ ಬಸವ ತತ್ವದ ಅನುಯಾಯಿಗಳು ಅವರನ್ನು ಹೊಗಳುತ್ತ ಕೂರಬಾರದು ಎಂದು ಕಿವಿಮಾತು ಹೇಳಿದರು.
ಬಸವಣ್ಣನವರನ್ನು ನಮ್ಮ ಸರ್ಕಾರವು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ನಾವು ಸಾಂಸ್ಕೃತಿಕವಾಗಿ ಬಲಾಢ್ಯರಾಗದಿದ್ದರೆ ಬಲಿಷ್ಠವಾದ ಸಮಾಜ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಬಿಜ್ಜಳನ ಆಸ್ಥಾನದಲ್ಲಿ ಒಂದು ಭಾಗದ ನಿಧಿಯನ್ನು ಕೊಡುವುದಾಗಿ ಹೇಳಿದಾಗ, ಅರ್ಥ ಸಚಿವರಾಗಿ ಬಸವಣ್ಣ ಅದನ್ನು ನಿರಾಕರಿಸಿದ್ದರು. ಅದು ಸುಖೀರಾಜ್ಯದ ನಿರ್ಮಾಣಕ್ಕಾಗಿ ಮೀಸಲಿಡಬೇಕು ಎಂದಿದ್ದರು ಎಂದು ವಿವರಿಸಿದರು.
ಇನ್ನು ಇಂದು ಧರ್ಮ, ಜಾತಿ ಹೆಸರಿನಲ್ಲಿ ಜನರನ್ನು ವಿಂಗಡಿಸಲಾಗುತ್ತಿದೆ. ಸಮುದಾಯದ ಸಾಮರಸ್ಯವನ್ನು ಹಾಳು ಮಾಡಲಾಗುತ್ತಿದೆ. ಲಿಂಗತಾರತಮ್ಯ, ಮಹಿಳಾ ದೌರ್ಜನ್ಯ ಹಾಗೂ ಅಸ್ಪೃಶ್ಯತೆ ಆಚರಣೆಗಳು ಮನುಕುಲವನ್ನು ಅದೋಗತಿಗೆ ತಲುಪಿಸುತ್ತಿವೆ. ಇವೆಲ್ಲವನ್ನು ಪುನರುಜ್ಜೀವನಗೊಳಿಸಿ ಸಮಸಮಾಜ ನಿರ್ಮಾಣ ಮಾಡಲು ಅಗತ್ಯವಿರುವುದು ಬಸವಣ್ಣನ ನಿಲುವುಗಳು. ಆ ಮೂಲಕ ಸುಖೀರಾಜ್ಯದ ಸ್ಥಾಪನೆಯಾಗಲಿದೆ ಎಂದರು.

ಬುದ್ದ, ಬಸವ, ಅಂಬೇಡ್ಕರ್ ಎಂದರೆ ಆಚರಣೆಗಷ್ಟೇ ಸೀಮಿತವಲ್ಲ. ಇವರೆಲ್ಲರೂ ಬಹುದೊಡ್ಡ ಪ್ರಜಾಪ್ರಭುತ್ವವಾದಿಗಳು, ವಿಶ್ವಮಾನ್ಯತೆ ಗಳಿಸಿರುವ ಸಮಾಜ ಸುಧಾರಕರು. ವಿದೇಶದಲ್ಲಿ ನಾವು ಬುದ್ದನ ನಾಡಿನವರು ಎನ್ನುತ್ತೇವೆ. ಈ ಪರಂಪರೆಯಲ್ಲಿ ನಡೆದು ಬಂದಿರುವ ನಾವು ಈ ಮಹನೀಯರ ವಿಚಾರಗಳು ನಮ್ಮ ಸ್ವಾವಲಂಬಿ ಹಾಗೂ ಸ್ವಾಭಿಮಾನದ ಜೀವನಕ್ಕೆ ಪ್ರೇರಣಾಶಕ್ತಿಯಾಗಬೇಕಿದೆ. ಈ ಮುಖೇನ ನಾವೆಲ್ಲರೂ ಒಗ್ಗಟ್ಟಾಗಿ ನಮ್ಮ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಬಲಗೊಳಿಸಬೇಕಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಪೌರಾಡಳಿತ ಸಚಿವ ರಹೀಂಖಾನ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ.ದೇವೇಗೌಡ, ಡಿ.ರವಿಶಂಕರ್, ಕೆ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ, ಶ್ರೀವತ್ಸ, ಎಚ್.ಎಂ.ಗಣೇಶ್ ಪ್ರಸಾದ್, ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ ಅವರು ಸೇರಿದಂತೆ ಬಸವ ಬಳಗದ ಮುಖಂಡರು ಉಪಸ್ಥಿತರಿದ್ದರು.
Related


You Might Also Like
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...