NEWSನಮ್ಮಜಿಲ್ಲೆನಮ್ಮರಾಜ್ಯ

BBMP ಪೂರ್ವ ವಲಯ: ಪಾದಚಾರಿ ಮಾರ್ಗ ಒತ್ತುವರಿ, ಪ್ಲೆಕ್ಸ್ ಬ್ಯಾನರ್ ತೆರವು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪೂರ್ವ ವಲಯದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಹಾಗೂ ಅನಧಿಕೃತವಾಗಿ ಅಳವಡಿಸಿದ್ದ ಫ್ಲೆಕ್ಸ್ ಬ್ಯಾನರ್‌ಗಳನ್ನು ನಿರಂತರವಾಗಿ ತೆರವುಗೊಳಿಸಲಾಗುತ್ತಿದೆ ಎಂದು ಬಿಬಿಎಂಪಿ ಪೂರ್ವ ವಲಯ ಆಯುಕ್ತೆ ಸ್ನೇಹಲ್ ಆರ್. ತಿಳಿಸಿದ್ದಾರೆ.

ಅಂಗಡಿ-ಮುಂಗಟ್ಟುಗಳು ಹಾಗೂ ಬೀದಿಬದಿ ವ್ಯಾಪಾರಿಗಳು ಪಾದಚಾರಿ ಮಾರ್ಗವನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವುದು ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ.

ಪಾದಚಾರಿ ಒತ್ತುವರಿ ತೆರವು: ಅದರಂತೆ ಇಂದು ಪೂರ್ವ ವಲಯದ ಸಿ. ವಿ. ರಾಮನ್ ನಗರ ವ್ಯಾಪ್ತಿಯ ವಾರ್ಡ್ ಸಂಖ್ಯೆ:109, ಹಳೇ ವಾರ್ಡ್ ಸಂಖ್ಯೆ: 50 ರ ಕಸ್ತೂರಿನಗರದ 2ನೇ ಮುಖ್ಯರಸ್ತೆಯಲ್ಲಿ ಪಾದಚಾರಿ ರಸ್ತೆಗಳ ಮೇಲಿದ್ದ ತಳ್ಳುಗಾಡಿಗಳನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಯಿತು.

ಫ್ಲೆಕ್ಸ್ ಬ್ಯಾನರ್ ಗಳ ತೆರವು: ಸಿ.ವಿ.ರಾಮನ್ ನಗರ ವ್ಯಾಪ್ತಿಯ ವಾರ್ಡ್ ಸಂಖ್ಯೆ:109, ಹಳೇ ವಾರ್ಡ್ ಸಂಖ್ಯೆ: 50 ರ ಕಸ್ತೂರಿನಗರದ 2ನೇ ಮುಖ್ಯ ರಸ್ತೆಯಲ್ಲಿ ಅನಧಿಕೃತವಾಗಿ ಅಳವಡಿಸಲಾಗಿದ್ದ ಬ್ಯಾನರ್ ಗಳನ್ನು ಸಹ ತೆರವುಗೊಳಿಸಲಾಯಿತು.

ಈ ವೇಳೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ ಅಭಿಯಂತರರು, ಆರೋಗ್ಯ ಪರಿವೀಕ್ಷಕರು ಸೇರಿದಂತೆ ಇನ್ನಿತರರು ಇದ್ದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ